ರಾಜ್ಯದಲ್ಲಿ ಕ್ರೈಸ್ತರ ರಕ್ಷಣೆಗೆ ಆಗ್ರಹಿಸಿ ರ್‍ಯಾಲಿ


Team Udayavani, Oct 13, 2021, 5:56 PM IST

13

ಬೀದರ: ಕರ್ನಾಟಕದಲ್ಲಿ ಕ್ರೈಸ್ತರ ಮೇಲೆ ಆಗುತ್ತಿರುವ ಅನ್ಯಾಯದ ವಿರುದ್ಧ ಕಾನೂನಿನ ಕ್ರಮ ಕೈಗೊಂಡು, ಅಲ್ಪಸಂಖ್ಯಾತರಾದ ಕ್ರೈಸ್ತರಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಮಂಗಳವಾರ ಕರ್ನಾಟಕ ಕ್ರೈಸ್ತರ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಸಮಾಜ ಬಾಂಧವರು ಪ್ರತಿಭಟನಾ ರ್‍ಯಾಲಿ ನಡೆಸಿದರು.

ವೇದಿಕೆ ಅಧ್ಯಕ್ಷ ಭಾಸ್ಕರ್‌ ಬಾಬು ಪಾತರಪಳ್ಳಿ ನೇತೃತ್ವದಲ್ಲಿ ವೇದಿಕೆ ನಗರದ ಅಂಬೇಡ್ಕರ್‌ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್‍ಯಾಲಿ ನಡೆಸಲಾಯಿತು. ಬಳಿಕ ರಾಜ್ಯಪಾಲರಿಗೆ ಬರೆದ ಮನವಿಯನ್ನು ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಅವರಿಗೆ ಸಲ್ಲಿಸಲಾಯಿತು.

ಸಂವಿಧಾನದ ಪ್ರಕಾರ ಭಾರತದಲ್ಲಿರುವ ಯಾವುದೇ ಪ್ರಜೆ ಯಾವುದೇ ಧರ್ಮವನ್ನು ಸ್ವೀಕರಿಸಲು, ಆಚರಿಸಲು ಹಾಗೂ ಪ್ರಚಾರ ಮಾಡುವ ಹಕ್ಕನ್ನು ಹೊಂದಿರುತ್ತಾನೆ. ಈ ಹಕ್ಕನ್ನು ಮೊಟಕುಗೊಳಿಸಲು ಕೆಲವು ಹಿಂದುಪರ ಸಂಘಟನೆಗಳು ಕ್ರೈಸ್ತರು, ಹೆಣ್ಣು ಮಕ್ಕಳು ಮತ್ತು ಪ್ರಾರ್ಥನೆ ಮಂದಿರಗಳ ಮೇಲೆ ದಾಳಿ ಮಾಡಿ ತೊಂದರೆ ನೀಡುತ್ತಿದ್ದಾರೆ. ಇದು ಕಾನೂನು ರೀತಿ ಅಪರಾಧವಾಗಿದೆ. ಈ ರೀತಿಯ ವರ್ತನೆ ಸುಮಾರು ವರ್ಷಗಳಿಂದ ನಡೆಯುತ್ತಿದ್ದರೂ ಸರ್ಕಾರ, ಅಧಿಕಾರಿಗಳು ಮೂಕ ಪ್ರೇಕ್ಷಕರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಕೆಲವು ಸಮಾಜ ಘಾತುಕ ವ್ಯಕ್ತಿ ಹಾಗೂ ಸಂಘಟನೆಗಳು ಇದಕ್ಕೆ ಒತ್ತಾಯದ ಮತಾಂತರ ಎಂದು ಬಣ್ಣ ಹಚ್ಚಿ ಅಮಾಯಕ ದೈವ ಸೇವಕರ ಮೇಲೆ ಹಾಗೂ ಅವರ ಕುಟುಂಬದವರ ಮೇಲೆ ದಾಳಿ ಮಾಡಲಾಗುತ್ತಿದೆ. ಹೊಸದುರ್ಗ ಶಾಸಕರು ತಮ್ಮ ತಾಯಿಯೇ ಮತಾಂತರ ಆಗಿದ್ದಾರೆಂದು ವಿಧಾನಸಭೆಯಲ್ಲಿ ಹೇಳಿ ಅವಮಾನಿಸುವುದು ಎಷ್ಟು ಸರಿ. ಈಗಾಗಲೇ ಅನೇಕ ವರದಿಗಳು ಅಲ್ಲಿ ಮತಾಂತರ ನಡೆದಿಲ್ಲ ಎಂದು ಪೊಲೀಸ್‌ ಮತ್ತು ಮಾಧ್ಯಮ ವರದಿಗಳು ಹೊರಬಿದ್ದಿವೆ. ಆದರೂ ಒಬ್ಬ ಶಾಸಕನಾಗಿ ಧರ್ಮದ ವಿಷ ಬೀಜ ಬಿತ್ತುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಅನಧಿಕೃತ ದೇವಾಲಯಗಳೆಂದು ಅನೇಕ ಚರ್ಚ್ ಗಳು ನೆಲಸಮ ಮಾಡಲಾಗಿದೆ. ವಿವಿಧೆಡೆ ನೆಲಸಮ ಮಾಡಿರುವ ಚರ್ಚ್ ಗಳನ್ನು ಸರ್ಕಾರವೇ ಪುನರ್‌ ನಿರ್ಮಾಣ ಮಾಡಿ ಕೊಡಲು ಆದೇಶಿಸಬೇಕು ಎಂದು ಆಗ್ರಹಿಸಲಾಗಿದೆ.

ಪ್ರಕಾಶ ಕೋಟೆ, ಸಾಮಸನ್‌ ಹಿಪ್ಪಳಗಾಂವ್‌, ರಾಜೇಶ ಜೋತಿ, ಸುಧಾಕರ ಡೋಣೆ, ಸಾಲಮನ್‌ ಮರ್ಜಾಪುರ, ಸುನೀಲ ಹಿರೇಮಾನಿ, ರೇ. ರಾಜಕುಮಾರ ಬರ್ಮ, ದಶರಥ ಮೀಶೆ, ಸುಂದರರಾಜ್‌ ಫಿರಂಗೆ, ಮಾಣಿಕ ಕೌಠಾ, ದತ್ತು ಸೋನೆ ಮತ್ತು ಲೋಕೇಶ ಕನಕ ಇನ್ನಿತರರು ಭಾಗವಹಿಸಿದ್ದರು.

ಧರ್ಮ ಸ್ವೀಕರಿಸಿದರೆ ಜಾತಿ ಬದಲಾಗದು

ಕ್ರೈಸ್ತ ಧರ್ಮವು ಒಂದು ಜಾತಿಯಲ್ಲ, ಇದು ಒಂದು ಧರ್ಮ. ಸಂವಿಧಾನತ್ಮಕವಾಗಿ ಯಾವುದೇ ವ್ಯಕ್ತಿ ಯಾವುದೇ ತನಗಿಷ್ಟವಾದ ಧರ್ಮವನ್ನು ಸ್ವೀಕರಿಸಬಹುದಾಗಿದೆ. ಇದನ್ನು ತಡೆಯುವ ಅಧಿಕಾರ ಯಾರಿಗೂ ಇಲ್ಲ. 1983ರಲ್ಲಿ ಸರ್ವೋಚ್ಚ ನ್ಯಾಯಾಲವು ತಮಿಳುನಾಡಿನ ಅನಬಳಗನ್‌ ಎಂಬುವವರ ಕೇಸನಲ್ಲಿ ಯಾವುದೇ ಧರ್ಮವನ್ನು ಬದಲಾಯಿಸಬಹುದು. ಆದರೆ ಜಾತಿಯಲ್ಲ, ಧರ್ಮವನ್ನು ಸ್ವೀಕರಿಸಿದ ಮಾತ್ರಕ್ಕೆ ಜಾತಿ ಬದಲಾವಣೆ ಆಗುವುದಿಲ್ಲ. ಹೀಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲವು ಸಮಾಜ ಘಾತುಕ ಶಕ್ತಿಗಳನ್ನು ನಿಗ್ರಹಿಸಬೇಕು. ಇಲ್ಲದಿದ್ದರೆ ಸಮಾಜದಲ್ಲಿ ಶಾಂತಿಭಂಗಕ್ಕೆ ನಾಂದಿಯಾಗುತ್ತಿದೆ ಎಂದು ಮನವಿ ಮೂಲಕ ಪ್ರತಿಭಟನಾಕಾರರು ತಿಳಿಸಿದರು.

 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.