ನಗರ ವ್ಯಾಪಿಗೆ ವಾರ ಪೂರ್ತಿ ಕುಡಿವ ನೀರು ಪೂರೈಕೆ


Team Udayavani, Apr 21, 2021, 3:26 PM IST

ACX

 ರಾಮನಗರ: ನಗರದಲ್ಲಿ ಕುಡಿಯುವ ನೀರಿನ ತೊಂದರೆ ನೀಗಿಸಲು ಆರಂಭವಾಗಿದ್ದ ಯೋಜನೆಗೆ ಇದ್ದ ಎಲ್ಲಾ ತೊಡಕುಗಳು ನಿವಾರಣೆಯಾಗಿದೆ. 2022ನೇ ಸಾಲಿನಲ್ಲಿ ವಾರದ ಎಲ್ಲಾ ದಿನಗಳಲ್ಲೂ ಕುಡಿ ಯುವ ನೀರು ಪೂರೈಸುವ ಯೋಜನೆ ಜಾರಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದರು.

ರಾಮನಗರ ನಗರಸಭೆಯ ಚುನಾವಣೆ ಹಿನ್ನೆಲೆ ಯಲ್ಲಿ ನಗರದ ಶ್ರೀಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬಿಜೆಪಿಯ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ನಂತರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಬಿಜೆಪಿ ಸರ್ಕಾರಕ್ಕೆ ರಾಮನಗರ ಸೇರಿ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕಾಳಜಿ ಇದೆ. ನಗರಸಭೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ತಮ್ಮ ಸರ್ಕಾರಕ್ಕೆ ಇನ್ನು ಹೆಚ್ಚಿನ ಬಲ ಬಂದತಾಗುತ್ತದೆ ಎಂದು ಹೇಳಿದರು.

ಅರ್ಕಾವತಿ ನದಿ ಪುನರುಜ್ಜೀವನ: ಜಿಲ್ಲಾ ಕೇಂದ್ರದಲ್ಲಿ ಒಳಚರಂಡಿ ವ್ಯವಸ್ಥೆಯೂ ಸಮರ್ಪಕವಾಗಿಲ್ಲ. ಹೀಗಾಗಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದಅವರು, ನಗರವ್ಯಾಪ್ತಿಯಲ್ಲಿ ಎರಡು ಕೆರೆ ಗಳಿದ್ದು, ಅವು ಗಳನ್ನು ಉತ್ತಮವಾಗಿ ಅಭಿವೃದ್ಧಿಪಡಿಸಿ ವಾಯುವಿಹಾರಕ್ಕೆ ವ್ಯವಸ್ಥೆ ಮಾಡುವ ಉದ್ದೇಶವಿದೆ. ಎಲ್ಲಾ ಪಾರ್ಕ್‌ ಗಳನ್ನು ಅಭಿವೃದ್ಧಿ ಮಾಡಲಾಗವುದು. ರಾಮನಗರದ ಜೀವಸೆಲೆ ಯಾದ ಅರ್ಕಾವತಿ ನದಿ ಯನ್ನು ಪುನರುಜ್ಜೀವನಗೊಳಿಸ ಲಾಗುವುದು ಎಂದು ತಿಳಿಸಿದರು.

ನಗರಪಾಲಿಕೆಯಾಗಲಿದೆ: ರಾಮನಗರ ನಗರಾಭಿ ವೃದ್ಧಿ ಪ್ರಾಧಿಕಾರ 1994ರಿಂದ ಅಸ್ತಿತ್ವದಲ್ಲಿದೆ. ಆದರೆ, ನಗರಾಭಿವೃದ್ದಿಗೆ ಬೇಕಾದ ಮಾಸ್ಟರ್‌ ಪ್ಲಾನ್‌ ಇಲ್ಲದೆ ಕಾರ್ಯನಿರ್ವಹಿಸುತ್ತಿದೆ. ರಾಮನಗರ ಮತ್ತು ಚನ್ನಪಟ್ಟಣ ಅವಳಿ ನಗರಗಳನ್ನಾಗಿ ಅಭಿವೃದ್ಧಿ ಪಡಿಸಲು ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಿಕೊಳ್ಳುವುದಾಗಿ ತಿಳಿಸಿದ ಡೀಸಿಎಂ, ಮುಂದಿನ ಐದು ವರ್ಷಗಳಲ್ಲಿ ರಾಮನಗರ ನಗರಸಭೆ, ನಗರಪಾಲಿಕೆಯಾಗಲಿದೆ. ನಗರ ಪಾಲಿಕೆ ಮಾಡುವುದಾಗಿ ನಾವು ಕೇವಲ ಬಾಯಿ ಮಾತಿನ ವಾಗ್ಧಾನ ಮಾಡುತ್ತಿಲ್ಲ. ಇದು ಬಿಜೆಪಿಯ ಗುರಿಯೂ ಹೌದು ಎಂದು ಹೇಳಿದರು.

ಇನ್ನೂ ಮಣ್ಣು ರಸ್ತೆ ಇದೆ!: ರಾಮನಗರದಲ್ಲಿ 190 ಕಿ.ಮೀ ಉದ್ದದ ರಸ್ತೆ ಇದೆ. ಇದರಲ್ಲಿ 150 ಕಿ.ಮೀ. ನಷ್ಟು ರಸ್ತೆ ಡಾಂಬರೀಕರಣಗೊಂಡಿದೆ. ಉಳಿದ 40 ಕಿ. ಮೀ. ರಸ್ತೆಯಲ್ಲಿ ಬರೀ ಮಣ್ಣು ಬಿಟ್ಟರೆ ಅಲ್ಲಿ ಏನೂ ಇಲ್ಲ. ಇರುವ ಡಾಂಬರು ರಸ್ತೆ ಕೂಡ ಪರಮ ಕಳಪೆ. ಆಧುನಿಕ ಮಾನದಂಡಗಳ ಪ್ರಕಾರ ಗುಣಮಟ್ಟದ ರಸ್ತೆಗಳನ್ನು ವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗು ವುದು ಎಂದು ವಿವರಿಸಿದರು. ನಗರಸಭೆಯ ಆಡಳಿತ: ತಮ್ಮ ಪಕ್ಷ ನಗರಸಭೆಯಲ್ಲಿ ಅಧಿಕಾರಕ್ಕೆ ಬಂದರೆ ಪಾರದರ್ಶಕ ಆಡಳಿತಕ್ಕೆ ಪ್ರಾಮುಖ್ಯತೆ ಕೊಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಡೀಸಿಎಂ ಅಶ್ವತ್ಥನಾರಾಯಣ ತಿಳಿಸಿದರು.

ಇ-ಖಾತೆ ಸಮಸ್ಯೆ, ಮನೆ ನಿರ್ಮಿಸಿಕೊಡುವ ಯೋಜನೆ ಜಾರಿ ಹೀಗೆ ಸಮರ್ಥ ಆಡಳಿತ ನೀಡುವುದಾಗಿ ತಿಳಿಸಿದರು. ನಗರಸಭೆಯ ಆದಾಯದ ಬಗ್ಗೆಯೂ ಕಾಳಜಿವಹಿಸಿ ನಾಗರಿಕರು ತೆರಿಗೆಯನ್ನು ಪಾವತಿಸುವಂತೆ ಪ್ರೋತ್ಸಾಹಿಸುವುದಾಗಿ ತಿಳಿಸಿದರು. ಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲುವಾಡಿ ದೇವರಾಜ್‌, ವಿಧಾನ ಪರಿಷತ್‌ ಸದಸ್ಯರಾದ ಅ.ದೇವೇಗೌಡ, ಪುಟ್ಟಣ್ಣ, ರಾಮನಗರ ನಗರಾಭಿವೃದ್ದಿ ಪ್ರಾಧಿ ಕಾರದ ಅಧ್ಯಕ್ಷ ಮುರಳೀಧರ, ನಗರ ಬಿಜೆಪಿ ಅಧ್ಯಕ್ಷ ಪಿ.ಶಿವಾನಂದ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರುದ್ರದೇವರು, ಮಾಧ್ಯಮ ವಕ್ತಾರ ಚಂದ್ರಶೇಖರ ರೆಡ್ಡಿ, ಪ್ರಮುಖರಾದ ಬಿ.ನಾಗೇಶ್‌, ರಾಜೇಶ್‌, ಡಿ.ನರೇಂದ್ರ, ಬಿಜೆಪಿ ಮಂಜು, ಜಿ.ವಿ.ಪದ್ಮನಾಭ ಮುಂತಾ ದವರು ಹಾಜರಿದ್ದರು.

ಟಾಪ್ ನ್ಯೂಸ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ರಾಜಕೀಯ ಬಿಟ್ಟು ಕೃಷಿ ಮಾಡುವೆ: ಸಂಗಣ್ಣ ಕರಡಿ

Lok Sabha Election: ರಾಜಕೀಯ ಬಿಟ್ಟು ಕೃಷಿ ಮಾಡುವೆ: ಸಂಗಣ್ಣ ಕರಡಿ

Politics: ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್‌ಗೆ ಅಧಿಕಾರ: ಡಿಕೆಶಿ

Politics: ರಾಜ್ಯದಲ್ಲಿ ಇನ್ನೂ 9 ವರ್ಷ ಕಾಂಗ್ರೆಸ್‌ಗೆ ಅಧಿಕಾರ: ಡಿಕೆಶಿ

Politics: ಪ್ರಧಾನಿ ಅಧಿಕಾರಕ್ಕಾಗಿ ಏನಾದರೂ ಮಾಡುತ್ತಾರೆ; ಸಚಿವ ಭೋಸರಾಜು ವಾಗ್ದಾಳಿ

Politics: ಪ್ರಧಾನಿ ಅಧಿಕಾರಕ್ಕಾಗಿ ಏನಾದರೂ ಮಾಡುತ್ತಾರೆ; ಸಚಿವ ಭೋಸರಾಜು ವಾಗ್ದಾಳಿ

Raichur; ಅನಂತ ಕುಮಾರ್ ಹೆಗಡೆ ಮೂರ್ಖ ಸಂಸದ: ಸಚಿವ ಬಿ.ನಾಗೇಂದ್ರ

Raichur; ಅನಂತ ಕುಮಾರ್ ಹೆಗಡೆ ಮೂರ್ಖ ಸಂಸದ: ಸಚಿವ ಬಿ.ನಾಗೇಂದ್ರ

SHriramulu (2)

BJP; ಒಂದೆರಡು ದಿನಗಳಲ್ಲಿ 20 ಕ್ಷೇತ್ರಗಳ ಅಭ್ಯರ್ಥಿ ಘೋಷಣೆ, ನನ್ನ ಹೆಸರೂ ಇದೆ: ಶ್ರೀ ರಾಮುಲು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.