ಗಡ್ಡಿಹಳ್ಳ ಸೇತುವೆಯಲ್ಲಿ ಬೋಂಗಾ; ವಾಹನ ಸಂಚಾರ ಬಂದ್
Team Udayavani, Dec 16, 2018, 2:14 PM IST
ಲಿಂಗಸುಗೂರು: ತಾಲೂಕಿನ ಕಸಬಾಲಿಂಗಸುಗೂರು ಬಳಿಯ ಜೇವರ್ಗಿ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ 150ಎ ರಸ್ತೆಯ ಗಡ್ಡಿಹಳ್ಳದ ಸೇತುವೆಗೆ ಬೋಂಗಾ ಬಿದ್ದಿದ್ದು ಅದೃಷ್ಟವಶಾತ್ ಅನಾಹುತ ತಪ್ಪಿದೆ. ಮುಂಜಾಗ್ತಾ ಕ್ರಮವಾಗಿ ಸೇತುವೆ ಮೇಲೆ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.
ಸುಮಾರು 50 ವರ್ಷಗಳ ಹಿಂದೆ ಗಡ್ಡಿಹಳ್ಳ ಸೇತುವೆ ನಿರ್ಮಿಸಲಾಗಿದೆ. ಈ ಸೇತುವೆ ಒಂದೇ ವಾಹನ ಸಂಚರಿಸುವಷ್ಟು ಕಿರಿದಾಗಿದೆ. ರಾಷ್ಟ್ರೀಯ ಹೆದ್ದಾರಿ 150ಎ ಆಗಿದ್ದರಿಂದ ಸೇತುವೆ ಮೇಲೆ ನಿತ್ಯವೂ ಸಾವಿರಾರು ವಾಹನಗಳು ಸಂಚರಿಸುತ್ತವೆ. ಇದರಿಂದ ಗಡ್ಡಿಹಳ್ಳ ಸೇತುವೆಯಲ್ಲಿ ಈ ಹಿಂದೆಯೇ ಸಣ್ಣ ಪ್ರಮಾಣದಲ್ಲಿ ಬೋಂಗಾ ಬಿದ್ದಿತ್ತು. ಆದರೆ ದುರಸ್ತಿಗೆ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ನಿರ್ಲಕ್ಷ್ಯ ವಹಿಸಿದ್ದರಿಂದ ಕ್ರಮೇಣವಾಗಿ ಬೋಂಗಾ ದೊಡ್ಡದಾಗಿದೆ. ಇದಲ್ಲದೇ ಸೇತುವೆ ಕೆಳಗಡೆ ಅಲ್ಲಲ್ಲಿ ಬಿರುಕು ಕಾಣಿಸಿಕೊಂಡಿದೆ. ಸೇತುವೆ ಮೇಲ್ಭಾಗದಲ್ಲೂ ಇನ್ನೂ ಎರಡು ಸಣ್ಣ ಆಕಾರದ ಬೋಂಗಾಗಳಿವೆ. ತಡೆಗೋಡೆಯಲ್ಲಿ ಸಹ ಬಿರುಕು ಕಾಣಿಸಿಕೊಂಡಿದೆ.
ಸಂಚಾರ ಸ್ಥಗಿತ: ಕಲುಬುರಗಿ, ಜೇವರ್ಗಿ, ಶಹಾಪುರ, ಸುರಪುರ ಲಿಂಗಸುಗೂರು ಮಾರ್ಗವಾಗಿ ಬೆಂಗಳೂರಿಗೆ ಸೇರಿ ಇನ್ನಿತರ ನಗರಗಳಿಗೆ ನಿತ್ಯವೂ ಸಾವಿರಾರು ವಾಹನ ಈ ಸೇತುವೆ ಮಾರ್ಗವಾಗಿ ಸಂಚರಿಸುತ್ತವೆ. ಸೇತುವೆ ಬೋಂಗಾ ಬಿದ್ದಿದ್ದರಿಂಧ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸೇತುವೆ ಮೇಲೆ ವಾಹನ ಸಂಚಾರ ನಿಷೇಧಿಸಿದ್ದು, ಪರ್ಯಾಯವಾಗಿ ಮುದಗಲ್ ಮಾರ್ಗವಾಗಿ ವಾಹನಗಳ ಸಂಚಾರಕ್ಕೆ ಕ್ರಮ ಕೈಗೊಂಡಿದ್ದಾರೆ.
ನಿರ್ಲಕ್ಷ್ಯ: ರಾಷ್ಟ್ರೀಯ ಹೆದ್ದಾರಿ 150ಎ ಹಾದು ಹೋಗಿರುವ ಈ ಸೇತುವೆ ಅಲ್ಲದೇ ಈ ಮಾರ್ಗವಾಗಿ ಅನೇಕ ಸೇತುವೆಗಳು ದುಸ್ಥಿತಿಯಲ್ಲಿದ್ದರೂ ದುರಸ್ತಿ ಮಾಡಬೇಕಾದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಮೈಮರೆತು ಕುಳಿದಿದೆ. ಇದರಿಂದ ವಾಹನ ಸವಾರರು ಹಾಗೂ ಚಾಲಕರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾಗಿದೆ. ಸೇತುವೆಗಳ ಬಗ್ಗೆ ಪರಿಶೀಲಿಸಲು ಪ್ರಾಧಿಕಾರದ ಯಾವೊಬ್ಬ ಅಧಿಕಾರಿ ಭೇಟಿ ನೀಡಿಲ್ಲ ಹಾಗೂ ಸಂಪರ್ಕ ಸಿಗುತ್ತಿಲ್ಲ. ಇದರ ಕಚೇರಿ ಬಾಗಲಕೋಟೆ ಜಿಲ್ಲೆಯ ಹುನುಗುಂದದಲ್ಲಿದೆ. ಹೀಗಾಗಿ ಇಲ್ಲಿನ ಪರಿಸ್ಥಿತಿ ಅವರ ಅರಿವಿಗೆ ಬಾರದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ