ಜಾಗೀರನಂದಿಹಾಳ ಜನರಿಗೆ ಬಸಿ ನೀರಿನ ಬಿಸಿ!


Team Udayavani, Oct 22, 2019, 3:30 PM IST

rc-tdy-1

ಲಿಂಗಸುಗೂರು: ತಾಲೂಕಿನ ಜಾಗೀರ ನಂದಿಹಾಳ ಗ್ರಾಮದಲ್ಲಿ ಬಸಿ ನೀರಿನಿಂದಾಗಿ ಗ್ರಾಮಸ್ಥರು ನೂರೆಂಟು ಸಮಸ್ಯೆ ಎದುರಿಸುವಂತಾಗಿದೆ.

ಚಿತ್ತಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಾಗೀರ ನಂದಿಹಾಳ ಗ್ರಾಮ ತಗ್ಗು ಪ್ರದೇಶದಲ್ಲಿದೆ. ಗ್ರಾಮದಲ್ಲಿ 170ಕ್ಕೂ ಹೆಚ್ಚು ಮನೆಗಳಿವೆ. ಈ ಪೈಕಿ ಸುಮಾರು 90ಕ್ಕೂ ಅಧಿಕ ಮನೆಗಳಲ್ಲಿ ನೀರು ಬಸಿಯುತ್ತತ್ತಿದ್ದು, ಗ್ರಾಮಸ್ಥರು ನಿತ್ಯ ಸಮಸ್ಯೆ ಎದುರಿಸುವಂತಾಗಿದೆ.

ಗ್ರಾಮಕ್ಕೆ ಹೊಂದಿಕೊಂಡು ಹಳ್ಳವಿದೆ. ಅಲ್ಲದೇ ರಾಂಪುರ ಏತ ನೀರಾವರಿ ಯೋಜನೆಯ ನಾಲೆ ನಿರ್ಮಿಸಲಾಗಿದೆ. ನಾಲೆಯಲ್ಲಿ ನೀರಿದ್ದಾಗ ಮತ್ತು ನಿರಂತರ ಮಳೆ ಸುರಿಯಲು ಆರಂಭಿಸಿದರೆ ಗ್ರಾಮದ 90ಕ್ಕೂ ಹೆಚ್ಚು ಮನೆಗಳ ಗೋಡೆಗಳಿಂದ ನೀರು ಚಿಮ್ಮುತ್ತಿದೆ. ಇದರಿಂದ ಮನೆ ಒಳಗೆ ಮತ್ತು ಅಂಗಳದಲ್ಲಿ ನೀರು ನಿಲ್ಲುತ್ತದೆ. ಮನೆಯೊಳಗೆ ಎರಡು ಅಡಿವರೆಗೂ ನೀರು ಸಂಗ್ರಹವಾಗುತ್ತದೆ. ನಿವಾಸಿಗಳು ಈ ನೀರನ್ನು ಮೋಟಾರ್‌ ಇಲ್ಲವೇ ಬಕೆಟ್‌ ನಿಂದ ತುಂಬಿ ಹೊರಚೆಲ್ಲುವುದು ನಿತ್ಯ ಕಾಯಕವಾಗಿದೆ.

ಮನೆಯ ಗೋಡೆಗಳು ಕನಿಷ್ಠವೆಂದರೂ ಮೂರು ಅಡಿ ಎತ್ತರದವರೆಗೆ ತೇವಾಂಶ ಹೊಂದಿರುತ್ತವೆ. ಹೀಗಾಗಿ ಅನೇಕ ಮನೆಗಳ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡು ನೆಲಕ್ಕುರುಳಿವೆ. ಸ್ವಂತ ಮನೆ ಬಿಟ್ಟು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸುತ್ತಾರೆ ಬಸಿ ನೀರಿನಿಂದ ಬಾಧಿತರಾದ ಗ್ರಾಮಸ್ಥರು. ಮನೆಗಳಲ್ಲಿ ನಿಲ್ಲುವ ನೀರನ್ನು ನಿವಾಸಿಗಳು ಹೊರ ಚೆಲ್ಲುವುದರಿಂದ ಮತ್ತು ರಸ್ತೆಗಳಲ್ಲೂ ಬಸಿ ನೀರು ನಿಲ್ಲುವುದರಿಂದ ರಸ್ತೆಗಳು ಕೆಸರುಗದ್ದೆಯಂತಾಗಿದೆ.  ಜನ, ವಾಹನ ಸಂಚಾರಕ್ಕೆ ಪರದಾಡುವಂತಾಗಿದೆ.

ಇನ್ನು ಗ್ರಾಮದಲ್ಲಿನ ಚರಂಡಿ ಸ್ವತ್ಛ ಮಾಡದ್ದರಿಂದ ರಸ್ತೆಗಳಲ್ಲಿ ನೀರು ನಿಲ್ಲುವುದರಿಂದ ಸೊಳ್ಳೆ ಹಾವಳಿ ಹೆಚ್ಚಿದೆ. ಡೆಂಘೀ, ಚಿಕೂನ್‌ ಗುನ್ಯಾ ಸೇರಿ ವಿವಿಧ ಸಾಂಕ್ರಾಮಿಕ ರೋಗ ಭೀತಿ ಗ್ರಾಮಸ್ಥರನ್ನು ಕಾಡುತ್ತಿದೆ. ಸದಾ ತೇವಾಂಶದಿಂದಾಗಿ ಗ್ರಾಮಸ್ಥರಿಗೆ ಚರ್ಮರೋಗ ಕೂಡ ಕಾಡುತ್ತಿದೆ. ಇಷ್ಟೆಲ್ಲ ಸಮಸ್ಯೆಯಿದ್ದರೂ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ. ಗ್ರಾಮವನ್ನು ತಾತ್ಸಾರದಿಂದ ಕಾಣುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ಬಸಿ ನೀರಿನ ಸಮಸ್ಯೆ ಇಂದು, ನಿನ್ನೆಯದಲ್ಲಾ ಇದು ರಾಂಪುರ ಏತ ನೀರಾವರಿ ಯೋಜನೆ ಪ್ರಾರಂಭವಾದಾಗಿನಿಂದ ಗ್ರಾಮಸ್ಥರನ್ನು ಕಾಡುತ್ತಿದೆ. ತಾಲೂಕು ಕೇಂದ್ರದಿಂದ 16 ಕಿ.ಮೀ. ದೂರವಿರುವ ಈ ಗ್ರಾಮದ ಸಮಸ್ಯೆ ಪರಿಹರಿಸುವಲ್ಲಿ ತಾಲೂಕು ಆಡಳಿತವೂ ನಿರ್ಲಕ್ಷ ವಹಿಸಿದೆ ಎನ್ನುತ್ತಾರೆ ಗ್ರಾಮಸ್ಥರು.

 

-ಶಿವರಾಜ ಕೆಂಬಾವಿ

ಟಾಪ್ ನ್ಯೂಸ್

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.