ರೈತರಿಂದಲೇ ಕಾಲುವೆ ಸ್ವತ್ಛತೆ


Team Udayavani, Aug 5, 2018, 6:01 PM IST

ray-1.jpg

ಗೊರೇಬಾಳ: ತುಂಗಭದ್ರಾ ಜಲಾಶಯದಿಂದ ಮುಖ್ಯ ಕಾಲುವೆಗೆ ನೀರು ಹರಿಬಿಟ್ಟು 20 ದಿನ ಕಳೆದರೂ ಉಪ ಕಾಲುವೆಗಳಿಂದ ಕೆಳಬಾಗದ ಗ್ರಾಮಗಳಿಗೆ ನೀರು ಹರಿಯದ ಕಾರಣ ಸಿಂಧನೂರ ತಾಲೂಕಿನ ರಾಮಾಕ್ಯಾಂಪ್‌
ರೈತರು ಸ್ವಂತ ಹಣದಿಂದಲೇ ಕಾಲುವೆಯಲ್ಲಿ ತುಂಬಿದ ಹೂಳು, ಕಸಕಡ್ಡಿಗಳನ್ನು ಜೆಸಿಬಿಯಿಂದ ತೆರವುಗೊಳಿಸುವ ಮೂಲಕ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮಾಕ್ಯಾಂಪ್‌ನ ಹಿರಿಯ ರೈತ ಮುಖಂಡ ಬಾಲಪ್ಪ ಮಾತನಾಡಿ, ಹಳ್ಳಿಗಳಲ್ಲಿ ವಿಧಾನಸಭೆ ಚುನಾವಣೆ ಮುನ್ನ ಏಪ್ರಿಲ್‌ ತಿಂಗಳಲ್ಲಿ ಕೆರೆ, ಕಟ್ಟೆಗಳನ್ನು ತುಂಬಿಸಲಾಗಿತ್ತು. ನೀರು ತುಂಬಿಸಿ ನಾಲ್ಕು ತಿಂಗಳು ಕಳೆಯುತ್ತಿದೆ. ಈಗಾಗಲೇ ಬಹುತೇಕ ಗ್ರಾಮಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯಲು ನೀರಿಲ್ಲದ ಪರಿಸ್ಥಿತಿ ಎದುರಾಗಿದೆ. ಈ ಬಾರಿ
ತುಂಗಭದ್ರಾ ಜಲಾಶಯ ತ್ವರಿತಗತಿಯಲ್ಲಿ ತುಂಬಿರುವ ಕಾರಣ ಕಾಲುವೆಗೆ ಬೇಗ ನೀರು ಬರುವ ನಿರೀಕ್ಷೆ ಇತ್ತು. ಹೀಗಾಗಿ ರೈತರು ಕಳೆದ ತಿಂಗಳು ಹೊಲಗಳಲ್ಲಿನ ಅರೆಬರೆ ನೀರು ಹೊಂದಿದ ಕೆರೆಗಳಲ್ಲಿನ ನೀರು ಬಳಸಿಕೊಂಡು ಭತ್ತದ ಸಸಿ ಮಡಿ ಹಾಕಿದ್ದಾರೆ.

ಈಗ ಒಂದು ತಿಂಗಳಿನಿಂದ ಈ ಭಾಗದಲ್ಲಿ ಮಳೆ ಸುರಿದಿಲ್ಲ, ಅತ್ತ ಕಾಲುವೆಗೂ ನೀರು ಹರಿಯುತ್ತಿಲ್ಲ. ಇದರಿಂದ ಭತ್ತ ನಾಟಿಗೆ ಹಾಕಿದ ಸಸಿ ಮಡಿಗಳು ಒಣಗುತ್ತಿವೆ. ಮುಖ್ಯ ಕಾಲುವೆಗೆ ನೀರು ಬಿಟ್ಟು 20 ದಿನಗಳಾಗುತ್ತ ಬಂದರೂ ಸಂಬಂಧಪಟ್ಟ ನೀರಾವರಿ ಇಲಾಖೆ ಅಧಿಕಾರಿಗಳು ವಾರಾಬಂದಿ ಮಾಡುವುದನ್ನು ಬಿಟ್ಟು ಮೇಲ್ಭಾಗದ ದೊಡ್ಡ ದೊಡ್ಡ ರೈತರ ಜತೆ ಹೊಂದಾಣಿಕೆ ಮಾಡಿಕೊಂಡು ಅವರ ಹೊಲಗಳಲ್ಲಿ ಭತ್ತ ನಾಟಿ ಮಾಡಿಸಲು ಮುಂದಾಗುತ್ತಿದ್ದಾರೆ. ಕೆಳ ಭಾಗದ ರೈತರ ಪರಿಸ್ಥಿತಿ ಗಂಭೀರವಾಗಿದ್ದು ಇದು ಹೀಗೇ ಮುಂದುವರಿದರೆ ರಸ್ತೆತಡೆ ಸೇರಿದಂತೆ ತಾಲೂಕಿನ ನೀರಾವರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು.
 
ರೈತ ಮುಖಂಡರಾದ ನಾರಾಯಣರಾವ್‌, ಶ್ರೀನಿವಾಸ, ರಾದಪ್ಪ, ಮಲ್ಲಿಕಾರ್ಜುನ ಹಿರೇಗೌಡ, ದಾನಪ್ಪಗೌಡ, ಗಾದೆಪ್ಪ ಡೆಂಗಿ, ಶಿವಪ್ಪ ಕೊನ್ನಹಟ್ಟಿ, ವಲಿಬಾಷಾ ಅಗೆದಾಳ, ಶೇಷಗಿರಿರಾವ್‌ ಲಕ್ಷ್ಮೀಕ್ಯಾಂಪ್‌, ಸತ್ಯಪ್ಪ, ಅಯ್ಯನಗೌಡ ಉಗ್ರಾಣ ಸೇರಿ ಅನೇಕ ರೈತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.