ಬಡವರ ಅಕ್ಕಿ ವಿಚಾರದಲ್ಲಿ ರಾಜಕೀಯ ಮಾಡಲು ಬಿಜೆಪಿಗೆ ನಾಚಿಕೆಯಾಗಬೇಕು: ಶರಣಪ್ರಕಾಶ್ ಪಾಟೀಲ್
Team Udayavani, Jun 19, 2023, 1:07 PM IST
ರಾಯಚೂರು: ಬಡವರಿಗೆ 10 ಕೆಜಿ ಅಕ್ಕಿ ನೀಡಲು ಮುಂದಾದಾಗ ಕೇಂದ್ರ ಸರ್ಕಾರ ಅಕ್ಕಿ ನೀಡುವುದಿಲ್ಲ ಎನ್ನುತ್ತಿರುವುದಕ್ಕೆ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಟೀಕಿಸಿದರು.
ಸಮೀಪದ ವಿಐಪಿ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾವೇನು ಪುಕ್ಸಟೆ ಅಕ್ಕಿ ಕೇಳುತ್ತಿಲ್ಲ. ಎಫ್ ಸಿಐನಲ್ಲಿ ಸಾಕಷ್ಟು ಅಕ್ಕಿ ಕೊಳೆಯುತ್ತಿದೆ. ಕೇಂದ್ರ ಸರ್ಕಾರ ಮೊದಲು ಅಕ್ಕಿ ಕೊಡುವುದಾಗಿ ಭರವಸೆ ನೀಡಿತ್ತು. ಆದರೆ, ಕೊನೆ ಕ್ಷಣದಲ್ಲಿ ಕೊಡಲಾಗುವುದಿಲ್ಲ ಎನ್ನುತ್ತಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಉತ್ತರಿಸಲಿ ಎಂದರು.
ಗ್ಯಾರೆಂಟಿಗಳ ಜಾರಿಯಿಂದ ಅಭಿವೃದ್ಧಿಗೆ ಅನುದಾನದ ತೊಡಕಾಗದು. 13 ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳಿಗೆ ಅನುದಾನ ನಿರ್ವಹಣೆ ಬಗ್ಗೆ ಸಮಗ್ರ ಮಾಹಿತಿ ಇದೆ. ಈಗ ವಿದ್ಯುತ್ ಬಿಲ್ ಹೆಚ್ಚಾಗಿರುವುದು ಬಿಜೆಪಿಯವರ ಕೊಡುಗೆಯಾಗಿದೆ. ಮುಂದಿನ ತಿಂಗಳಿಂದ ವಿದ್ಯುತ್ ಬಿಲ್ ಬರುವುದಿಲ್ಲ. ಸಣ್ಣ ಕೈಗಾರಿಕೆಗಳಿಗೆ ತೊಂದರೆಯಾದಲ್ಲಿ ಆ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಲಿದೆ ಎಂದರು.
ಈಗಾಗಲೇ ಶಕ್ತಿ ಯೋಜನೆ ಜಾರಿಯಾಗಿದ್ದು, ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಗೂ ಅರ್ಜಿ ಸ್ವೀಕರಿಸಲಾಗುತ್ತಿದೆ. ಸರ್ವರ್ ಸಮಸ್ಯೆ ಉಂಟಾಗಿದ್ದು ಬಗೆ ಹರಿಸಲಾಗುವುದು ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ