ಮಾರುಕಟ್ಟೆಯಿಲ್ಲದೇ ಹಾಳಾಗುತ್ತಿದೆ ಈರುಳ್ಳಿ-ಕಲ್ಲಂಗಡಿ


Team Udayavani, Apr 10, 2020, 4:13 PM IST

10-April-24

ಚಿಂಚೋಳಿ: ತಾಲೂಕಿನ ದಸ್ತಾಪುರ, ರಟಕಲ್‌ ಗ್ರಾಮಗಳಲ್ಲಿ ಬೆಳೆಯಲಾಗಿರುವ ಉಳ್ಳಾಗಡ್ಡಿ ಮತ್ತು ಕಲ್ಲಂಗಡಿ.

ಚಿಂಚೋಳಿ: ಪ್ರಸಕ್ತ ಸಾಲಿನಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದ ಕಲ್ಲಂಗಡಿ, ಉಳ್ಳಾಗಡ್ಡಿ, ಪಪ್ಪಾಯಿ ಲಾಕ್‌ ಡೌನ್‌, 144ನೇ ಕಲಂ ಜಾರಿ ಹಿನ್ನೆಲೆಯಲ್ಲಿ ಮಾರುಕಟ್ಟೆ ಸೌಲಭ್ಯವಿಲ್ಲದೇ ಹಾಳಾಗುತ್ತಿದ್ದು, ರೈತರು ತಲೆ ಮೇಲೆ ಕೈಹೊತ್ತು ಕುಳಿತುಕೊಳ್ಳುವಂತಾಗಿದೆ.

ಬೇಸಿಗೆ ದಿನಗಳಲ್ಲಿ ಹೆಚ್ಚಿನ ಬೇಡಿಕೆ ಇರುವ ಕಲ್ಲಂಗಡಿಯನ್ನು ತಾಲೂಕಿನ ಕುಂಚಾವರಂ, ದೇಗಲಮಡಿ, ಬಂಟನಳ್ಳಿ, ಸಾಲೇಬೀರನಳ್ಳಿ, ಚಿಂಚೋಳಿ, ಅಣವಾರ, ಪೋಲಕಪಳ್ಳಿ, ರಟಕಲ್‌, ದಸ್ತಾಪುರ ಇನ್ನಿತರ ಗ್ರಾಮಗಳಲ್ಲಿ ಒಟ್ಟು 500 ಎಕರೆ ಪ್ರದೇಶದಲ್ಲಿ ಬೆಳೆಯಲಾಗಿದೆ. ಕೆಲವು ಗ್ರಾಮಗಳಲ್ಲಿ ಪ್ರತಿ ಕಲ್ಲಂಗಡಿ ಸುಮಾರು 5 ಕೆ.ಜಿಯಷ್ಟು ದಪ್ಪವಾಗಿ ಬೆಳೆದಿವೆ. ಆದರೆ ಮಾರುಕಟ್ಟೆಗೆ ಸೌಲಭ್ಯವಿಲ್ಲದೇ ರೈತರು ಪರದಾಡುವಂತೆ ಆಗಿದೆ. ಹೀಗಾಗಿ ಕಲ್ಲಂಗಡಿಯನ್ನು ಹೊಲದಲ್ಲಿಯೇ ಬಿಡಲಾಗಿದ್ದು, ಬಿಸಿಲಿನ ತಾಪಕ್ಕೆ ಕೊಳೆಯುತ್ತಿವೆ. ರಟಕಲ್‌, ದಸ್ತಾಪುರ, ಅಣವಾರ, ಚಿಂಚೋಳಿ, ದೇಗಲಮಡಿ, ಮುಕರಂಬಾ, ಕನಕಪುರ, ಚೆನ್ನೂರ, ಸುಲೇಪೇಟದಲ್ಲಿ ಸಾವಿರಾರು ಎಕರೆಯಲ್ಲಿ ಉಳ್ಳಾಗಡ್ಡಿ ಬೆಳೆಯಲಾಗಿದೆ. ಉಳ್ಳಾಗಡ್ಡಿಯನ್ನು ಚೀಲಗಳಲ್ಲಿ ತುಂಬಿ ಲಾರಿ ಮೂಲಕ ಸಾಗಿಸುವಷ್ಟರಲ್ಲಿಯೇ ಆಂಧ್ರ, ತೆಲಂಗಾಣ, ಮುಂಬೈ,ಪುಣೆ, ಕಲಬುರಗಿ, ಬೀದರ, ಜಹಿರಾಬಾದ, ತಾಂಡೂರ ಮಾರುಕಟ್ಟೆಯಲ್ಲಿ ವ್ಯಾಪಾರ-ವಹಿವಾಟು ಬಂದ್‌ ಆಗಿದ್ದರಿಂದ ರೈತರಿಗೆ ಏನು ಮಾಡಬೇಕು ಎಂದು ತೋಚುತ್ತಿಲ್ಲ.

ಚಿಂಚೋಳಿ ತಾಲೂಕಿನಲ್ಲಿ ಹೆಚ್ಚಿನ ರೈತರು ಕಲ್ಲಂಗಡಿ ಬೆಳೆದಿದ್ದಾರೆ. ಮೊದಲ ಹಂತದಲ್ಲಿ 80 ಟನ್‌ ಕಲ್ಲಂಗಡಿ ಮಾರಾಟವಾಗಿದೆ. ಇನ್ನು 25 ಟನ್‌ ಕಲ್ಲಂಗಡಿ ಮಾರಾಟ ಆಗದೇ ಉಳಿದಿದೆ. ಪಪ್ಪಾಯಿ 25 ಎಕರೆ, ಬಾಳೆಹಣ್ಣು, ಉಳ್ಳಾಗಡ್ಡಿ, ಅರಿಶಿಣವನ್ನು ತಲಾ ಒಂದು ಸಾವಿರ ಎಕರೆಯಲ್ಲಿ ರೈತರು ಬೆಳೆದಿದ್ದಾರೆ. ಆದರೆ ಎಲ್ಲ ಕಡೆ ಲಾಕ್‌ ಡೌನ್‌ ಇರುವುದರಿಂದ ಸರ್ಕಾರದಿಂದಲೇ ಈ ಎಲ್ಲ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸುವ ಪ್ರಯತ್ನ ನಡೆಯುತ್ತಿದೆ.
ಅಜೀಮುದ್ದಿನ್‌,
ತಾಲೂಕು ಸಹಾಯಕ ತೋಟಗಾರಿಕೆ ನಿರ್ದೇಶಕ

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.