ಕಂಪ್ಯೂಟರ್‌ ಶಿಕ್ಷಣ ಬ್ರೇಕ್‌!


Team Udayavani, Feb 27, 2018, 4:01 PM IST

ra_y-1.jpg

ಹಟ್ಟಿ ಚಿನ್ನದ ಗಣಿ: ಜೆಸ್ಕಾಂನವರು ಗೌಡೂರು ವಲಯದ ಯಲಗಟ್ಟಾ ಸರ್ಕಾರಿ ಪ್ರೌಢಶಾಲೆಯ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದರಿಂದ ಶಾಲೆ ಕಗ್ಗತ್ತಲಲ್ಲಿದ್ದು, ಮಕ್ಕಳಿಗೆ ಕಂಪ್ಯೂಟರ್‌ ಶಿಕ್ಷಣವೂ ದೊರೆಯದಂತಾಗಿದೆ.

2008-09ನೇ ಸಾಲಿನಲ್ಲಿ ಜಿಲ್ಲಾ ಶಿಕ್ಷಕರ ತರಬೇತಿ ಸಂಸ್ಥೆಯಿಂದ ಶಾಲೆಗೆ 15 ಕಂಪ್ಯೂಟರ್‌ಗಳನ್ನು ಒದಗಿಸಲಾಗಿದೆ. ನಾಲ್ಕು ವರ್ಷ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ ತರಬೇತಿ ನೀಡಲಾಗಿದೆ. ನಂತರ ನಿರ್ವಹಣೆ ಕೊರತೆಯಿಂದ ತರಬೇತಿ ಸ್ಥಗಿತಗೊಳಿಸಲಾಗಿದೆ. ಅಲ್ಲದೇ ನಾಲ್ಕು ತಿಂಗಳ ಹಿಂದೆ ಶಾಲೆಯ ವಿದ್ಯುತ್‌ನೂ ಕಟ್‌ ಮಾಡಿದ್ದರಿಂದ ಕಂಪ್ಯೂಟರ್‌ ಹಾಗೂ ಯುಪಿಎಸ್‌ಗಳು ಧೂಳು ಹಿಡಿದಿದ್ದು, ಕೇಳುವವರೆ ಇಲ್ಲದಂತಾಗಿದೆ. ತರಬೇತಿ ನೀಡಲು ನಿಯುಕ್ತಿಗೊಳಿಸಿದ್ದ ಖಾಸಗಿ ಸಂಸ್ಥೆಯವರು 35,000 ವಿದ್ಯುತ್‌ ಬಿಲ್‌ ಪಾವತಿಸದ್ದರಿಂದ ಶಾಲೆಯ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿದೆ.

ಈ ಕುರಿತು ಶಾಲಾ ಸಿಬ್ಬಂದಿಗಳನ್ನು ವಿಚಾರಿಸಿದಾಗ ಕಂಪ್ಯೂಟರ್‌ ತರಬೇತಿ ಕೊಠಡಿ ಹಾಗೂ ಶಾಲೆಯ ವಿದ್ಯುತ್‌ ಮೀಟರ್‌ ಬೇರೆ ಇದೆ. ಕಂಪ್ಯೂಟರ್‌ ತರಬೇತಿ ಕೊಠಡಿ ನಿರ್ವಹಣೆ ಶಾಲೆಯ ವ್ಯಾಪ್ತಿಗೆ ಬರುವದಿಲ್ಲ. ಖಾಸಗಿ ಸಂಸ್ಥೆಯವರು ಬಿಲ್‌ ಪಾವತಿಸದಿದ್ದರೆ ಆ ಕೋಣೆಯ ವಿದ್ಯುತ್‌ ಸಂಪರ್ಕ ಮಾತ್ರ ಕಡಿತಗೊಳಿಸಬೇಕು ಮತ್ತು ಜಿಲ್ಲಾ ಶಿಕ್ಷಕರ ತರಬೇತಿ ಸಂಸ್ಥೆಯವರು ತರಬೇತಿ ನೀಡುತ್ತಿರುವ ಸಂಸ್ಥೆ ವಿರುದ್ಧ ಕಾನೂನು ಕ್ರಮ ಜರುಗಿಸಿ ವಸೂಲಿ ಮಾಡುವುದನ್ನು ಬಿಟ್ಟು ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎನ್ನುವ ಹಾಗೆ ಶಾಲೆಯ ವಿದ್ಯುತ್‌ ಸಂಪರ್ಕವನ್ನೂ ಕಡಿತಗೊಳಿಸಿದ್ದಾರೆ ಎಂದು ದೂರಿದರು.

ಸಿಅರ್‌ಸಿ ಗುರನಗೌಡರನ್ನು ಸಂಪರ್ಕಿಸಿದರೆ ಮಕ್ಕಳ ಕಲಿಕೆ ದೃಷ್ಟಿಯಿಂದ ವಿದ್ಯುತ್‌ ಸಂಪರ್ಕ ನೀಡಬೇಕು. ವಿದ್ಯುತ್‌ ಕಡಿತದಿಂದ ಶಾಲೆಯಲ್ಲಿ ತೀವ್ರ ಸಮಸ್ಯೆಯುಂಟಾಗಿದೆ ಎಂದು ತಿಳಿಸಿದ್ದಾರೆ. ಶಾಲೆಯಲ್ಲಿ 242 ಮಕ್ಕಳು 10 ಜನ ಸಿಬ್ಬಂದಿ ಇದ್ದು,
ವಲಯದ ಮೂರು ಪ್ರೌಢಶಾಲೆಗಳ ಪೈಕಿ ಯಲಗಟ್ಟಾ ಶಾಲೆ ಶಿಕ್ಷಣ, ಕ್ರೀಡೆಯಲ್ಲಿ ಉತ್ತಮ ಹೆಸರು ಪಡೆದಿದೆ. ಆದರೆ ಶಿಕ್ಷಣ
ಇಲಾಖೆಯ ಬೇಜವಬ್ದಾರಿಯಿಂದ ಸರ್ಕಾರಿ ಶಾಲೆಯ ಕಲಿಕೆಗೆ ಹಿನ್ನಡೆಯಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ

ನಾವು ಹಲವು ಬಾರಿ ಜಿಲ್ಲಾ ಶಿಕ್ಷಕರ ತರಬೇತಿ ಸಂಸ್ಥೆಗೆ ಪತ್ರ ಬರೆದಿದ್ದೇವೆ. ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದರಿಂದ ಎಜ್ಯುಸ್ಯಾಟ್‌ ತರಗತಿಗಳಿಗೆ ತೊಂದರೆಯಾಗಿದೆ. 
 ಅಯ್ಯಪ್ಪ, ಮುಖ್ಯ ಶಿಕ್ಷಕ ಯಲಗಟ್ಟಾ ಪ್ರೌಢಶಾಲೆ

ಶಿಕ್ಷಣ ಇಲಾಖೆ ಬೇಜವಾಬ್ದಾರಿತನ ದಿಂದ ಮಕ್ಕಳು ಕಂಪ್ಯೂಟರ್‌ ತರಬೇತಿಯಿಂದ ವಂಚಿತರಾಗುತ್ತಿದ್ದಾರೆ. ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ 4 ತಿಂಗಳಾದರೂ ಸಹಿತ ಯಾವುದೆ ಕ್ರಮಕ್ಕೆ ಮುಂದಾಗಿಲ್ಲ. ಸಾ.ಶಿ. ಇಲಾಖೆ ಉಪನಿರ್ದೇಶಕರು ಕೂಡಲೇ ಸಮಸ್ಯೆ ಇತ್ಯರ್ಥಪಡಿಸಬೇಕು.
ಅಣ್ಣಾರಾಯ, ಪಾಲಕರು.

ಯಲಗಟ್ಟಾ ಶಾಲೆ ವಿದ್ಯುತ್‌ ಬಿಲ್‌ 35,000 ರೂ. ಆಗಿದೆ. ಕಳೆದ 8 ವರ್ಷದಿಂದ ಬಿಲ್‌ ಪಾವತಿಸಿಲ್ಲ, ಹಲವು ಬಾರಿ ಎಚ್ಚರಿಕೆ ನೀಡಿದರೂ ನಿಗಾ ವಹಿಸಿಲ್ಲ, ಸಂಪರ್ಕ ಕಡಿತಗೊಳಿಸಿ 4 ತಿಂಗಳಾದರೂ ಈ ಬಗ್ಗೆ ಬಂದು ವಿಚಾರಿಸಿಲ್ಲ. ಇದು ಶಿಕ್ಷಣ ಇಲಾಖೆಯ ಬೇಜವಾಬ್ದಾರಿ ತೋರಿಸುತ್ತದೆ.
 ದೇವರಾಜ, ಅಧಿಕಾರಿ ಜೆಸ್ಕಾಂ ಹಟ್ಟಿ ಚಿನ್ನದಗಣಿ.

ಶಾಲೆ ಮುಖ್ಯ ಶಿಕ್ಷಕರ ಜೊತೆ ಮಾತನಾಡಿ ಸಮಸ್ಯೆ ಇತ್ಯರ್ಥಪಡಿಸಲಾಗುವುದು, ಬಿಲ್‌ ಪಾವತಿಸದಿದ್ದರೆ ಕಂಪ್ಯೂಟರ್‌ ತರಗತಿಯ ಕೊಠಡಿ ವಿದ್ಯುತ್‌ ಸಂಪರ್ಕ ಮಾತ್ರ ಕಡಿತಗೊಳಿಸಿ, ಶಾಲೆಗೆ ವಿದ್ಯುತ್‌ ಸಂಪರ್ಕ ಮುಂದುವರಿಸುವಂತೆ ಜೆಸ್ಕಾಂ ಇಲಾಖೆಗೆ ತಿಳಿಸಲಾಗುವುದು. 
 ನಂದನೂರು ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ರಾಯಚೂರು.

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.