ಲೋಕಸಭೆ ಚುನಾವಣೆ ಬಹಿಷ್ಕರಿಸುವ ಎಚ್ಚರಿಕೆ


Team Udayavani, Mar 22, 2019, 11:23 AM IST

ray-1.jpg

ಮುದಗಲ್ಲ: ಸಮೀಪದ ತಲೇಖಾನ್‌ ಗ್ರಾಪಂ ವ್ಯಾಪ್ತಿಯ ವಿವಿಧ ತಾಂಡಾ, ದೊಡ್ಡಿಗಳಲ್ಲಿ ಕುಡಿಯುವ ನೀರು, ರಸ್ತೆ, ಸಾರಿಗೆ, ಅಂಗನವಾಡಿ, ಆರೋಗ್ಯ ಕೇಂದ್ರ, ಉದ್ಯೋಗ ಸೇರಿ ಕನಿಷ್ಠ ಸೌಲಭ್ಯ ಸಿಗದ್ದಕ್ಕೆ 2019ರ ಲೋಕಸಭೆ ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ತಲೇಖಾನ್‌ ಗ್ರಾಪಂ ವ್ಯಾಪ್ತಿಯ ರಾಮಪ್ಪನ ತಾಂಡಾ, ವೇಣ್ಯಪ್ಪನ ತಾಂಡಾ, ಮೀಸೆ ಖೀರೆಪ್ಪನ ತಾಂಡಾ, ಲಿಂಬೆಪ್ಪನ ತಾಂಡಾ, ಸೋಂಪುರು ತಾಂಡಾ ಹಾಗೂ ಸೋಂಪುರ ಗೊಲ್ಲರಹಟ್ಟಿ ಸೇರಿ ವಿವಿಧ ತಾಂಡಾ, ದೊಡ್ಡಿ ನಿವಾಸಿಗಳು ಮೂಲ ಸೌಕರ್ಯಗಳಿಲ್ಲದೇ ಪರದಾಡುವಂತಾಗಿದೆ. 

ಗೊಲ್ಲರಹಟ್ಟಿ: ಸುಮಾರು 30 ಕುಟುಂಬಗಳು ವಾಸಿಸುವ ಗೊಲ್ಲರಹಟ್ಟಿಯಲ್ಲಿ 2012-13ರಲ್ಲಿ ಕಿರು ನೀರು ಸರಬರಾಜು ಯೋಜನೆ ಜಾರಿಗೆ ತರಲಾಗಿದೆ. ಬೋರ್‌ನಲ್ಲಿ ಅಂತರ್ಜಲ ಕುಸಿದಿದ್ದರಿಂದ ನೀರಿನ ಸಮಸ್ಯೆ ಎದುರಾಗಿದೆ. ಕಳೆದ ಎರಡು ವರ್ಷಗಳಿಂದ ನೀರಿಗಾಗಿ ಹಲವು ಬಾರಿ ಅಂಗಲಾಚಿದರೂ ಯಾವುದೇ ಪ್ರಯೋಜನವಾಗಿಲ್ಲ. ಕುಡಿಯುವ ನೀರಿಗೆ ಕಿಲೋ ಮೀಟರ್‌ ಅಲೆದು ತರಬೇಕಿದೆ ಎನ್ನುತ್ತಾರೆ ಗ್ರಾಪಂ ಮಾಜಿ ಸದಸ್ಯ ಹನುಮಂತ ಗೊಲ್ಲರ.

ಸರಿಯಾದ ರಸ್ತೆ ಇಲ್ಲದ್ದರಿಂದ ಯಾವುದೇ ವಾಹನ ಇಲ್ಲಿಗೆ ಬರುವುದಿಲ್ಲ. ರಾತ್ರಿ ಯಾರಾದರೂ ಅನಾರೋಗ್ಯಕ್ಕೀಡಾದರೆ
ಆ್ಯಂಬುಲನ್ಸ್‌, ಖಾಸಗಿ ವಾಹನಗಳೂ ಬರುವುದಿಲ್ಲ ಎಂದು ಅಳಲು ತೋಡಿಕೊಳ್ಳುತ್ತಾರೆ ಗೊಲ್ಲರಹಟ್ಟಿಯ ಯಂಕಪ್ಪ, ಮೌನೇಶ, ಪರಸಪ್ಪ. 

ನೀರಿನ ಸಮಸ್ಯೆ: ತಾಂಡಾಗಳಲ್ಲಿ ನೀರಿಗಾಗಿ ಲಕ್ಷಾಂತರ ರೂ. ವ್ಯಯಿಸಿದರೂ ಜನರಿಗೆ ಹನಿ ನೀರು ಸಿಕ್ಕಿಲ್ಲ. ಲಿಂಬೆಪ್ಪನ ತಾಂಡಾ, ರೂಪಚಂದ್ರಪ್ಪನ ತೋಟ, ಮೀಸೆ ಖೀರೆಪ್ಪನ ತಾಂಡಾ ಹಾಗೂ ರಾಮಪ್ಪನ ತಾಂಡಾಗಳಿಗೆ ನೀರು ಒದಗಿಸುವ ಯೋಜನೆ ರೂಪಿಸಿ ರಾಮಪ್ಪನ ತಾಂಡಾ ಹೊರವಲಯದಲ್ಲಿ ನೀರು ಸಂಗ್ರಹ ತೊಟ್ಟಿ ನಿರ್ಮಿಸಲಾಗಿದೆ. ಮೂರು ವರ್ಷವಾದರೂ ಯೋಜನೆ ಪೂರ್ಣಗೊಂಡಿಲ್ಲ. 20 ಮನೆಗಳಿರುವ ರೂಪಚಂದ್ರಪ್ಪನ ತೋಟಕ್ಕೆ ಇಲಾಖೆ ಅಧಿಕಾರಿಗಳೇ ಕಿರು ನೀರು ಸರಬರಾಜು ಯೋಜನೆಯಡಿ ಮೀಸೆ ಖೀರೆಪ್ಪನ ತಾಂಡಾದಿಂದ ಪೈಪಲೈನ್‌ ಮಾಡಿಸಿ ಗುಮ್ಮಿ ಅಳವಡಿಸಿದ್ದಾರೆ. ಆದರೆ ಅದಕ್ಕೆ ಹನಿ ನೀರು ಸರಬರಾಜಾಗಿಲ್ಲ. ನೀರಿನ ಬವಣೆ ತಪ್ಪಿಲ್ಲ ಎನ್ನುತ್ತಾರೆ. ರಾಮಪ್ಪನ ತಾಂಡಾದ ಕಾಮಣ್ಣ ನಾಯ್ಕ, ಶೇಟಪ್ಪ ನಾಯ್ಕ, ಮಾನಪ್ಪ, ರಾಜು.

 ರಸ್ತೆ ಕಾಮಗಾರಿ ನನೆಗುದಿಗೆ: ರಾಮಜಿ ನಾಯ್ಕ ತಾಂಡಾ-ಹಡಗಲಿ ರಸ್ತೆಯನ್ನು ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ಅಭಿವೃದ್ಧಿ ಮಾಡಲಾಗುತ್ತಿದೆ. ರಸ್ತೆ ಕಾಮಗಾರಿ ಆರಂಭಿಸಿದ ಗುತ್ತಿಗೆದಾರರು ಮರಂ ಹಾಕಿ ಎರಡು ವರ್ಷವಾದರೂ ಇತ್ತಕಡೆ ಬಂದಿಲ್ಲ. ರಸ್ತೆ ಕಾಮಗಾರಿಯಿಂದಾಗಿ ಒಡೆದ ನೀರು ಪೂರೈಕೆ ಪೈಪ್‌ಗ್ಳನ್ನು ನೀರಗಂಟಿಗಳು ಜೆಸಿಬಿ ಮೂಲಕ ರಸ್ತೆ ಅಗೆದು ಪೈಪ್‌ಗ್ಳನ್ನು ದುರಸ್ತಿಗೊಳಿಸಿ ನೀರು ಪೂರೈಸುತ್ತಿದ್ದಾರೆ. ಆದರೆ ಪೈಪ್‌ಲೈನ್‌ ಸೋರಿಕೆಯಿಂದಾಗಿ ಸರಿಯಾಗಿ ನೀರು ತಲುಪುತ್ತಿಲ್ಲ. ಇದೇ ರಸ್ತೆಯಲ್ಲಿ ಬರುವ ಎರಡು ಹಳ್ಳಗಳಿಗೆ ಆಡ್‌ಪಾತ್‌
(ಸೇತುವೆ ನಿರ್ಮಿಸ) ನಿರ್ಮಿಸಬೇಕು. ಹಡಗಲಿಯಲ್ಲಿ ಮನೆಗಳನ್ನು ತೆರವುಗೊಳಿಸಿ ರಸ್ತೆ ಅಗಲೀಕರಣ ಮಾಡಬೇಕು ಎಂಬ ಬೇಡಿಕೆ ಈಡೇರಿಲ್ಲ.

ಅಂಗನವಾಡಿ ಇಲ್ಲ: ಮೀಸೆ ಖೀರೆಪ್ಪನ ತಾಂಡಾದಲ್ಲಿ ಅಂಗನವಾಡಿ ಕೇಂದ್ರ ತೆರೆಯುವಂತೆ ಇಲಾಖೆಗೆ, ಚುನಾಯಿತ ಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಗಮನ ಹರಿಸಿಲ್ಲ. ಇಲ್ಲಿನ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಪೌಷ್ಟಿಕ ಆಹಾರ ಇಲ್ಲದೇ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

ಹಾಳಾದ ರಸ್ತೆ: ಹಡಗಲಿ-ವೇಣ್ಯಪ್ಪನ ತಾಂಡಾ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ಮಾಡಿ ವರ್ಷವಾದರೂ ಕಾಮಗಾರಿ ಆರಂಭವಾಗಿಲ್ಲ, ಗ್ರಾಪಂದಲ್ಲಿ ತಾಂಡಾದ ಜನರು ಯಾವುದೇ ಯೋಜನೆ ಲಾಭ ಪಡೆಯಲು ಆಗುತ್ತಿಲ್ಲ. ಗ್ರಾಪಂ ಸಿಬ್ಬಂದಿ ಜಾತಿ ಆಧಾರದ ಮೇರೆ ಕೆಲಸ ಮಾಡುತ್ತಾರೆ ಎಂದು ತಾಂಡಾ ನಿವಾಸಿಗಳು ದೂರಿದ್ದಾರೆ. 

ಚುನಾವಣೆ ಬಂದಾಗ ನೆನಪಾಗುವ ತಾಂಡಾ-ದೊಡ್ಡಿಗಳು, ಗೊಲ್ಲರಹಟ್ಟಿಗಳು ಸರಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸುವಾಗ ನೆನಪಾಗುವುದಿಲ್ಲ, ಮತಯಾಚಿಸಲು ಮನೆ ಬಾಗಿಲಿಗೆ ಕೈ ಮುಗಿದು ಬರುವ ರಾಜಕಾರಣಿಗಳು ಗೆದ್ದ ನಂತರ ನಾವು ಅವರ ಮನೆ ಬಾಗಿಲಿಗೆ ಹೋದರೂ ಮಾತನಾಡಿಸುವುದಿಲ್ಲ. ಸಂಸದರಂತೂ ಈ ಭಾಗದ ಹಳ್ಳಿಗಳನ್ನೇ ನೋಡಿಲ್ಲ ಎನ್ನುತ್ತಾರೆ ಲಿಂಬೆಪ್ಪನ ತಾಂಡಾದ ಧರ್ಮಣ್ಣ ನಾಯ್ಕ. ಇಂತಹ ಹತ್ತು ಹಲವು ಸಮಸ್ಯೆಗಳಿಂದ ಬೇಸತ್ತ ನಿವಾಸಿಗಳು ಈ ಬಾರಿ ಲೋಕಸಭೆ ಚುನಾವಣೆ ಬಹಿಷ್ಕರಿಸಲು ಮುಂದಾಗಿದ್ದಾರೆ.

„ದೇವಪ್ಪ ರಾಠೊಡ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.