ಬಿಜೆಪಿ ಸಾಧನೆ ಮನೆ-ಮನೆಗೆ ತಲುಪಿಸಿ: ನಾಗರತ್ನ


Team Udayavani, Aug 28, 2017, 1:10 PM IST

ray 3.jpg

ರಾಯಚೂರು: ಬಿಜೆಪಿ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವಲ್ಲಿ, ತಳಮಟ್ಟದಿಂದ ಪಕ್ಷ ಸಂಘಟಿಸುವಲ್ಲಿ ಅತ್ಯುತ್ತಮ ಕೆಲಸ ಮಾಡಿದ ವಿಸ್ತಾರಕರಲ್ಲಿ ರಾಯಚೂರು ಜಿಲ್ಲೆಗೆ ಎರಡನೇ ಸ್ಥಾನ ಸಿಕ್ಕಿದೆ. ಈ ಉತ್ಸಾಹ ಇಲ್ಲಿಗೆ ನಿಲ್ಲದೆ ಮುಂಬರುವ ವಿಧಾನಸಭೆ, ಲೋಕಸಭೆ ಚುನಾವಣೆಗೂ
ಮುಂದುವರಿಯಬೇಕು ಎಂದು ಬಿಜೆಪಿ ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ನಾಗರತ್ನ ಕುಪ್ಪಿ ಹೇಳಿದರು. ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ರವಿವಾರ ಆಯೋಜಿಸಿದ್ದ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಎಲ್ಲ ಕಾರ್ಯಕರ್ತರಿಗೆ ಉತ್ತಮ ಹೊಣೆಗಾರಿಕೆ ವಹಿಸಿದ್ದು, ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವಂತೆ ಕರೆ ನೀಡಿದ್ದಾರೆ. ಆದರೆ, ಸಿಎಂ ಸಿದ್ದರಾಮಯ್ಯ ಅಮಿತ್‌ ಷಾ ಬಂದರೆ ಏನೂ ಮಾಡಲು ಸಾಧ್ಯವಿಲ್ಲ ಎನ್ನುತ್ತಾರೆ. ಮುಂಬರುವ ವಿಧಾನಸಭೆ ಚುನಾವಣೆ ಮುಗಿದ ಮೇಲೆ ಸಿದ್ದರಾಮಯ್ಯರಿಗೆ ಅಮಿತ್‌ ಶಾ
ಏನು ಮಾಡಬಲ್ಲರು ಎಂಬುದು ಗೊತ್ತಾಗಲಿದೆ ಎಂದರು. ಈಚೆಗೆ ನಡೆದ ಸಭೆಯಲ್ಲಿ ಪಕ್ಷದ ರಾಷ್ಟ್ರಾಧ್ಯಕ್ಷರು ಸ್ಪಷ್ಟ ಸೂಚನೆಗಳನ್ನು ನೀಡಿದ್ದಾರೆ. ಈ ಸಭೆ ಮುಗಿಯಿತು ಎಂದು ಕೂರುವಂತಿಲ್ಲ. ಪಕ್ಷದಲ್ಲಿ ಒಂದಲ್ಲ ಒಂದು ಚಟುವಟಿಕೆ ನಡೆಯುತ್ತಲೇ ಇರಬೇಕು ಎಂದು ತಿಳಿಸಿದ್ದಾರೆ. ಹೀಗಾಗಿ
ಕಾರ್ಯಕರ್ತರು ಚುನಾವಣೆ ಮುಗಿಯುವವರೆಗೆ ವಿರಮಿಸದೆ ಪಕ್ಷವನ್ನು ಅಧಿ ಕಾರಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸಬೇಕು. ಮಿಶನ್‌ 150 ಗುರಿಗೆ ಜಿಲ್ಲೆಯ ಏಳರಲ್ಲಿ ಕನಿಷ್ಠ ಐದರಿಂದ ಆರು
ಕ್ಷೇತ್ರಗಳಲ್ಲಾದರೂ ಬಿಜೆಪಿ ಗೆಲ್ಲಬೇಕು ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಅಮರನಾಥ ಪಾಟೀಲ, ಈ ಬಾರಿ ಬಿಜೆಪಿ ಸಾಕಷ್ಟು ತಯಾರಿ ಮಾಡಿಕೊಂಡು ಚುನಾವಣೆಗೆ ಮುಂದಾಗುತ್ತಿದೆ. ರಾಜ್ಯದಲ್ಲಿ 3.5 ಕೋಟಿ ಜನ ಮತದಾರರಿದ್ದು, ಅದರಲ್ಲಿ ಕನಿಷ್ಠ ಒಂದೂವರೆ
ಕೋಟಿಯಷ್ಟು ಮತಗಳು ಪಡೆದಲ್ಲಿ ಪಕ್ಷ ಅಧಿಕಾರಕ್ಕೆ ಬರಲಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರು ತಳಮಟ್ಟದಿಂದ ಶ್ರಮಿಸಬೇಕು. ಬಿಜೆಪಿ ಮಿಶನ್‌ 150 ಗುರಿಗೆ ಪೂರಕವಾಗಿ ಜಿಲ್ಲೆಯಲ್ಲಿ ಮಿಶನ್‌ 7 ಜಾರಿಗೊಳಿಸಬೇಕು ಎಂದರು. ಈ ಬಾರಿ 224 ವಿಧಾನಸಭೆ ಕ್ಷೇತ್ರಗಳನ್ನು ಎ, ಬಿ ಮತ್ತು ಸಿ ಎಂದು
ವಿಂಗಡಿಸಲಾಗಿದೆ. ಎ ವಿಭಾಗದಲ್ಲಿ ಸಂಪೂರ್ಣ ಬಿಜೆಪಿ ಅಧಿಕಾರಕ್ಕೆ ಬರುವ ಕ್ಷೇತ್ರಗಳಿವೆ. ಬಿ ನಲ್ಲಿ ಅರ್ಧ ಮಾತ್ರ ಬೆಂಬಲವಿದ್ದರೆ ಸಿ ವಿಭಾಗದಲ್ಲಿ ಬಿಜೆಪಿಗೆ ಒಲವಿಲ್ಲ. ಹೀಗಾಗಿ ಕಾರ್ಯಕರ್ತರು ಬಿ ಮತ್ತು ಸಿ ವಿಭಾಗದಲ್ಲಿ ಹೆಚ್ಚು ಒತ್ತು ಕೊಟ್ಟು ಶ್ರಮಿಸಬೇಕು. ಇನ್ನೂ ಕಾರ್ಯಕರ್ತರಿಗೆ ಕ್ಷೇತ್ರಗಳ
ವಿಂಗಡಣೆ ಮಾಡಲಾಗುತ್ತಿದೆ ಎಂದು ಹೇಳಿದರು. ಜಿಲ್ಲಾ ಉಸ್ತುವಾರಿ ಮೃತ್ಯುಂಜಯ ಜಿನಗಾ, ಜಿಲ್ಲಾಧ್ಯಕ್ಷ ಶರಣಪ್ಪಗೌಡ ಜಾಡಲದಿನ್ನಿ, ಪ್ರಧಾನ ಕಾರ್ಯದರ್ಶಿ ಎನ್‌. ಶಂಕ್ರಪ್ಪ, ಶಾಸಕ ತಿಪ್ಪರಾಜ ಹವಾಲ್ದಾರ, ಮಾಜಿ ಶಾಸಕರಾದ ಎ.ಪಾಪಾರೆಡ್ಡಿ, ಬಸನಗೌಡ ಬ್ಯಾಗವಾಟ್‌, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಯೀ ಪರಮೇಶಪ್ಪ ಇತರರು ಇದ್ದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.