Raichur; ರಾಜ್ಯದಲ್ಲಿ ನಿರೀಕ್ಷಿಸದಷ್ಟು ಭ್ರಷ್ಟಾಚಾರ; ಬಿಎಸ್ ಯಡಿಯೂರಪ್ಪ
Team Udayavani, Oct 15, 2023, 6:18 PM IST
ರಾಯಚೂರು: ರಾಜ್ಯದಲ್ಲಿ ನಿರೀಕ್ಷೆ ಮಾಡದಿರುವಷ್ಟು ಭ್ರಷ್ಟಾಚಾರ ನಡೆಯುತ್ತಿದೆ. ಕಲಾವಿದರಿಂದಲೂ ಲಂಚ ಕೇಳುವ ಕೀಳುಮಟ್ಟದ ವಾತಾವರಣ ರಾಜ್ಯದಲ್ಲಿರುವುದು ದುರ್ದೈವ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಕೂಡಲೇ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಾಕೀತು ಮಾಡಿದರು.
ಜಿಲ್ಲೆಯ ಲಿಂಗಸೂಗೂರಿನಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಒಂದಾದ ನಂತರ ಒಂದು ಹಗರಣ ಬಯಲಾಗುತ್ತಿದೆ. ಇದಕ್ಕೆ ಸರ್ಕಾರ ಕಡಿವಾಣ ಹಾಕದಿರುವುದು ವಿಪರ್ಯಾಸ. ಕಾಂಗ್ರೆಸ್ ಸರ್ಕಾರ ಸಾವಿರಾರು ಕೋಟಿ ಹಣ ಸಂಗ್ರಹಿಸಿ ಪಂಚರಾಜ್ಯ ಚುನಾವಣೆಗೆ ಕಳುಹಿಸುವ ಆರೋಪ ಕೇಳಿ ಬರುತ್ತಿವೆ. ಈ ಬಗ್ಗೆ ಸಮಗ್ರ ತನಿಖೆ ಮಾಡಿದರೆ ಸತ್ಯಾಸತ್ಯತೆ ಬಯಲಾಗಲಿದೆ. ಇತ್ತೀಚೆಗೆ ನಡೆದ ಐಟಿ ದಾಳಿಯೇ ಇದಕ್ಕೆ ಉತ್ತಮ ಉದಾಹರಣೆ ಎಂದು ದೂರಿದರು.
ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಕೊಡುವುದಾಗಿ ಸರ್ಕಾರದ ಖಜಾನೆ ಖಾಲಿ ಮಾಡಿದೆ. ಅಭಿವೃದ್ಧಿ ಸಂಪೂರ್ಣ ಸ್ಥಗಿತಗೊಂಡಿದೆ. ಒಂದೆರಡು ಕಿಮೀ ರಸ್ತೆ ಕಾಮಗಾರಿಯೂ ನಡೆಯುತ್ತಿಲ್ಲ. ನೀರಾವರಿ ಕಾಮಗಾರಿಗಳು ನಿಂತು ಹೋಗಿದೆ. ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಗುತ್ತಿಗೆದಾರರು ಯಾವುದೇ ಕೆಲಸ ಮಾಡಲು ಮುಂದೆ ಬರುತ್ತಿಲ್ಲ. ಜನ ಬೀದಿಗಿಳಿದು ಹೋರಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ