ಅನ್ನದ ಬಿಸಿ ಗಂಜಿ ಬಿದ್ದು ಐವರು ಮಕ್ಕಳು, ಅಡುಗೆ ಸಹಾಯಕಿಗೆ ಗಾಯ
Team Udayavani, Jun 21, 2022, 2:53 PM IST
ರಾಯಚೂರು: ನಗರದ 13ನೇ ವಾರ್ಡ್ ನ ಮಂಗಳವಾರಪೇಟೆ ಅಂಗನವಾಡಿಯಲ್ಲಿ ಬಿಸಿ ಅನ್ನದ ಗಂಜಿ ಬಿದ್ದು ಐವರು ಮಕ್ಕಳು ಹಾಗೂ ಅಡುಗೆ ಸಹಾಯಕಿ ಗಾಯಗೊಂಡ ಘಟನೆ ನಡೆದಿದೆ.
ಹಿಬಾ (3 ವ), ಅರ್ಹಾನ್ (3 ವ), ಮಹ್ಮದ್ ಜಾಹಿದ್ (3 ವ), ಶೇಖ್ ಅದ್ನಾನ್ (4 ವ) ಹಾಗೂ ಬಿಬಿ ಮರಿಯಮ್ (3 ವ) ಗಾಯಗೊಂಡ ಮಕ್ಕಳು.
ಬೆಳಗ್ಗೆ ಅಂಗನವಾಡಿಯಲ್ಲಿ ಅನ್ನ ಮಾಡಿದ್ದ ಅಡುಗೆ ಸಹಾಯಕಿ ಲಕ್ಷ್ಮಿ ಗಂಜಿ ಬಸಿಯುವಾಗ ಮಕ್ಕಳು ಅಡ್ಡ ಬಂದ ಕಾರಣ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಇದನ್ನೂಓದಿ:ಸಾರ್ವಜನಿಕರೆದುರೇ ಬಸ್ ಏಜೆಂಟ್ ನ ಬರ್ಬರ ಕೊಲೆ: ಅನೈತಿಕ ಸಂಬಂಧ ಕಾರಣ ಶಂಕೆ
ಅಂಗನವಾಡಿ ಸ್ಥಳ ಚಿಕ್ಕದಾಗಿರುವ ಕಾರಣ ಅಡುಗೆ ಮಾಡುವ ಸ್ಥಳದ ಪಕ್ಕದಲ್ಲೇ ಮಕ್ಕಳು ಆಡುತ್ತಿದ್ದರು. ಗಂಜಿ ಸಾಕಷ್ಟು ಬಿಸಿಯಾಗಿದ್ದ ಕಾರಣ ಮಕ್ಕಳಿಗೆ ಹೆಚ್ಚಿನ ಪ್ರಮಾಣದ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಹಾಯಕಿ ಲಕ್ಷ್ಮಿ ಕೈ ಮೇಲೆ ಗಂಜಿ ಬಿದ್ದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ