ಬ್ರಾಹ್ಮಣರು ಶ್ರಮಜೀವಿಗಳಾಗಲಿ


Team Udayavani, Dec 11, 2018, 12:13 PM IST

ray-3.jpg

ರಾಯಚೂರು: ಬ್ರಾಹ್ಮಣರು ಕೇವಲ ಕುಲ ವೃತ್ತಿಯನ್ನೇ ನೆಚ್ಚಿಕೊಳ್ಳದೆ ಎಲ್ಲ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಮುಂದಾಗಬೇಕು. ಅಂದಾಗ ಮಾತ್ರ ಸಮಾಜದ ಪ್ರಗತಿ ಸಾಧ್ಯವಾಗಲಿದೆ ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಸಲಹೆ ನೀಡಿದರು.

ನಗರದ ಜೋಡು ವೀರಾಂಜನೇಯ ದೇವಸ್ಥಾನ ಆವರಣದಲ್ಲಿ ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ರವಿವಾರ ಸಂಜೆ ಹಮ್ಮಿಕೊಂಡಿದ್ದ ವಿಪ್ರೋತ್ಸವ ಕಾರ್ಯಕ್ರಮದ ನಿಮಿತ್ತ ವಿಪ್ರಶ್ರೀ ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಪೂಜ್ಯರು ಮಾತನಾಡಿದರು. 

ನಮ್ಮ ಧರ್ಮದಲ್ಲಿ ಅವಕಾಶಗಳಿಲ್ಲ ಎಂದು ಅನ್ಯ ಧರ್ಮಕ್ಕೆ ಮತಾಂತರಗೊಳ್ಳುವುದು ಸರಿಯಲ್ಲ. ಹಿರಿಯರಿಂದ ಬಳುವಳಿಯಾಗಿ ಬಂದ ಪೌರೋಹಿತ್ಯವೊಂದೇ ನಿಮ್ಮ ಕಾಯಕ ಆಗಬಾರದು. ಸೋಮಾರಿಗಳಾಗದೆ ಶ್ರಮ ಜೀವನ ರೂಢಿಸಿಕೊಳ್ಳಿ. ಉತ್ತರಪ್ರದೇಶದಲ್ಲಿ ಬ್ರಾಹ್ಮಣರಿಗೆ ಅಧಿಕಾರ ಸಿಕ್ಕಿದೆ. ಅದರಂತೆ ತೆಲಂಗಾಣ, ಕರ್ನಾಟಕದಲ್ಲೂ ಅವಕಾಶ ದಕ್ಕಿದೆ. ಪಕ್ಷಾತೀತವಾಗಿ ಅಧಿಕಾರ ಹಂಚಿಕೆಯಾಗುತ್ತಿದೆ ಎಂದರು.

ಅದರ ಜತೆಗೆ ಸಮಾಜ ಸಂಘಟನೆಗೂ ಒತ್ತು ನೀಡಬೇಕು. ಆರ್ಥಿಕವಾಗಿ ಸಬಲರಾದಾಗ, ಅಧಿಕಾರವಂತರಾದಾಗ ಮಾತ್ರ ಉನ್ನತಿ ಸಾಧ್ಯವಾಗಲಿದೆ. ಬ್ರಾಹ್ಮಣರ ಆಚಾರ ವಿಚಾರಗಳ ಕುರಿತು ಕಿರುಹೊತ್ತಿಗೆ ತರುವ ಪ್ರಯತ್ನ ಮಠ ಮಾಡಿದೆ ಎಂದರು. 

ಮಹಾಸಭಾ ರಾಜ್ಯಾಧ್ಯಕ್ಷ ಕೆ.ಎನ್‌. ವೆಂಕಟನಾರಾಯಣ ಮಾತನಾಡಿ, ಬ್ರಾಹ್ಮಣ ಸಮಾಜ ಜನಸಂಖ್ಯೆಯಲ್ಲಿ ಚಿಕ್ಕದಾದರೂ ಎಲ್ಲರ ಜತೆಗೆ ಉತ್ತಮ ಬಾಂಧವ್ಯ ಹೊಂದಿ ಮುನ್ನಡೆದಿದೆ. ಮಕ್ಕಳ ಶಿಕ್ಷಣ, ಉದ್ಯೋಗಕ್ಕೆ ಹೆಚ್ಚು ಒತ್ತು ನೀಡಬೇಕಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪಿಸಿದ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವೆ ಎಂದರು.

ಕೆನರಾ ಬ್ಯಾಂಕ್‌ ನಿವೃತ್ತ ಹಿರಿಯ ಪ್ರಬಂಧಕ ಸತ್ಯನಾರಾಯಣ ಮುಜುಮದಾರ ಅವರಿಗೆ ವಿಪ್ರಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರು, ಪದವಿ ಪುರಸ್ಕೃತರನ್ನು, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಮಹಾಸಭಾ ಉಪಾಧ್ಯಕ್ಷಾ ಆರ್‌.ಲಕ್ಷ್ಮೀಕಾಂತ, ವಿದ್ವಾಂಸರಾದ ಡಾ| ಅರಳು ಮಲ್ಲಿಗೆ ಪಾರ್ಥಸಾರಥಿ, ಮಂತ್ರಾಲಯದ ವಿದ್ಯಾಪೀಠದ ಪ್ರಾಚಾರ್ಯ ಎಸ್‌.ವಾದಿರಾಜ ಆಚಾರ್ಯ ಮಾತನಾಡಿದರು.

ಅಖೀಲ ಕರ್ನಾಟಕ ವಕ್ತಾರ ಮ.ಸ. ನಂಜುಂಡಸ್ವಾಮಿ, ಜಿಲ್ಲಾಧ್ಯಕ್ಷ ಡಾ| ಆನಂದ ಫಡ್ನೀಸ್‌, ನರಸಿಂಗರಾವ್‌ ದೇಶಪಾಂಡೆ, ಪ್ರಾಣೇಶ ಮುತಾಲಿಕ್‌, ಜಗನ್ನಾಥ ಕುಲಕರ್ಣಿ, ಗಿರೀಶ ಕನಕವೀಡು, ಡಾ| ಪ್ರಮೋದ ಕಟ್ಟಿ, ವೀಣಾರಾಜೇಂದ್ರ ಸೇರಿ ಸಮಾಜದ ಅನೇಕರು ಪಾಲ್ಗೊಂಡಿದ್ದರು.

ಕಾಯಕದ ಬಗ್ಗೆ ಇರುವ ಸಂಕೋಚಗಳನ್ನು ಬದಿಗೊತ್ತಿ. ಧರ್ಮಕ್ಕೆ ವಿರುದ್ಧವಾದದ್ದನ್ನು ಬಿಟ್ಟು ಎಲ್ಲ ಕೆಲಸಗಳು ಶ್ರೇಷ್ಠ. ಬ್ರಾಹ್ಮಣರು ಎಂದಾಕ್ಷಣ ನಮಗೆ ಮೀಸಲಾತಿ ಸಿಗುವುದಿಲ್ಲ, ಸೂಕ್ತ ಅವಕಾಶಗಳಿಲ್ಲ ಎಂಬ ನೆಪ ಹೇಳದೆ ಕೆಲಸ ಮಾಡಬಲ್ಲೆವು ಎಂಬ ಆತ್ಮವಿಶ್ವಾಸದಿಂದ ಮುನ್ನಡೆಯಿರಿ.
 ಶ್ರೀ ಸುಬುಧೇಂಧ್ರ ತೀರ್ಥರು, ಪೀಠಾಧಿಪತಿ, ರಾಘವೇಂದ್ರ ಸ್ವಾಮಿಗಳ ಮಠ, ಮಂತ್ರಾಲಯ

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.