ಬಿಎಸ್ಸೆನ್ನೆಲ್ ಉಳಿವಿಗೆ ಹೋರಾಟ ಅಗತ್ಯ
Team Udayavani, Sep 11, 2017, 4:42 PM IST
ಲಿಂಗಸುಗೂರು: ಕೇಂದ್ರ ಸರಕಾರ ಹಾಗೂ ಹಿರಿಯ ಅಧಿಕಾರಿಗಳು ಬಿಎಸ್ಎನ್ಎಲ್ ಮುಚ್ಚುವ ಹುನ್ನಾರ ನಡೆಸುತ್ತಿದ್ದು, ಬಿಎಸ್ಸೆನ್ನೆಲ್ ಉಳಿವಿಗೆ ಹೋರಾಟ ಅಗತ್ಯವಾಗಿದೆ ಎಂದು ಬಿಎಸ್ಎನ್ಎಲ್ ನೌಕರರ
ಸಂಘದ ಕರ್ನಾಟಕ ವಲಯ ಕಾರ್ಯದರ್ಶಿ ಸಿ.ಕೆ. ಗುಂಡಣ್ಣ ಹೇಳಿದರು.
ಪಟ್ಟಣದ ಐಎಂಎ ಸಭಾಂಗಣದಲ್ಲಿ ಬಿಎಸ್ಎನ್ ಎಲ್ ನೌಕರರ ಸಂಘ ರವಿವಾರ ಆಯೋಜಿಸಿದ್ದ 6ನೇ ಜಿಲ್ಲಾ ಸಮಾವೇಶದಲ್ಲಿ ಮಾತನಾಡಿದ ಅವರು, 2000ರಿಂದ ಈಚೆಗೆ ಬಿಎಸ್ಎನ್ಎಲ್ ಕಾರ್ಯಾರಂಭ ಮಾಡಲು ಯೋಜಿಸಿತ್ತು. ಆದರೆ ಇದಕ್ಕೂ ಮುಂಚೆ ಕೆಲ ಖಾಸಗಿ ಕಂಪನಿಗಳಿಗೆ ಕಾರ್ಯಾರಂಭ ಮಾಡಲು ಕೇಂದ್ರ ಸರಕಾರ ಅನುಮತಿ ನೀಡಿದ್ದರಿಂದ ಬಿಎಸ್ಸೆನ್ನೆಲ್ ನಷ್ಟ ಅನುಭವಿಸುವಂತಾಗಿದೆ. ಕೇಂದ್ರ ಸರಕಾರ ಹಾಗೂ ನಿಗಮದ ಹಿರಿಯ ಅಧಿಕಾರಿಗಳು ಖಾಸಗಿ ಕಂಪನಿಗಳ ವ್ಯಾಮೋಹದಿಂದಾಗಿ ನಿಗಮದಲ್ಲಿ ಬೇಕಂತಲೇ ಕೆಲ ದೋಷಗಳನ್ನು ಹುಟ್ಟುಹಾಕಿ, ಬೇರೆ ಕಂಪನಿಯತ್ತ ಗ್ರಾಹಕರು ಗಮನಹರಿಸುವ ಕೆಲಸ ಮಾಡುತ್ತಿದ್ದಾರೆ. ಸರಕಾರ ನಿಗಮಕ್ಕೆ ಟೆಲಿಫೋನ್, ಬ್ರಾಡ್ಬ್ಯಾಂಡ್ ಮೋಡೆಮ್, ಕೇಬಲ್ ಸೇರಿದಂತೆ ಇನ್ನಿತರ ಸಾಮಗ್ರಿಗಳನ್ನು ಪೂರೈಸುತ್ತಿಲ್ಲ. ಅಲ್ಲದೇ ಆದಾಯ ಬರುತ್ತಿಲ್ಲ ಎಂದು ನೌಕರರ ಮೇಲೆ ಹರಿಹಾಯುವುದು ಸರಿಯಲ್ಲ. ನಿಗಮ ಉಳಿಸಿಕೊಳ್ಳಲು ಹೋರಾಟ ಅನಿವಾರ್ಯವಾಗಿದೆ ಎಂದರು.
ರಾಯಚೂರಿನಲ್ಲಿ ನಿಗಮದ ನೌಕರರಿಗಾಗಿ 35 ವಸತಿಗೃಹಗಳನ್ನು ನಿರ್ಮಿಸಲಾಗಿದೆ. ಇವು ಶಿಥಿಲಾವಸ್ಥೆಯಲ್ಲಿದ್ದು, ಹಂದಿಗಳ ತಾಣವಾಗಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೆ ನೀವೇ ದುರಸ್ತಿ ಮಾಡಿಸಿಕೊಳ್ಳಿ ಎಂದು ಬೇಜವಾಬ್ದಾರಿಯಿಂದ ಜಾರಿಕೊಳ್ಳುವ ಯತ್ನ ಮಾಡುತ್ತಿದ್ದಾರೆ. ನಿಗಮದ ನೌಕರರನ್ನು ಕೀಳುಮಟ್ಟದಿಂದ ಸರಕಾರ ಕಾಣುತ್ತಿದೆ ಎಂದು ಆರೋಪಿಸಿದರು.
ಟೆಲಿಕಾಂ ಜಿಲ್ಲೆಯ ಪ್ರಧಾನ ವ್ಯವಸ್ಥಾಪಕ ಜೆ.ನಿವಾಸರಾವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಕರಡಕಲ್, ನೌಕರರ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ಬಿ.ಎಸ್.ಆಲೂರು, ಹಿರಿಯ ಮುಖಂಡ ಎನ್.ಪಿ. ಜಹಾಗೀರದಾರ, ಬಿ.ರಾಮಚಂದ್ರ, ಲಾಲಪ್ಪ, ಕೆ.ಗುರುರಾಜ, ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಪ್ಪ, ಜಿಲ್ಲಾ ಕಾರ್ಯದರ್ಶಿ ಡಿ.ಬಿ.ಸೋಮನಮರಡಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ