BJP; ಒಂದೆರಡು ದಿನಗಳಲ್ಲಿ 20 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ, ನನ್ನ ಹೆಸರೂ ಇದೆ: ಶ್ರೀ ರಾಮುಲು
ಏನೇ ಇದ್ದರೂ ಪಕ್ಷದ ತೀರ್ಮಾನ ಅಂತಿಮ
Team Udayavani, Mar 11, 2024, 5:04 PM IST
ರಾಯಚೂರು: ರಾಜ್ಯದ 20 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಒಂದೆರಡು ದಿನಗಳಲ್ಲಿ ನಾಯಕರು ಅಂತಿಮಗೊಳಿಸುವರು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಭ್ಯರ್ಥಿಗಳ ಆಯ್ಕೆ ಕುರಿತು ಜರಗುತ್ತಿರುವ ಸಭೆಗಳ ನಂತರ ರಾಜ್ಯದ 20 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಬಹಿರಂಗಪಡಿಸುವ ನಿರೀಕ್ಷೆಯಿದೆ. ಈಗಾಗಲೇ ರಾಜ್ಯ ನಾಯಕರು ಎಲ್ಲ ಅಭ್ಯರ್ಥಿಗಳ ಮಾಹಿತಿ ತಗೆದುಕೊಂಡು ಹೋಗಿ ಕೇಂದ್ರದ ನಾಯಕರ ಜತೆ ಚರ್ಚಿಸಿದ್ದಾರೆ. ಹೈಕಮಾಂಡ್ ವಿವಿಧ ರೀತಿಯ ಮಾಹಿತಿಯನ್ನು ತುಲನೆ ಮಾಡಿ ಮಂಗಳವಾರ ಸಂಜೆ ಅಥವ ಬುಧವಾರ ಅಂತಿಮಗೊಳಿಸಲಿದೆ ಎಂದರು.
ರಾಯಚೂರು, ಬಳ್ಳಾರಿ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಂದ ತಲಾ ಮೂರು ಹೆಸರು ಕಳಿಸಲಾಗಿದೆ. ಅದರಲ್ಲಿ ನನ್ನ ಹೆಸರೂ ಇದೆ. ನಾನು ಮತ್ತು ಜನಾರ್ದನ ರೆಡ್ಡಿ ಹಿಂದೆ, ಇಂದು ಹಾಗೂ ಮುಂದೆಯೂ ಸ್ನೇಹಿತರೇ. ಪಕ್ಷ ಮತ್ತು ರಾಜಕೀಯವನ್ನು ಸ್ನೇಹದಲ್ಲಿ ತಳಕು ಹಾಕುವುದು ಸರಿಯಲ್ಲ. ಒಂದು ವೇಳೆ ರಾಮುಲು ಅವರಿಗೆ ಟಿಕೆಟ್ ನೀಡಿದರೆ ಅವರು ಸೋಲುತ್ತಾರೆ ಎಂದು ಯಾವ ದೃಷ್ಟಿಕೋನದಿಂದ ಹೇಳಿದ್ದರೋ ಗೊತ್ತಿಲ್ಲ. ಏನೇ ಇದ್ದರೂ ಪಕ್ಷದ ತೀರ್ಮಾನ ಅಂತಿಮ ಎಂದರು.
ಡಾ.ಅಂಬೇಡ್ಕರ್ ರಚಿಸಿದ ಸಂವಿಧಾನದಡಿಯೇ ಬಿಜೆಪಿ ಸರ್ಕಾರ ಆಡಳಿತ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಬಿಜೆಪಿ ಸಂವಿಧಾನ ತಿದ್ದುಪಡಿಗೆ ಮುಂದಾಗುವುದಿಲ್ಲ. ಸಂಸದ ಅನಂತಕುಮಾರ ಹೇಳಿಕೆ ಅವರ ವೈಯಕ್ತಿಕ ಎಂದು ಈಗಾಗಲೇ ಬಿಜೆಪಿ ಸ್ಪಷ್ಟಪಡಿಸಿದೆ. ಅವರ ವೈಯಕ್ತಿಕ ಹೇಳಿಕೆಗಳಿಂದ ಪಕ್ಷಕ್ಕೆ ಯಾವುದೇ ರೀತಿಯ ಹಾನಿ ಆಗುವುದಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ