ನರೇಗಾದಡಿ ಕೆಲಸ ನೀಡಲು ಮನವಿ
Team Udayavani, Apr 30, 2020, 7:05 PM IST
ಚಿಂಚೋಳಿ: ತಾಲೂಕಿನ ವಿವಿಧ ಸಮಸ್ಯೆ ಈಡೇರಿಸುವಂತೆ ತಾಲೂಕು ನಾಗರಿಕ ವೇದಿಕೆ ಮುಖಂಡರು ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು. ಲಾಕ್ಡೌನ್ ಹಿನ್ನೆಲೆಯಲ್ಲಿ ಅಂತ್ಯೋದಯ ಪಡಿತರ ಚೀಟಿದಾರರಿಗೆ ಉಚಿತವಾಗಿ ಹಾಲು ಕೊಡಲಾಗುತ್ತಿದೆ. ಬಿಪಿಎಲ್ ಕಾರ್ಡುದಾರರಿಗೆ ನೀಡುತ್ತಿಲ್ಲ. ವಿವಿಧ ಪ್ರದೇಶಗಳಲ್ಲಿ ಆಗಮಿಸಿದ ಕೂಲಿ ಕಾರ್ಮಿಕರಿಗೆ ಮನರೇಗಾ ಯೋಜನೆ ಅಡಿಯಲ್ಲಿ ಕೆಲಸ ಕೊಡಿಸಬೇಕು. ವಿದ್ಯುತ್ ಬಳಕೆದಾರರಿಗೆ ಬಿಲ್ ತುಂಬಲು ಎರಡು ತಿಂಗಳ ಕಾಲಾವಕಾಶ ಕೊಡಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.
ಮಿರಿಯಾಣ ಕಲ್ಲುಗಣಿ ಕೆಲಸ ಪ್ರಾರಂಭಿಸಿ ಕಾರ್ಮಿಕರಿಗೆ ಉದ್ಯೋಗ ಕೊಡಬೇಕು. ಲೋಕೋಪಯೋಗಿ ಮತ್ತು ಪಂಚಾಯತ್ರಾಜ್ ಇಂಜಿನಿಯರಿಂಗ್ ಇಲಾಖೆ ವ್ಯಾಪ್ತಿಯಲ್ಲಿ ಸ್ಥಗಿತವಾಗಿರುವ
ಅಭಿವೃದ್ಧಿ ಕಾಮಗಾರಿ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಗ್ರೇಡ್2 ತಹಶೀಲ್ದಾರ್ ಮಾಣಿಕರಾವ್ ಘತ್ತರಗಿಗೆ ಮನವಿ ಸಲ್ಲಿಸಿದರು. ಸಂತೋಷ ಗುತ್ತೇದಾರ, ಕೆ.ಎಂ. ಬಾರಿ, ಆರ್. ಗಣಪತರಾವ್, ಕೃಷ್ಣಾ ಬಿರಾದಾರ, ಪ್ರತಾಪರೆಡ್ಡಿ, ಮತೀತ ಸೌದಾಗರ, ಮಹೇಶ ಗಾಲಿ, ಬಸವರಾಜ ಕಡಬೂರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ