ಈ ಕಚೇರಿಗಳಲ್ಲಿ ಕೆಲ ಹುದ್ದೆಗಳು ಖಾಲಿ ಖಾಲಿ!
Team Udayavani, May 31, 2022, 5:58 PM IST
ದೇವದುರ್ಗ: ಸಮೀಪದ ಅಮರಾಪುರ ಕ್ರಾಸ್ ಹತ್ತಿರದಲ್ಲಿರುವ ಕೃಷ್ಣಾ ಭಾಗ್ಯ ಜಲ ನಿಗಮ ಸಹಾಯಕ ಕಾರ್ಯಪಾಲಕ ಇಂಜನಿಯರ್ ಉಪ ವಿಭಾಗ ಸಂಖ್ಯೆ 11 ಮತ್ತು 12 ಕಚೇರಿಯಲ್ಲಿ ಕೆಲ ಹುದ್ದೆಗಳು ಖಾಲಿ ಇದ್ದು, ಇವುಗಳ ಮಧ್ಯೆಯೇ ಕಾರ್ಯ ನಿರ್ವಹಿಸಲಾಗುತ್ತಿದೆ.
ಕಚೇರಿ ಸುತ್ತಲೂ ಜಾಲಿಗಿಡಗಳು ಬೆಳೆದಿದ್ದು, ಸ್ವಚ್ಛತೆಗೆ ಕ್ರಮ ವಹಿಸದ ಹಿನ್ನೆಲೆಯಲ್ಲಿ ಅವ್ಯವಸ್ಥೆಯ ಆಗರವಾಗಿದೆ. ಕಚೇರಿಗಳ ನಿರ್ವಹಣೆ ಕೊರತೆಯಿಂದ ಅಲ್ಲಲ್ಲಿ ಗೋಡೆ ಬಿರುಕು ಬಿಟ್ಟಿವೆ. ರಾತ್ರಿ ಕಾವಲುಗಾರರು ಇಲ್ಲದ ಕಾರಣ ಕಳ್ಳರ ಕಾಟ ಹೆಚ್ಚಿದೆ.
ಉಪವಿಭಾಗ 12ರಲ್ಲೂ ಹುದ್ದೆ ಖಾಲಿ
ಕೃಷ್ಣಾ ಭಾಗ್ಯ ಜಲ ನಿಗಮ ಸಹಾಯಕ ಕಾರ್ಯಪಾಲಕ ಅಭಿಯಂತರ ಉಪವಿಭಾಗ 12ರಲ್ಲಿ ಕೆಲ ಹುದ್ದೆಗಳು ಖಾಲಿ ಇವೆ. ಸಹಾಯಕ ಅಭಿಯಂತರ ಎರಡು ಹುದ್ದೆಗಳು ಎರಡು ಖಾಲಿ ಇದ್ದು, ಭರ್ತಿಯಾಗಿಲ್ಲ. ಪ್ರಥಮ ದರ್ಜೆ ಭೂಮಾಪಕ ಹುದ್ದೆ, ಆಡಳಿತ ವಿಭಾಗ ಪ್ರಥಮ ದರ್ಜೆ ಸಹಾಯಕ ಹುದ್ದೆ, ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳು ಖಾಲಿ ಇವೆ. ಪರಿಚಾರಕ ಎರಡು ಹುದ್ದೆಗಳು, ರಾತ್ರಿ ಕಾವಲುಗಾರ ಹುದ್ದೆಯೂ ಖಾಲಿಯಿದೆ.
11 ಉಪ ವಿಭಾಗದಲ್ಲೂ ಕೊರತೆ
ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಕಚೇರಿ ಉಪ ವಿಭಾಗ 11ರಲ್ಲಿ ಸಹಾಯಕ ಅಭಿಯಂತರ, ದ್ವಿತೀಯ ದರ್ಜೆ ಸಹಾಯಕ, ಬೆರಳಚ್ಚುಗಾರ, ವಾಹನ ಚಾಲಕ, ಪರಿಚಾರಕ ಹುದ್ದೆಗಳು ಖಾಲಿ ಇವೆ. ಅದರಲ್ಲಿ ಕಂಪ್ಯೂಟರ್ ಕೆಟ್ಟು ಹೋಗಿ ವರ್ಷವಾದರೂ ಇಲ್ಲಿಯವರೆಗೆ ದುರಸ್ತಿ ಆಗಿಲ್ಲ. ಹೀಗಾಗಿ ಆನ್ಲೈನ್ ಮೂಲಕ ದಾಖಲಾತಿ ಮಾಹಿತಿ ಪಡೆಯಲು ಖಾಸಗಿ ಅಂಗಡಿಗಳ ಮೊರೆ ಹೋಗುವ ಸ್ಥಿತಿ ಇದೆ.
ಅವ್ಯವಸ್ಥೆಯ ತಾಣ
ಕೃಷ್ಣಾ ಭಾಗ್ಯ ಜಲ ನಿಗಮ ಸಹಾಯಕ ಕಾರ್ಯ ನಿರ್ವಾಹಕ ಕಚೇರಿ ಉಪ ವಿಭಾಗ 11, 12 ಮತ್ತು 13 ಕಚೇರಿಗಳ ಸುತ್ತಲೂ ಜಾಲಿಗಿಡಗಳು ಬೆಳೆದು ಅವ್ಯವಸ್ಥೆಯ ಆಗರವಾಗಿದೆ. ಸ್ವಚ್ಛತೆ ಇಲ್ಲದ ಕಾರಣ ವಿಷಜಂತುಗಳ ಕಾಟ ಹೆಚ್ಚಿದೆ. ಕಚೇರಿಗಳ ನಿರ್ವಹಣೆ ಕೊರತೆ ಹಿನ್ನೆಲೆಯಲ್ಲಿ ಅಲ್ಲಲ್ಲಿ ಗೋಡೆಗಳು ಬಿರುಕು ಬಿಟ್ಟಿವೆ. ಸ್ವಚ್ಛತೆ ಇಲ್ಲದ ಕಾರಣ ಎಲ್ಲೆಂದರಲ್ಲಿ ಧೂಳು ಆವರಿಸಿವೆ. ಅಧಿಕಾರಿಗಳು ಸ್ವಚ್ಛತೆ ಕುರಿತು ಇನ್ನಾದರೂ ಗಮನ ಹರಿಸುತ್ತಾರೆಯೇ ಕಾದು ನೋಡಬೇಕಿದೆ.
ಕಚೇರಿಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಇಲ್ಲಿಯವರೆಗೆ ಭರ್ತಿಯಾಗಿಲ್ಲ. ಕೆಲಸದ ಒತ್ತಡ ಹೆಚ್ಚಾದರೂ ಇದ್ದವರೇ ಎಲ್ಲ ಕೆಲಸ ಕಾರ್ಯಗಳನ್ನು ಮಾಡುವಂತಾಗಿದೆ. –ಆರ್. ಚಂದ್ರಶೇಖರ, ಸಹಾಯಕ ಕಾರ್ಯಪಾಲಕ ಅಭಿಯಂತರು ಉಪವಿಭಾಗ 12
ಕಚೇರಿ ಸುತ್ತಲೂ ಬೆಳೆದಿರುವ ಜಾಲಿ ಗಿಡಗಳ ಸ್ವತ್ಛಗೊಳಿಸಲು ಕ್ರಮ ವಹಿಸಲಾಗುತ್ತದೆ. ಕೆಟ್ಟಿರುವ ಕಂಪ್ಯೂಟರ್ ದುರಸ್ತಿ ಮಾಡಿಸಲಾಗುತ್ತದೆ. ಕೆಲ ಹುದ್ದೆಗಳು ಖಾಲಿ ಇದ್ದು, ಕಚೇರಿ ನಿರ್ವಹಣೆ ಮಾಡಲಾಗುತ್ತಿದೆ. -ಮನೋಹರ, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರು ಉಪ ವಿಭಾಗ 11
-ನಾಗರಾಜ ತೇಲ್ಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!