ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ
Team Udayavani, Apr 9, 2022, 5:58 PM IST
ಸಿಂಧನೂರು: ವಿವಿಧ ಗ್ರಾಮಗಳಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ವೆಂಕಟರಾವ್ ನಾಡಗೌಡ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು.
ಉದ್ಬಾಳ (ಇಜೆ)ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡ ಕೆಲಸಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಗುಣಮಟ್ಟ ಕೆಲಸಗಳನ್ನು ತೆಗೆದುಕೊಳ್ಳಲು ಸ್ಥಳೀಯರು ಒತ್ತು ನೀಡಬೇಕು. ಏನಾದರೂ ಲೋಪಗಳು ಕಂಡುಬಂದಾಗ, ಸಂಬಂ ಧಿಸಿದವರ ಗಮನಕ್ಕೆ ತರಬೇಕು ಎಂದರು.
ಅಲಬನೂರು ಗ್ರಾಮದಲ್ಲಿ ಪಿಡಬ್ಲ್ಯೂಡಿ ಇಲಾಖೆಯಿಂದ 20 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ, ಹರೇಟನೂರು ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ, ವಳಬಳ್ಳಾರಿ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ರಸ್ತೆ, ಚರಂಡಿ ನಿರ್ಮಾಣ, ಹೆಡಗಿನಾಳ ಗ್ರಾಮದಲ್ಲಿ 25 ಲಕ್ಷ ರೂ., ಚಿಂತಮಾನದೊಡ್ಡಿಯಲ್ಲಿ 25 ಲಕ್ಷ ರೂ., ಹಲುಗುಂಚಿ ಗ್ರಾಮದಲ್ಲಿ 1 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಿಸುವ ಕಾಮಗಾರಿಗಳಿಗೆ ಇದೇ ವೇಳೆ ಶಾಸಕರು ಗುದ್ದಲಿ ಪೂಜೆ ನೆರವೇರಿಸಿದರು.
ಅಯ್ಯನಗೌಡ ಆಯನೂರು, ಚಂದ್ರಭೂಪಾಲ ನಾಡಗೌಡ, ವೀರೇಶ ಉದ್ಬಾಳ, ಶ್ರೀನಿವಾಸ್ ಗೋಮರ್ಸಿ, ರಾಜಾ ಉದ್ಬಾಳ, ಚನ್ನಬಸವ ಇದ್ದರು.
ಮನೆ-ಮನೆಗೆ ದಾಖಲೆ ವಿತರಣೆ
ಸ್ವಾಮಿತ್ವ ಯೋಜನೆಯಡಿ ಕಂದಾಯ ದಾಖಲೆಗಳನ್ನು ಜನರ ಮನೆಗೆ ತಲುಪಿಸುವ ಯೋಜನೆಯನ್ನು ಶಾಸಕ ವೆಂಕಟರಾವ್ ನಾಡಗೌಡ ಉದ್ಘಾಟಿಸಿದರು. ಜಿಪಂ, ತಾಪಂ, ಕಂದಾಯ ಇಲಾಖೆ, ಭೂಮಾಪನ ಇಲಾಖೆ ಸಹಭಾಗಿತ್ವದಲ್ಲಿ ಕೈಗೊಂಡಿರುವ ಈ ಯೋಜನೆಯಡಿ ಕಂದಾಯ ದಾಖಲೆಗಳನ್ನು ಜನರಿಗೆ ತಲುಪಿಸಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
Fazal ur Rehman; ಭಾರತ ಸೂಪರ್ಪವರ್, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು