ಮಸ್ಕಿ ಉಪಚುನಾವಣೆ ಹಾದಿ ಸುಗಮ: ದಾವೆ ಹಿಂಪಡೆದ ಬಸನಗೌಡ ತುರ್ವಿಹಾಳ
Team Udayavani, Dec 12, 2019, 11:15 AM IST
ರಾಯಚೂರು: ಮಸ್ಕಿ ಶಾಸಕರಿಂದ ಅಡ್ಡ ಮತದಾನ ನಡೆದಿದೆ ಎಂದು ಆರೋಪಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿಯನ್ನು ಬಸನಗೌಡ ತುರ್ವಿಹಾಳ ಕೊನೆಗೂ ಹಿಂಪಡೆದಿದ್ದು, ಉಪಚುನಾವಣೆ ಹಾದಿ ಸುಗಮವಾಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಸನಗೌಡ ತುರ್ವಿಹಾಳ ಬಿಜೆಪಿಯಿಂದ ಸ್ಪರ್ಧಿಸಿ ಕೇವಲ 213 ಮತಗಳಿಂದ ಸೋಲುಂಡಿದ್ದರು.ಆ ವೇಳೆಯಲ್ಲಿ ಕಾಂಗ್ರೆಸ್ ನಲ್ಲಿದ್ದ ಪ್ರತಾಪಗೌಡ ಪಾಟೀಲ ಭರ್ಜರಿ ಜಯಗಳಿಸಿದ್ದರು. ಆದರೆ, ವಿದೇಶದಲ್ಲಿರುವ ಶಾಸಕ ಪ್ರತಾಪ್ ಗೌಡರ ಪುತ್ರಿ ಅವರ ಮತವೂ ಚಲಾವಣೆಯಾಗಿತ್ತು. ಇದೇ ರೀತಿ ಸಾಕಷ್ಟು ಅಡ್ಡ ಮತಗಳು ಚಲಾವಣೆಗೊಂಡಿವೆ ಎಂದು ತುರ್ವಿಹಾಳ ದೂರಿದ್ದರು.
ಆದರೆ ಅರ್ಜಿ ಸಲ್ಲಿಸಿ ಸಾಕಷ್ಟು ತಿಂಗಳಾದರೂ ಪ್ರಕರಣದ ವಿಚಾರಣೆ ನಡೆದಿರಲಿಲ್ಲ. ಇದರಿಂದ ರಾಜ್ಯದ 15 ಕ್ಷೇತ್ರದ ಉಪಚುನಾವಣೆ ನಡೆದರೂ ಮಸ್ಕಿಯಲ್ಲಿ ನಡೆಯಲಿಲ್ಲ. ಆದರೆ ಹೈಕಮಾಂಡ್ ಒತ್ತಡಕ್ಕೆ ಮಣಿದು ಬುಧವಾರ ಅರ್ಜಿ ಹಿಂಪಡೆದಿದ್ದಾರೆ. ಅಲ್ಲದೇ ಬಸನಗೌಡರಿಗೆ ತುಂಗಭದ್ರಾ ಕಾಡಾ ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ಅವರು ಕೂಡ ಹಿಂದೆ ಅಧಿಕಾರ ಸ್ವೀಕರಿಸಿದ್ದರು. ಕಾರ್ಯಕರ್ತರ ಒತ್ತಡಕ್ಕೆ ಮಣಿದು ರಾಜೀನಾಮೆ ನೀಡಿದ್ದರು. ಈಗ ಪುನಹ ಅಧಿಕಾರ ಸ್ವೀಕರಿಸುವಂತೆ ವರಿಷ್ಠರು ಸೂಚಿಸಿದ್ದು ಶೀಘ್ರದಲ್ಲೇ ಸ್ವೀಕರಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಉಪಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಮಸ್ಕಿ ಚಿತ್ರಣವೇ ಬದಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್