ಲೇಔಟ್‌-ನಿವೇಶನ ಬಗ್ಗೆ ಎಚ್ಚರ ವಹಿಸಿ: ಅಮರೇಗೌಡ


Team Udayavani, Jan 29, 2022, 5:51 PM IST

22lyaout

ಸಿಂಧನೂರು: ನಗರ ವ್ಯಾಪ್ತಿಯ ಕೆಲವು ಲೇಔಟ್‌ಗಳಲ್ಲಿ ಶೇ.40ರಷ್ಟು ನಿವೇಶನ ಬಿಡುಗಡೆಯಾಗಿಲ್ಲ. ಅಂತಹ ಕಡೆಗಳಲ್ಲಿ ಜಾಗ ಖರೀದಿಸುವ ಮುನ್ನ ಸಾರ್ವಜನಿಕರು ಎಚ್ಚರವಹಿಸಬೇಕು ಎಂದು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರೂಪಾಪುರ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಫೆಬ್ರವರಿ 2, 2005ರಿಂದ ಸೆಪ್ಟೆಂಬರ್‌ 10, 2015ರ ತನಕ 42 ಲೇಔಟ್‌ಗಳಲ್ಲಿ ಶೇ.40ರಷ್ಟು ನಿವೇಶನ ಬಿಡುಗಡೆಯಾಗಿಲ್ಲ. ಇಂತಹ ಲೇಔಟ್‌ಗಳಲ್ಲಿ ಯಾರಾದರೂ ಜಾಗ ಖರೀದಿಸುವ ಮುನ್ನ ಗಮನಿಸಬೇಕು. ಹೀಗಾಗಿ, ಸಾರ್ವಜನಿಕರ ಹಿತದೃಷ್ಟಿಯಿಂದ ಮಾಹಿತಿ ಬಹಿರಂಗಪಡಿಸಲಾಗುತ್ತಿದೆ ಎಂದರು.

ಹರಾಜಿಗೆ ಆದೇಶವಾಗಬಹುದು

ಶೇ.60/40ರ ಅನುಪಾತದಲ್ಲಿ ಈ ಮೊದಲು ಪರಿವರ್ತನೆಯಾದ ಲೇಔಟ್‌ಗಳಲ್ಲಿ ನಿವೇಶನ ಬಿಡುಗಡೆಗೆ ಅವಕಾಶವಿತ್ತು. ನಂತರ ಬದಲಾಗಿತ್ತು. 2005ರ ಹಿಂದೆ ಸೌಲಭ್ಯ ಅಭಿವೃದ್ಧಿ ಪಡಿಸಿದವರಿಗೆ ಶೇ.20ರಷ್ಟು ದಂಡ ಹಾಕಲು ಆದೇಶವಿತ್ತು. ಪ್ರಕರಣ ಕೋರ್ಟ್‌ ಮೆಟ್ಟಿಲೇರಿತ್ತು. ಆಗ ಒಂದು ವರ್ಷ ಅವಕಾಶ ನೀಡಲಾಗಿತ್ತು. 2019ರ ನಂತರದಲ್ಲಿ ಶೇ.40ರಷ್ಟು ನಿವೇಶನ ಬಿಡುಗಡೆ ಮಾಡಿಕೊಳ್ಳಲು ಎಲ್ಲ ಸೌಲಭ್ಯ ಹೊಂದಿರಬೇಕು ಎಂದು ಸೂಚಿಸಲಾಗಿತ್ತು. ಯಾವುದೇ ದಂಡ ಇರಲಿಲ್ಲ. ಆದರೂ, ಇದನ್ನು ಸದ್ಬಳಕೆ ಮಾಡಿಕೊಂಡಿಲ್ಲ. ಬಳಿಕ ಶೇ.3ರಷ್ಟು, ಈಗ ಶೇ.9ರಷ್ಟು ದಂಡ ಹಾಕಲು ಅವಕಾಶವಿದೆ. ನಿಯಮ ಉಲ್ಲಂಘಿಸಿದರೆ, ಅಂತಹ ನಿವೇಶನಗಳನ್ನು ಹರಾಜು ಹಾಕಿ ಸೌಲಭ್ಯ ಕಲ್ಪಿಸಲು ಆದೇಶವಾಗಬಹುದು ಎಂದರು.

ಎಲ್ಲ ವಿವರ ಜನರ ಮುಂದೆ

ಸಾರ್ವಜನಿಕರಿಗೆ ಗೊತ್ತಾಗಲಿ ಎಂಬ ಕಾರಣಕ್ಕೆ ಲೇಔಟ್‌ ಮಾಲೀಕರ ಹೆಸರು, ಸರ್ವೇ ನಂಬರ್‌, ನಿವೇಶನಗಳ ಸಂಖ್ಯೆ ನೀಡಲಾಗಿದೆ. ಕೆಲವರು ನಗರಸಭೆಯಿಂದ ಫಾರಂ.3 ತಂದಿದ್ದರು. ಇಲ್ಲಿ ಪರಿಶೀಲನೆಗೆ ಕೊಟ್ಟಾಗ ಅವು ಬಿಡುಗಡೆಯಾಗದ ನಿವೇಶನವಾದ ಹಿನ್ನೆಲೆಯಲ್ಲಿ ನಿರಾಕ್ಷೇಪಣಾ ಪತ್ರ ಕೊಡಲಿಲ್ಲ. ಇಂತಹ ಸಮಸ್ಯೆಗಳನ್ನು ಉದ್ಭವ ಆಗಬಾರದು. ರಸ್ತೆ, ಕುಡಿವ ನೀರು, ವಿದ್ಯುತ್‌ ಸಂಪರ್ಕ ಸೇರಿ ಇತರ ಸೌಲಭ್ಯ ಕಲ್ಪಿಸಿ, ಶೇ.40ರಷ್ಟು ನಿವೇಶನ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದರು.

ಜೊತೆಗೆ ಇದೇ ವೇಳೆ ನಗರ ಯೋಜನಾ ಪ್ರಾಧಿಕಾರದಿಂದ ಸಿದ್ಧಪಡಿಸಿದ ಪ್ರಕಟಣೆ ಬಿಡುಗಡೆ ಮಾಡಿದರು. ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾದ ಜಡಿಯಪ್ಪ ಹೂಗಾರ್‌, ನಂದಿನಿ ಮೇರನಾಳ, ರೇಣುಕಪ್ಪ ಬಸಾಪುರ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.