ಸ್ವಂತ ಖರ್ಚಿನಲ್ಲೇ ಸೇತುವೆ ದುರಸ್ತಿ


Team Udayavani, Nov 16, 2021, 5:09 PM IST

21road

ರಾಯಚೂರು: ಕಳೆದ ಅನೇಕ ದಿನಗಳಿಂದ ಸಂಪೂರ್ಣ ಹದಗೆಟ್ಟು ಪ್ರಯಾಣಿಕರ ಜೀವಕ್ಕೆ ಕಂಟಕವಾಗಿದ್ದ ಕೃಷ್ಣಾ ನದಿ ಸೇತುವೆ ಸ್ವಂತ ಖರ್ಚಿನಲ್ಲಿ ದುರಸ್ತಿ ಮಾಡಿಸುವ ಮೂಲಕ ಪ್ರಥಮ ದರ್ಜೆ ಗುತ್ತಿಗೆದಾರ ಮುಜುಬುದ್ದೀನ್‌ ಮಾದರಿಯಾಗಿದ್ದಾರೆ.

ಹೈದರಾಬಾದ್‌ ಕರ್ನಾಟಕ ಮುಖ್ಯ ರಸ್ತೆ ಸಂಪರ್ಕ ಕಲ್ಪಿಸುವ ಈ ಸೇತುವೆ ನಿಜಾಂ ಕಾಲದಲ್ಲಿ ನಿರ್ಮಿಸಲಾಗಿತ್ತು. ಆದರೆ, ಈಚೆಗೆ ಸೇತುವೆ ಮೇಲೆ ರಾಡ್‌ಗಳು ತೇಲಿ ಪ್ರಯಾಣಕ್ಕೆ ಸಮಸ್ಯೆಯಾಗುತ್ತಿತ್ತು. ಬೈಕ್‌ ಸವಾರನೊಬ್ಬ ಇದೇ ಕಾರಣಕ್ಕೆ ಬಿದ್ದು ಜೀವ ಕಳೆದುಕೊಂಡಿದ್ದ. ಅಲ್ಲದೇ, ಟ್ರ್ಯಾಕ್ಟರ್‌, ಲಾರಿ ಟೈಯರ್‌ಗಳು ಪಂಕ್ಚರ್‌ ಆಗಿ ಗಂಟೆಗಟ್ಟಲೇ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿತ್ತು. ಇದನ್ನು ಗಮನಿಸಿದ್ದ ಮುಜುಬುದ್ದೀನ್‌, ಜನರಿಗಾಗುತ್ತಿರುವ ಸಮಸ್ಯೆ ತಪ್ಪಿಸಲು ಖುದ್ದು ತಾವೇ ದುರಸ್ತಿ ಮಾಡಿಸಿದ್ದಾರೆ.

ಡಾಂಬರ್‌ ಹಾಕಿ ಎಲ್ಲ ತಗ್ಗು ಮುಚ್ಚಿಸಿದ್ದಾರೆ. ಇದರಿಂದ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಂತಾಗಿದೆ. ಈ ಮಾರ್ಗವಾಗಿ ನಾನಾ ಕಾರ್ಯಗಳ ನಿಮಿತ್ತ ನಿತ್ಯ ಸಾವಿರಾರು ಜನ ಓಡಾಡುತ್ತಾರೆ. ಅದರಲ್ಲೂ ಚಿಕಿತ್ಸೆಗೆಂದು ಹೋಗುವವರು ಇರುತ್ತಾರೆ. ಆದರೆ, ಈಚೆಗೆ ಕೃಷ್ಣಾ ಸೇತುವೆ ಸಂಪೂರ್ಣ ಹಾಳಾಗಿದ್ದ ಕಾರಣ ಪದೇ ಪದೇ ಗಂಟೆಗಟ್ಟಲೇ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿತ್ತು. ಈ ಬಗ್ಗೆ ಸಂಬಂಧಿಸಿದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಗಮನ ಸೆಳೆದರೂ ಅವರು ಸರಿಯಾಗಿ ಸ್ಪಂದನೆ ನೀಡಿರಲಿಲ್ಲ.

ಈ ಕುರಿತು ಪ್ರತಿಕ್ರಿಯಿಸಿದ ಮುಜಿಬುದ್ದೀನ್‌, ನಾನು ಕೂಡ ಆಗಾಗ ಹೈದರಾಬಾದ್‌ ಗೆ ಓಡಾಡುತ್ತೇನೆ. ಹೆದ್ದಾರಿ ಪ್ರಾಧಿಕಾರದವರು ಈ ಸೇತುವೆ ನಿರ್ವಹಣೆ ಸಂಪೂರ್ಣ ಕೈ ಬಿಟ್ಟಂತೆ ಕಾಣಿಸುತ್ತಿದೆ. ಮಳೆ ನೀರು ಸರಾಗವಾಗಿ ಹರಿದು ಹೋಗದಿರುವುದು ಸಮಸ್ಯೆಗೆ ಕಾರಣ. ಜನರ ಸಮಸ್ಯೆ ಕಂಡ ಮೇಲೆ ನಾನೇ ಒಮ್ಮೆ ಪರಿಶೀಲಿಸಿದೆ. ತಾತ್ಕಾಲಿಕ ದುರಸ್ತಿಗೆ ಮಾಡಿದರೆ ಸಂಚಾರ ಸುಗಮವಾಗಲಿದೆ ಎಂಬ ಕಾರಣಕ್ಕೆ ನನ್ನ ಸೈಟ್‌ನಿಂದಲೇ ಎಲ್ಲ ಸಾಮಗ್ರಿ, ಯಂತ್ರೋಪಕರಣ ತರಿಸಿ ದುರಸ್ತಿ ಕೆಲಸ ಮಾಡಿಸಿದ್ದೇನೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.