ನಾಳೆಯಿಂದ ಆಂಧ್ರಕ್ಕೆ ಬಸ್ ಸಂಚಾರ
Team Udayavani, Jun 16, 2020, 12:04 PM IST
ರಾಯಚೂರು: ಆಂಧ್ರಪ್ರದೇಶದ ವ್ಯಾಪ್ತಿಯಲ್ಲಿ ಜೂ.17ರಿಂದ ಕೆಲ ಷರತ್ತುಗಳೊಂದಿಗೆ ಬಸ್ ಸಂಚಾರ ಪ್ರಾರಂಭವಾಗಲಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರಾಯಚೂರು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಲಾಕ್ಡೌನ್ ಸಡಿಲಿಕೆ ಬಳಿಕ ತಾಲೂಕಿನಿಂದ ಜಿಲ್ಲಾ ಕೇಂದ್ರಕ್ಕೆ ನಂತರ ಅಂತರ್ ಜಿಲ್ಲೆಗಳಿಗೆ ಬಸ್ ಸಂಚಾರ ಪ್ರಾರಂಭಿಸಲಾಗಿದೆ. ಜನಸಂದಣಿ ಅನುಗುಣವಾಗಿ ಹಂತ ಹಂತವಾಗಿ ಬಸ್ ಸಂಚಾರ ಹೆಚ್ಚಿಸಲಾಗುವುದು. ಮಾರ್ಗ ಮಧ್ಯದಲ್ಲಿ ಎಲ್ಲಿಯೂ ಬಸ್ಗಳನ್ನು ನಿಲ್ಲಿಸುವುದಿಲ್ಲ. ಪ್ರಯಾಣಿಕರು ಆಸನಗಳನ್ನು ಮುಂಗಡವಾಗಿ ಕಾಯ್ದಿರಿಸಕೊಳ್ಳಬಹುದು. ಪ್ರಯಾಣಿಕರ ಮಾಹಿತಿಯನ್ನು ಕಡ್ಡಾಯವಾಗಿ ಪಡೆಯಲಾಗುವುದು. ವಾಹನದ ಒಳಗಡೆ ಕಡ್ಡಾಯವಾಗಿ ಪ್ರಯಾಣಿಕರು ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ವ್ಯವಸ್ಥೆ ಮಾಡಿಕೊಳ್ಳಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ರಾಯಚೂರಿನಿಂದ ಮಂತ್ರಾಲಯ ಮಾರ್ಗವಾಗಿ, ಮೊದಲಿನಂತೆ ಇದ್ದ ಪ್ರತಿಷ್ಠಿತ ಸಾರಿಗೆ ಬಸ್ ಹಾಗೂ ದಿನದ ಸಮಯದಲ್ಲಿ ವೇಗದೂತ ಬಸ್ಗಳು ಸಂಚರಿಸಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?