ನರೇಗಾ ಸದ್ಬಳಕೆ ಮಾಡಿಕೊಳ್ಳಿ


Team Udayavani, May 2, 2020, 1:56 PM IST

2-May-15

ಭಾಲ್ಕಿ: ಜೋಳದಾಪಕಾ ಗ್ರಾಮದಲ್ಲಿ ನಡೆದ ನರೇಗಾ ಕಾಮಗಾರಿಯನ್ನು ಶಾಸಕ ಈಶ್ವರ ಖಂಡ್ರೆ ವೀಕ್ಷಿಸಿದರು.

ಭಾಲ್ಕಿ: ಲಾಕ್‌ಡೌನ್‌ ನಂತಹ ಸಂಕಷ್ಟದ ಸಮಯದಲ್ಲಿ ಆರ್ಥಿಕವಾಗಿ ಸಮಸ್ಯೆ ಎದುರಿಸುತ್ತಿರುವ ಕೂಲಿ ಕಾರ್ಮಿಕರಿಗೆ ನರೇಗಾದಡಿ ಕೆಲಸ ನೀಡಲಾಗುತ್ತಿದೆ. ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

ತಾಲೂಕಿನ ಜೋಳದಾಪಕಾ, ಜ್ಯಾಂತಿ, ರುದನೂರ, ಹಾಲಹಳ್ಳಿ(ಕೆ), ತೇಗಂಪುರ ಗ್ರಾಮಗಳಿಗೆ ಭೇಟಿ ನೀಡಿ ನರೇಗಾದಡಿ ನಡೆಯುತ್ತಿರುವ ನಾಲಾ ಟರ್ನಿಂಗ್‌, ಕ್ಷೇತ್ರಬದು ನಿರ್ಮಾಣ, ಕೆರೆ ಸೇರಿ ವಿವಿಧ ಕಾಮಗಾರಿ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಕೋವಿಡ್‌ 19 ಸೋಂಕು ಹರಡುವಿಕೆ ಭೀತಿಯಿಂದ ವಿಶ್ವವೇ ತಲ್ಲಣಗೊಂಡಿದೆ. ಈ ಸಾಂಕ್ರಾಮಿಕ ರೋಗ ನಿಯಂತ್ರಿಸಲು ಇಡೀ ದೇಶವೇ ಲಾಕ್‌ಡೌನ್‌ ಆಗಿದೆ. ಇಂತಹ ತುರ್ತು ಸಂದರ್ಭದಲ್ಲಿ ಕೂಲಿ ಕಾರ್ಮಿಕರು, ಬಡ ಜನರು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಯಾರೊಬ್ಬರು ಧೈರ್ಯ ಕಳೆದು ಕೊಳ್ಳಬಾರದು ನಿಮ್ಮೊಂದಿಗೆ ನಾನಿದ್ದೇನೆ. ಕೋವಿಡ್ ರೋಗದ ಬಗ್ಗೆ ಭಯ ಬೇಡ. ಆದರೆ ಎಚ್ಚರದಿಂದ ಇರಬೇಕು. ಈಗಾಗಲೇ ಅಗತ್ಯ ಇರುವ ಕಡೆಗಳಲ್ಲಿ ಆಹಾರದ ಪೊಟ್ಟಣ, ತರಕಾರಿ ಕಿಟ್‌, ಮಾಸ್ಕ್ ಸೇರಿ ಪ್ರತಿಯೊಬ್ಬರಿಗೂ ಎರಡು ತಿಂಗಳ ಮುಂಗಡ ಪಡಿತರ ನೀಡುವುದು, ಕುಡಿಯುವ ನೀರು ಪೂರೈಕೆ ಸೇರಿದಂತೆ ಅಗತ್ಯ ಕ್ರಮ ಕೈಗೊಂಡಿದ್ದು, ಸಮಾರೋಪಾದಿಯಲ್ಲಿ ಎಲ್ಲ ಕಾರ್ಯಗಳು ನಡೆಯುತ್ತಿವೆ ಎಂದು ಹೇಳಿದರು.

ನರೇಗಾದಡಿ ಒಬ್ಬರಿಗೆ ದಿನವೊಂದಕ್ಕೆ 275 ರೂ. ಯಂತೆ ಒಂದು ಪರಿವಾರಕ್ಕೆ ಕನಿಷ್ಠ 50 ದಿನ ಕೆಲಸ ನೀಡುವಂತೆ ಸೂಚನೆ ನೀಡಲಾಗಿದೆ. ಅದರಂತೆ ಎಲ್ಲ ಪಂಚಾಯಿತಿ ವ್ಯಾಪ್ತಿಗಳಲ್ಲಿ ನರೇಗಾದಡಿ ಕೆಲಸ ಪ್ರಾರಂಭವಾಗಿದೆ. ವಾರಕ್ಕೊಮ್ಮೆ ಕೂಲಿ ಕಾರ್ಮಿಕರ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ. ಯಾರು ಭಯ ಪಡಬೇಕಿಲ್ಲ ಎಂದು ಹೇಳಿದರು. ತಹಶೀಲ್ದಾರ್‌ ಅಣ್ಣಾರಾವ ಪಾಟೀಲ, ತಾಪಂ ಕಾರ್ಯನಿರ್ವಾಹಕ ಅ ಧಿಕಾರಿ ಬಸವರಾಜ ನಾಯಕರ್‌, ಡಿವೈಎಸ್‌ಪಿ ಡಾ| ದೇವರಾಜ ಬಿ., ಗ್ರಾಪಂ ಅಧ್ಯಕ್ಷ ರವೀಂದ್ರ ಪಾಟೀಲ, ಶಶಿಧರ ಕೋಸಂಬೆ, ಪಿಕೆಪಿಎಸ್‌ ಅಧ್ಯಕ್ಷ ರಾಜಕುಮಾರ ಬಿರಾದಾರ, ವೈಜಿನಾಥ ಪಾಟೀಲ, ಬಸವರಾಜ ಪಾಟೀಲ, ಚಂದ್ರಕಾಂತ ಜ್ಯೊತೇಪ್ಪ, ಸಂಜು ಡೋಳಿ, ಶಿವ ಸದಾಶಿವ, ಸಂತೋಷ ಪಾಟೀಲ, ಮಲ್ಲಿಕಾರ್ಜುನ ಪ್ರಭಾ, ರಮೇಶ ಪ್ರಭಾ, ಧನರಾಜ ಪಾಟೀಲ, ಸಂಜು ಪ್ರಭಾ, ರಾಜು ಕುಂಬಾರ, ಸತೀಶ ಮಡಿವಾಳ ಇದ್ದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.