ಬಳಗಾನೂರು: ಸ್ವಚ್ಛತೆ ಕಾಪಾಡಲು ಆಗ್ರಹ


Team Udayavani, Feb 5, 2020, 1:51 PM IST

5-Febrauary-15

ಬಳಗಾನೂರು: ಗ್ರಾಮ ಪಂಚಾಯ್ತಿಯಿಂದ ಪಟ್ಟಣ ಪಂಚಾಯ್ತಿಯಾಗಿ ಬಡ್ತಿ ಪಡೆದು ವರ್ಷಗಳೇ ಕಳೆದರೂ ಪಟ್ಟಣದಲ್ಲಿ ಸ್ವತ್ಛತೆಯತ್ತ ಮಾತ್ರ ಪಪಂ ಅಧಿಕಾರಿಗಳು, ಸಿಬ್ಬಂದಿ ಗಮನಹರಿಸುತ್ತಿಲ್ಲ.

ಕೇಂದ್ರ ಮತ್ತು ರಾಜ್ಯ ಸರಕಾರ ಸ್ವಚ್ಛತೆಗಾಗಿ, ಪರಿಸರ ಸಂರಕ್ಷಣೆಗಾಗಿ ವಿವಿಧ ಕಾರ್ಯಕ್ರಮ ರೂಪಿಸಿ ಜನರಲ್ಲಿ ಜಾಗೃತಿ ಮೂಡಿಸಲು ಸಾವಿರಾರು ಕೋಟಿ ರೂ. ವ್ಯಯಿಸುತ್ತಿದ್ದರೂ ಸುಧಾರಣೆ ಕಾಣುತ್ತಿಲ್ಲ. ಪಟ್ಟಣದಲ್ಲಿ ಸ್ವಚ್ಛತೆ, ತ್ಯಾಜ್ಯ ವಿಲೇವಾರಿ ಮಾಡದ್ದರಿಂದ ವಿವಿಧ ವಾರ್ಡ್‌ಗಳಲ್ಲಿ ಹಲವರು ಸಾಂಕ್ರಾಮಿಕ ರೋಗ, ಜ್ವರದಿಂದ ಬಳಲಿ ಚಿಕಿತ್ಸೆ ಪಡೆದಿದ್ದು, ಇದು ಡೆಂಘೀ ಜ್ವರ ಎಂಬ ಶಂಕೆ ಮೂಡಿದೆ.

ಪಟ್ಟಣದ ಎಲ್ಲ ವಾರ್ಡ್‌ಗಳಲ್ಲಿನ ಚರಂಡಿಗಳು ಹೂಳು ತುಂಬಿದೆ. ಚರಂಡಿ ನೀರು ಸರಾಗವಾಗಿ ಹರಿಯುತ್ತಿಲ್ಲ. ಇನ್ನು ಪಟ್ಟಣದಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಮಾಲೀಕತ್ವದ ಖಾಲಿ ಜಾಗೆಗಳಲ್ಲಿ ತಿಪ್ಪೆಗುಂಡಿಗಳನ್ನು ಹಾಕಿದ್ದು, ತ್ಯಾಜ್ಯ ವಿಲೇವಾರಿ ಆಗುತ್ತಿಲ್ಲ. ಕೆಲ ವಾರ್ಡ್‌ಗಳಲ್ಲಿ ಪಟ್ಟಣ ಪಂಚಾಯಿತಿ ಪೂರೈಸುತ್ತಿರುವ ನಲ್ಲಿಗಳ ನೀರು ಪೋಲಾಗುತ್ತಿದೆ. ಇದರಿಂದ ಎಲ್ಲೆಂದರಲ್ಲಿ ನೀರು ನಿಲ್ಲುತ್ತಿದೆ. ಹಲವೆಡೆ ಸಾರ್ವಜನಿಕ ಶೌಚಾಲಯ ಇಲ್ಲದ್ದರಿಂದ ಜನ ಶೌಚಕ್ಕೆ ಬಯಲನ್ನೇ ಆಶ್ರಯಿಸುವಂತಾಗಿದೆ. ಒಟ್ಟಾರೆ ಪಟ್ಟಣದಲ್ಲಿ ಸ್ವಚ್ಛತೆಗೆ ಕ್ರಮ ವಹಿಸದ್ದರಿಂದ ಸೊಳ್ಳೆ ಹಾವಳಿ ಹೆಚ್ಚಿದೆ.

ಸಂಜೆಯಾದರೆ ಸಾಕು ಮನೆ ಒಳಗೆ, ಹೊರಗೆ ಸೊಳ್ಳೆ ಹಾವಳಿಗೆ ಜನ
ಬೇಸತ್ತಿದ್ದಾರೆ. ಸೊಳ್ಳೆ ಕಚ್ಚಿ ಸಾಂಕ್ರಾಮಿಕ ರೋಗ ಹರಡುತ್ತಿವೆ. ತಾಲೂಕು ಕೇಂದ್ರ ಮತ್ತು ದೂರದ ನಗರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೂಡಲೇ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಚರಂಡಿ ಸ್ವತ್ಛತೆಗೆ, ತ್ಯಾಜ್ಯ ವಿಲೇವಾರಿಗೆ ಮತ್ತು ಸೊಳ್ಳೆ ಹಾವಳಿ ನಿಯಂತ್ರಣಕ್ಕೆ ಫಾಗಿಂಗ್‌ ಮಾಡಲು ಮುಂದಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪಟ್ಟಣದ ಐತಿಹಾಸಿಕ ಸ್ಥಳವಾದ ಶ್ರೀ ಲಕ್ಷ್ಮೀ ಸಹಿತ ಸತ್ಯನಾರಾಯಣ ದೇವಸ್ಥಾನದ ಸುತ್ತಲಿನ ತಿಪ್ಪೆ ಗುಂಡಿಗಳನ್ನು ತೆರವು ಮಾಡಿಸಿ ಸ್ಥಳವನ್ನು ಶುಚಿಗೊಳಿಸುವಂತೆ ಹಲವಾರು ಬಾರಿ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಸ್ಪಂದಿಸಿಲ್ಲ. ಇನ್ನಾದರೂ ಪಪಂ ಅಧಿಕಾರಿಗಳು ಪಟ್ಟಣದಲ್ಲಿ ಸ್ವತ್ಛತೆಗೆ ಕ್ರಮ ವಹಿಸಬೇಕು ಎಂದು ಯಂಕನಗೌಡ ಗದ್ದಿಗೌಡ್ರು
ಆಗ್ರಹಿಸಿದ್ದಾರೆ.

ಪಟ್ಟಣದಲ್ಲಿ ಕೆಲವರಿಗೆ ಡೆಂಘೀ ಜ್ವರ ಕಾಣಿಸಿಕೊಂಡ ಶಂಕೆ ಇದ್ದು,
1, 2, 9, ಸೇರಿ ಎಲ್ಲ ವಾರ್ಡಗಳಲ್ಲಿ ಆರೋಗ್ಯ ಸಿಬ್ಬಂದಿ ಲಾರ್ವಾ ಸಮೀಕ್ಷೆ ನಡೆಸಿದ್ದಾರೆ. ಸೊಳ್ಳೆಗಳ ನಿಯಂತ್ರಣಕ್ಕಾಗಿ ಪಪಂ ಸಿಬ್ಬಂದಿ ಫಾಗಿಂಗ್‌ ಮಾಡಿಸುತ್ತಿದ್ದಾರೆ. ಚರಂಡಿ ಹೂಳು ತೆರವಿಗೆ, ಪಟ್ಟಣದಲ್ಲಿ ಸ್ವಚ್ಛತೆಗೆ ಕ್ರಮ ಕೈಗೊಳ್ಳಲು ಪಪಂ ಅಧಿಕಾರಿಗಳಿಗೆ ಸೂಚಿಸಲಾಗುವುದು.
ಡಾ| ಮೌನೇಶ ಪೂಜಾರಿ,
ವೈದ್ಯಾಧಿಕಾರಿ, ಪ್ರಾಥಮಿಕ ಆರೋಗ್ಯ
ಕೇಂದ್ರ ಬಳಗಾನೂರ.

ಶೀಘ್ರದಲ್ಲಿ ಚರಂಡಿ ಹೂಳು ತೆರವುಗೊಳಿಸಲಾಗುವುದು. ಖಾಲಿ ಇರುವ ಸರ್ಕಾರಿ ಜಾಗೆಗಳಲ್ಲಿನ ತಿಪ್ಪೆಗುಂಡಿಗಳಲ್ಲಿನ ತ್ಯಾಜ್ಯ
ವಿಲೇವಾರಿ ಮಾಡಲಾಗುವುದು. ಖಾಸಗಿ ಜಾಗೆಯಲ್ಲಿನ ತಿಪ್ಪೆಗುಂಡಿ ಸ್ವಚ್ಛತೆಗೆ ಮಾಲೀಕರಿಗೆ ನೋಟೀಸ್‌ ನೀಡಲಾಗುವುದು.
ರಡ್ಡಿ ರಾಯನಗೌಡ,
ಪಪಂ ಪ್ರಭಾರಿ ಮುಖ್ಯಾಧಿಕಾರಿ

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.