ಜೇನು ಕೃಷಿ ಲಾಭದಾಯಕ ಉದ್ದಿಮೆ


Team Udayavani, Aug 21, 2017, 3:01 PM IST

bee.jpg

ಲಿಂಗಸುಗೂರು: ತಾಲೂಕಿನ ನಾಗರಹಾಳ ಗ್ರಾಮದಲ್ಲಿ ವಿಶ್ವ ಜೇನು ಕೃಷಿ ದಿನಾಚರಣೆ ಹಾಗೂ ಸೂರ್ಯಕಾಂತಿ ಬೆಳೆ
ಕ್ಷೇತ್ರೋತ್ಸವ ಕಾರ್ಯಕ್ರಮ ನಡೆಯಿತು. ಕೃಷಿ ವಿಸ್ತರಣಾ ಘಟಕದ ಮುಖಂಡ ಡಾ| ಶ್ಯಾಮರಾವ್‌ ಕುಲಕರ್ಣಿ ಮಾತನಾಡಿ, ಜೇನು ಕೃಷಿ ಎಲ್ಲ ಪ್ರದೇಶಗಳ ಉಪ ಕಸುಬಾಗಿ ಅಥವಾ ಮುಖ್ಯ ಕಸುಬಾಗಿ ಕಡಿಮೆ ಬಂಡವಾಳದಿಂದ ನಿರ್ವಹಿಸಬಹುದಾದ ಒಂದು ಲಾಭಾದಾಯಕ ಉದ್ದಿಮೆಯಾಗಿದೆ. ಜೇನು ಕೃಷಿಗೆಂದೇ ಪ್ರತ್ಯೇಕ ಜಮೀನು, ನೀರು, ವಿದ್ಯುತ್ಛಕ್ತಿಯ ಅವಶ್ಯಕತೆ ಇಲ್ಲ. ಅಲ್ಲದೆ ಈ ಉದ್ದಿಮೆಯು ಅರಣ್ಯ, ಕೃಷಿ ಪಶುಪಾಲನೆ ಮುಂತಾದ ಯಾವುದೇ ಸಮ್ಮಿಶ್ರ ಕೃಷಿ ಪದ್ಧತಿಗಳ ಸಂಪನ್ಮೂಲಗಳಿಗೆ ಸ್ಪರ್ಧೆಯೊಡ್ಡದೇ, ನಿಸರ್ಗದಲ್ಲಿ ವ್ಯರ್ಥವಾಗಬಹುದಾದ ಸಂಪನ್ಮೂಲಗಳಾದ ಪರಾಗ ಮತ್ತು ಮಕರಂದವನ್ನು ಬಳಸಿಕೊಂಡು ಕೃಷಿಕರಿಗೆ ಲಾಭವನ್ನು ತಂದುಕೊಡುತ್ತದೆ. ಸುಲಭ ತಾಂತ್ರಿಕತೆ ಇರುವ ಇದನ್ನು ಆಸಕ್ತಿ ಇರುವ ಯಾರು ಬೇಕಾದರೂ ಮಾಡಬಹುದು ಎಂದು ಹೇಳಿದರು. ಜೇನು ಕುಟುಂಬದ ಮುಖ್ಯ ಉತ್ಪನ್ನವಾದ ಜೇನುತುಪ್ಪವು ಹಲವಾರು ಔಷಧಿ ಗುಣಗಳನ್ನು ಹೊಂದಿದ್ದು, ಇದರ ನಿಯಮಿತ ಸೇವನೆ ಆರೋಗ್ಯ ವರ್ಧಿಸುತ್ತದೆ. ಜೇನುಗೂಡಿನಿಂದ ದೊರೆಯಬಹುದಾದ ಇನ್ನಿತರ ಉತ್ಪನ್ನಗಳಾದ ಮೇಣ, ಜೇನುಅಂಟು, ಜೇನು ವಿಷ, ಪರಾಗ, ಮುಂತಾದವು ಕೂಡಾ ಕೃಷಿಕರ ಆದಾಯ ಹೆಚ್ಚಿಸುವಲ್ಲಿ ಸಹಕಾರಿಯಾಗಬಲ್ಲವು ಎಂದರು. ರಾಷ್ಟ್ರೀಯ ಎಣ್ಣೆಕಾಳು ಹಾಗೂ ತಾಳೆ ಬೆಳೆ ಯೋಜನೆ ಅಡಿಯಲ್ಲಿ ಸೂರ್ಯಕಾಂತಿ ಉತ್ಪಾದಕತೆ ಹೆಚ್ಚಿಸುವ ಪ್ರಾತ್ಯಕ್ಷಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಇಲ್ಲಿ ಕೃಷಿ ವಿಶ್ವವಿದ್ಯಾಲಯದಲ್ಲಿ ಬಿಡುಗಡೆಗೊಂಡ ಆಧುನಿಕ ತಂತ್ರಜ್ಞಾನಗಳಾದ ಸುಧಾರಿತ ಸಂಕರಣ ತಳಿಗಳು, ಜೈವಿಕ ಗೊಬ್ಬರದಿಂದ ಬೀಜೋಪಚಾರ, ಸಮತೋಲಿತ ಪೋಷಕಾಂಶಗಳ ಬಳಕೆ, ಸಮಗ್ರ ಪೀಡೆ ನಿರ್ವಹಣಾ ಕ್ರಮಗಳನ್ನು ಅನುಸರಿಸಿ ಹೆಚ್ಚಿನ ಇಳುವರಿ ಪಡೆಯಲು ಸಾಧ್ಯ ಎಂದರು. ಕೀಟ ತಜ್ಞರಾದ ಡಾ| ರೇಣುಕಾ ಬಿರಾದಾರ, ಗ್ರಾಮದ ಮುಖಂಡರಾದ ಕರಿಯಪ್ಪ ಕನಕೇರಿ, ದೊಡ್ಡಪ್ಪ ರಾಂಪುರು, ಮುರುಗೇಶ, ಬಾಲಪ್ಪ ಕನಕೇರಿ, ನಿಂಗಪ್ಪ, ದ್ಯಾಮಣ್ಣ ಬಡಿಗೇರ, ಸುಭಾಶ, ಕರಿಯಪ್ಪ ಸೇರಿದಂತೆ ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.