ಮಕ್ಕಳ ಮನದಾಸೆ; ಬಿಸಿಯೂಟದಲ್ಲಿ ದೋಸೆ!


Team Udayavani, Oct 2, 2022, 5:21 PM IST

6

ರಾಯಚೂರು: ಬಿಸಿಯೂಟದಲ್ಲಿ ಅನ್ನ, ಸಾರು, ಚಿತ್ರಾನ್ನ ತಿಂದು ಬೇಸತ್ತ ಮಕ್ಕಳಿಗೆ ದೋಸೆ, ಇಡ್ಲಿಯಂಥ ರುಚಿಕರ ಉಪಾಹಾರ ತಯಾರಿಸಿ ಕೊಟ್ಟರೇ..!

ದೇವದುರ್ಗ ತಾಲೂಕಿನ ಹಿರೇರಾಯಕುಂಪಿ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ರೀತಿ ಉಪಾಹಾರ ಮಾಡುವ ಮೂಲಕ ಗಮನ ಸೆಳೆಯಲಾಗಿದೆ. ನೂರಾರು ಮಕ್ಕಳಿಗೆ ಉಪಾಹಾರ ಮಾಡಿ ಬಡಿಸುವುದು ಕಷ್ಟ ವಾದರೂ ಮಕ್ಕಳ ಖುಷಿಗೋಸ್ಕರ ಎರಡು ಬಾರಿ ಮಾಡಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಶಾಲೆಯ ಮುಖ್ಯಶಿಕ್ಷಕ ಯಲ್ಲಪ್ಪ ಹಂದ್ರಾಳ ವಿದ್ಯಾರ್ಥಿಗಳ ಜತೆ ಸಮಾಲೋಚನೆ ಮಾಡುವಾಗ ನಿಮಗೆ ಬಿಸಿಯೂಟದಲ್ಲಿ ಏನೇನು ನೀಡಬೇಕು ಎಂದು ಕೇಳಿದ್ದರು. ಆಗ ಒಬ್ಬ ವಿದ್ಯಾರ್ಥಿ ದೋಸೆ ನೀಡಿದರೆ ರುಚಿಯಾಗಿರುತ್ತದೆ ಎಂದು ಹೇಳಿದ್ದ. ಇದಕ್ಕೆ ಉಳಿದ ಮಕ್ಕಳು ಕೂಡ ಹೌದೆಂದು ತಲೆಯಾಡಿಸಿದ್ದರು. ಮಕ್ಕಳ ಬಯಕೆ ಕೇಳಿ ಸುಮ್ಮನಾಗದ ಮುಖ್ಯಶಿಕ್ಷಕ, ಕಳೆದ ಆ.20ರಂದು ಬಿಸಿಯೂಟದ ಬದಲಿಗೆ ದೋಸೆಯನ್ನೇ ಮಾಡಿಸಿದ್ದರು.

ಎರಡು ದಿನದ ಶ್ರಮ: ದೋಸೆ ಮಾಡುವುದೆಂದರೆ ಅನ್ನ, ಸಾರು, ಚಿತ್ರಾನ್ನ ಮಾಡಿದಷ್ಟು ಸುಲಭವಲ್ಲ. ಒಂದು ದಿನ ಮುಂಚಿತವಾಗಿಯೇ ಅಕ್ಕಿ, ಉದ್ದಿನ ಬೇಳೆ ನೆನೆ ಹಾಕಿ ರಾತ್ರಿ ರುಬ್ಬಿಕೊಂಡು ಹಿಟ್ಟು ತಯಾರಿಸಬೇಕು. ಅಲ್ಲದೇ, 217 ವಿದ್ಯಾರ್ಥಿಗಳಿಗೆ ದೋಸೆ ಮಾಡಲು ಹೆಚ್ಚುವರಿ ಹೆಂಚುಗಳು ಬೇಕು.

ಇಷ್ಟೆಲ್ಲ ಕೆಲಸಗಳ ಮಧ್ಯೆಯೂ ಅಡುಗೆ ಸಿಬ್ಬಂದಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡರೆ, ಶಾಲೆ ಶಿಕ್ಷಕರು ಕೂಡ ಇದಕ್ಕೆ ಸಾಥ್‌ ನೀಡಿದರು. ಸರ್ಕಾರ ಬಿಸಿಯೂಟಕ್ಕೆ ನೀಡುವ ಅಡುಗೆ ಸಾಮಗ್ರಿಗಳ ಜತೆಗೆ ಹೆಚ್ಚುವರಿ ಸಾಮಗ್ರಿಗಳನ್ನು ಖರೀದಿಸಲು ಶಿಕ್ಷಕರು ಆರ್ಥಿಕ ನೆರವು ನೀಡಿದರು. ಅಡುಗೆ ಸಿಬ್ಬಂದಿ ಮನೆಯಿಂದಲೇ ದೋಸೆ ಹೆಂಚುಗಳನ್ನು ತಂದಿದ್ದರು. ದೋಸೆ ಜತೆಗೆ ಟೊಮ್ಯಾಟೊ ಗೊಜ್ಜು, ಕೊಬ್ಬರಿ ಚಟ್ನಿ ಮಾಡಲಾಗಿತ್ತು. ಎಲ್ಲ ಮಕ್ಕಳಿಗೆ ಸಾಕೆನಿಸು ವಷ್ಟು ದೋಸೆ ಮಾಡಿ ಬಡಿಸಲಾಯಿತು. ಮಕ್ಕಳು ಬಹಳ ಖುಷಿಯಿಂದಲೇ ತಿಂದು ಸಂಭ್ರಮಿಸಿದರು. ಮಕ್ಕಳ ಖುಷಿಯನ್ನು ಕಂಡು ಶಿಕ್ಷಕರು ಈಚೆಗೆ ಇಡ್ಲಿ ಸಾಂಬಾರ್‌ ಕೂಡ ಮಾಡಿ ಬಡಿಸಿದ್ದಾರೆ. ಈ ಬಗ್ಗೆ ಎಸ್‌ ಡಿಎಂಸಿ ಸದಸ್ಯರು, ಪಾಲಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಇಚ್ಛಾಶಕ್ತಿ ತೋರಿದರೆ ಸಾಧ್ಯ

ಸರ್ಕಾರ ನೀಡುವ ಅಡುಗೆ ಸಾಮಗ್ರಿಗಳಲ್ಲಿ ಈ ರೀತಿ ಉಪಾಹಾರಗಳನ್ನು ಪದೇ ಪದೇ ಮಾಡುವುದು ಕಷ್ಟದ ಕೆಲಸ. ವಿಶೇಷ ದಿನಗಳಲ್ಲಿ, ಶಿಕ್ಷಕರ ಜನ್ಮದಿನ ಸೇರಿ ಅಪರೂಪಕ್ಕೊಮ್ಮೆ ಮಾಡಬಹುದಷ್ಟೇ. ಆದರೆ, ತಿಂಗಳಿಗೆ ಒಂದೆರಡು ಬಾರಿಯಾದರೂ ಈ ರೀತಿ ಮಾಡಿದರೆ ಮಕ್ಕಳು ಹೆಚ್ಚು ಆಸಕ್ತಿಯಿಂದ ಶಾಲೆಗೆ ಬರುತ್ತಾರೆ. ಇದಕ್ಕೆ ಸರ್ಕಾರ ಬಿಸಿಯೂಟದ ಸಾಮಗ್ರಿಗಳ ಜತೆಗೆ ಹೆಚ್ಚುವರಿ ಅಡುಗೆ ಪದಾರ್ಥಗಳನ್ನು ನೀಡಲು ಇಚ್ಛಾಶಕ್ತಿ ತೋರಬೇಕು ಎನ್ನುವುದು ಶಿಕ್ಷಕರ, ಪಾಲಕರ ಅನಿಸಿಕೆಯಾಗಿದೆ.

ನಾವು ಮಕ್ಕಳ ಜತೆ ಬೆರೆತು ಅವರ ಇಷ್ಟ-ಕಷ್ಟಗಳನ್ನು ಕೇಳಿದಾಗ ಅವರ ಕಲಿಕೆ ಸುಧಾರಣೆ ಮಾಡಲು ಸಾಧ್ಯ. ಮಕ್ಕಳು ಇಷ್ಟ ಪಟ್ಟಿದ್ದರು ಎನ್ನುವ ಕಾರಣಕ್ಕೆ ನಮ್ಮ ಶಾಲೆಯಲ್ಲಿ ಬಿಸಿಯೂಟದ ಬದಲಿಗೆ ಒಮ್ಮೆ ದೋಸೆ, ಮತ್ತೂಮ್ಮೆ ಇಡ್ಲಿ ಮಾಡಲಾಗಿತ್ತು. ಇದನ್ನು ಮಕ್ಕಳು ಬಹಳ ಆಸ್ವಾದಿಸಿದರು. ಆದರೆ, ನಮಗಿರುವ ಲಭ್ಯ ಸಂಪನ್ಮೂಲದಲ್ಲಿ ಪದೇ ಪದೇ ಈ ರೀತಿ ಮಾಡಲು ಸಾಧ್ಯವಿಲ್ಲ. ಬಿಸಿಯೂಟದಲ್ಲಿ ಒಂದೇ ರೀತಿಯ ಊಟ ತಿನ್ನಲು ಮಕ್ಕಳು ಬೇಸರ ಪಟ್ಟುಕೊಳ್ಳುತ್ತಾರೆ. ● ಯಲ್ಲಪ್ಪ ಹಂದ್ರಾಳ, ಮುಖ್ಯಶಿಕ್ಷಕ, ಹಿರೇರಾಯಕುಂಪಿ ಪ್ರೌಢಶಾಲೆ

●ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.