ಕೇಂದ್ರ ಬಜೆಟ್ ಕಾರ್ಮಿಕ-ಜನವಿರೋಧಿ: ಸಿಐಟಿಯು ಆಕ್ರೋಶ
Team Udayavani, Feb 6, 2022, 1:24 PM IST
ಲಿಂಗಸುಗೂರು: ಕೇಂದ್ರ ಸರ್ಕಾರ 2022-23ನೇ ಸಾಲಿನ ಮಂಡಿಸಿದ ಬಜೆಟ್ ಕಾರ್ಮಿಕ ಮತ್ತು ಜನವಿರೋಧಿ ನೀತಿಯಿಂದ ಕೂಡಿದೆ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ತಾಲೂಕು ಘಟಕ ಶನಿವಾರ ಆಕ್ರೋಶ ವ್ಯಕ್ತಪಡಿಸಿತು.
ಪಟ್ಟಣದ ಗಡಿಯಾರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ರಾಷ್ಟ್ರೀಯ ಆರೋಗ್ಯ ಮಿಷನ್, ಅಂಗನವಾಡಿಗಳಿಗೆ ಅನುದಾನ ಹೆಚ್ಚಿಸಲಾಗಿಲ್ಲ. ರಾಷ್ಟ್ರಕ್ಕೆ ಸಂಪತ್ತು ಸೃಷ್ಟಿಸುವ ದುಡಿಯುವ ಜನರಿಗೆ ಬಜೆಟ್ ಸಂಪೂರ್ಣವಾಗಿ ನಿರ್ಲಕ್ಷಿಸಿ ಇಂಧನ ಬೆಲೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಜತೆಗೆ ಪರೋಕ್ಷ ತೆರಿಗೆಗಳನ್ನು ಹೆಚ್ಚಿಸಿ ಬಡ ಜನರನ್ನು ವಂಚಿಸಿದೆ. ಕಾರ್ಪೋರೇಟ್ ವಲಯಗಳಿಗೆ ಉದಾರತೆ ತೋರಿದೆ.
ಕೇಂದ್ರದ ಬಜೆಟ್ ಜನರ ಜೀವನೋಪಾಯದ ಮೇಲೆ ತೀವ್ರ ತರವಾದ ಹೊಡೆತ ನೀಡಿ ಬಡತನ ತರಲಿದೆ. ಮೂಲ ಸೌಕರ್ಯ, ಉತ್ಪಾದನೆ ಮತ್ತು ಖನಿಜ ಕ್ಷೇತ್ರಗಳನ್ನು ಖಾಸಗೀಕರಣ ಮೂಲಕ ಹತಾಶೆ ಮತ್ತು ವಿನಾಶಕಾರಿ ಹಿನ್ನೆಲೆಯಲ್ಲಿ ರೂಪಿಸಲಾಗಿದೆ. ಈ ಬಜೆಟ್ ಸರ್ವಾಧಿಕಾರಿ ಮತ್ತು ಜನವಿರೋಧಿ, ವಿಧ್ವಂಸಕ ಪ್ರವೃತ್ತಿ ಬಹಿರಂಗ ಪಡಿಸುತ್ತದೆ. ಇಂತಹ ಬಜೆಟ್ ಸಂಪೂರ್ಣ ಜನವಿರೋಧಿ ಮತ್ತು ರಾಷ್ಟ್ರೀಯ ಆರ್ಥಿಕತೆಗೆ ಸಂಪೂರ್ಣ ವಿನಾಶಕಾರಿಯಾಗಿದೆ ಎಂದು ಆರೋಪಿಸಿದರು.
ಸಿಐಟಿಯು ಮುಖಂಡರಾದ ರಮೇಶ ವೀರಾಪುರ, ನಿಂಗಪ್ಪ ವೀರಾಪುರ, ಮಹ್ಮದ್ ಅನೀಫ್, ಬಾಬಾಜಾನಿ, ಮಲ್ಲೇಶ ಮ್ಯಾಗೇರಿ, ಶಿವರಾಜ ಕಪಗಲ್ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ