ಬಿತ್ತನೆ ಬೀಜ ವಿತರಣೆಗೆ ಚಾಲನೆ
Team Udayavani, May 29, 2020, 4:31 PM IST
ಸಾಂದರ್ಭಿಕ ಚಿತ್ರ
ಭಾಲ್ಕಿ: ಪ್ರಧಾನ ಮಂತ್ರಿ ಕಿಸಾನ ಸಮ್ಮಾನ ಯೋಜನೆಯಡಿ ರಾಜ್ಯ ಹಾಗೂ ಕೇಂದ್ರ ಸರಕಾರ ಸೇರಿ ರೈತ ಕುಟುಂಬಕ್ಕೆ ಈಗ ನೀಡುತ್ತಿರುವ 10 ಸಾವಿರ ರೂ. ಯಾವುದಕ್ಕೂ ಸಾಲುವುದಿಲ್ಲ, ಕನಿಷ್ಟ 20 ಸಾವಿರ ರೂ. ನೀಡುವಂತೆ ಸರಕಾರಕ್ಕೆ ಒತ್ತಾಯಿಸಲಾಗುತ್ತಿದೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.
ಪಟ್ಟಣದ ಕೃಷಿ ಇಲಾಖೆಯ ಮಣ್ಣು ಆರೋಗ್ಯ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ್ದ 2020-21 ನೇ ಸಾಲಿನ ಬೀಜ ವಿತರಣೆಗೆ ಅನ್ಯ ಕಾರ್ಯ ನಿಮಿತ್ತ ಬೆಂಗಳೂರಿನಲ್ಲಿ ಇರುವ ಶಾಸಕ ಖಂಡ್ರೆ ಅವರು ಝೂಮ್ ಆ್ಯಪ್ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಸುಮಾರು ಶೇ.75 ಪ್ರತಿಶತ ರೈತರು ಕೃಷಿ ಮೇಲೆ ಅವಲಂಬಿತರಾಗಿದ್ದಾರೆ. ಅತಿವೃಷ್ಟಿ, ಅನಾವೃಷ್ಟಿಯಿಂದ ಪ್ರತಿ ವರ್ಷ ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ. ಈ ವರ್ಷ ಕೋವಿಡ್ ಭೀತಿಯಿಂದ ರೈತರು ಮತ್ತಷ್ಟು ಸಮಸ್ಯೆಗೆ ತಳ್ಳಲ್ಪಟ್ಟಿದ್ದಾರೆ. ಹಾಗಾಗಿ ಪ್ರತಿ ರೈತ ಕುಟುಂಬಕ್ಕೆ ವಾರ್ಷಿಕವಾಗಿ ಕಿಸಾನ ಸಮ್ಮಾನ ಯೋಜನೆಯಡಿ 20 ಸಾವಿರ ರೂ. ನೀಡುವಂತೆ ಕಾಂಗ್ರೆಸ್ ಹೋರಾಟ ಮಾಡುತ್ತಿದೆ ಎಂದರು.
ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಅಣದೂರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಹಾಯಕ ಕೃಷಿ ನಿರ್ದೇಶಕ ರಮೇಶ ಮಸ್ಕಲೆ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಪಂ ಅಧ್ಯಕ್ಷೆ ಮೀರಾಬಾಯಿ ಕಣಜೆ, ಸದಸ್ಯರಾದ ಲಿಂಗರಾಜ ಖಂಡಾಳೆ ಮದಕಟ್ಟಿ, ಬಸವರಾಜ ಕುಪ್ಪೆ, ಕೃಷಿ ಅಧಿಕಾರಿಗಳಾದ ಲಕ್ಷ್ಮಣ ಮಳ್ಳಿ, ಪ್ರಶಾಂತ, ಸಂಜೀವಕುಮಾರ್, ಚಂದ್ರಕಾಂತ ಉಡಬಾಳೆ, ಶ್ರುತಿ, ವೈಜಿನಾಥ ಬಿರಾದಾರ್, ಕಲ್ಲಪ್ಪ ದಾನಾ, ಸತೀಶ ಶೆಟಕಾರ್, ಶಿವಕಾಂತ ಮಾಶೆಟ್ಟೆ, ಇಸ್ಮಾವುದ್ದೀನ್ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ