ದೇವರು ಕಾಲೋನಿಯಲ್ಲಿ ಸ್ವಚ್ಛತಾ ಅಭಿಯಾನ


Team Udayavani, Nov 16, 2021, 5:52 PM IST

23clean

ರಾಯಚೂರು: ನಗರದ ಕೆಲವು ಸರ್ಕಾರಿ ಮತ್ತು ಸರ್ಕಾರೇತರ ಸಂಘ ಸಂಸ್ಥೆಗಳು, ಸಮಾನ ಮನಸ್ಕರು ಒಗ್ಗೂಡಿ “ಸ್ವಚ್ಛ-ಸುಂದರ ಶಾಲೆ, ನಮ್ಮನಿಮ್ಮೆಲ್ಲರ ಹೊಣೆ’ ಎಂಬ ಧ್ಯೇಯವಾಕ್ಯದೊಂದಿಗೆ “ಸಂಕಲ್ಪ’ ಹೆಸರಿನ ಶಾಲಾ ಸ್ವಚ್ಛತಾ ಅಭಿಯಾನ ನಡೆಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ, ಲಯನ್ಸ ಕ್ಲಬ್‌, ಗ್ರೀನ್‌ ರಾಯಚೂರು, ಶಿಲ್ಪಾ ಫೌಂಡೇಶನ್‌, ಲಿಯೋ ಕ್ಲಬ್‌, ಪರ್ಯಾವರಣ ಸಂರಕ್ಷಣೆ ಗತಿವಿ ಸಹಯೋಗದಲ್ಲಿ ನಗರದ ದೇವರು ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವತ್ಛತಾ ಕಾರ್ಯ ನಡೆಸಲಾಯಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಜನ್‌ ರಮೇಶ್‌ ಅಪ್ಪಾಸಾಹೇಬ್‌ ಮಾತನಾಡಿ, ಲಾಕ್‌ ಡೌನ್‌ನಲ್ಲಿ ಎಲ್ಲ ಶಾಲೆಗಳು ಸಂಪೂರ್ಣ ಮುಚ್ಚಿದ್ದರಿಂದ ಗಿಡ-ಗಂಟಿ ಬೆಳೆದಿದ್ದು, ತ್ಯಾಜ್ಯ ಸಂಗ್ರಹಗೊಂಡಿದೆ. ಮಕ್ಕಳಿಗೆ ಓದುವ ವಾತಾವರಣ ಇಲ್ಲದಾಗಿದೆ. ಇಂಥ ವೇಳೆ ಎಲ್ಲರೂ ಸೇರಿ ಶಾಲಾವರಣ ಸ್ವಚ್ಛತೆ ಮಾಡಿದ್ದು ಶ್ಲಾಘನೀಯ ಕೆಲಸ. ಸಸಿ ನೆಟ್ಟು ಅದರ ಪೋಷಣೆ ಜವಾಬ್ದಾರಿ ಶಿಕ್ಷಕರ ಮಾರ್ಗದರ್ಶನದಲ್ಲಿ ಮಕ್ಕಳಿಗೆ ನೀಡಿರುವುದು ಉತ್ತಮ ನಿರ್ಧಾರ ಎಂದರು.

ಲಯನ್ಸ್ ಕ್ಲಬ್‌ ಅಧ್ಯಕ್ಷ ಡಾ| ಮಹಾಲಿಂಗಪ್ಪ ಮಾತನಾಡಿ, ನಾನು ಕೂಡ ಸರ್ಕಾರಿ ಶಾಲೆಯಲ್ಲಿಯೇ ಓದಿದ್ದೇನೆ. ಆರೋಗ್ಯ ರಕ್ಷಣೆ, ಪೌಷ್ಟಿಕ ಆಹಾರ ಸೇವನೆ, ಶಾಲೆ-ಮನೆ-ಬೀದಿಗಳಲ್ಲಿ ಸ್ವತ್ಛತೆ ಕಾಪಾಡುವುದು ಅಗತ್ಯ. ಎಲ್ಲರೂ ಮುಂದೆ ಇಂಥ ಸಾಮಾಜಿಕ ಕಾರ್ಯ ಮಾಡಬೇಕು ಎಂದರು.

ಗ್ರೀನ್‌ ರಾಯಚೂರು ಕಾರ್ಯದರ್ಶಿ ರಾಜೇಂದ್ರಕುಮಾರ್‌ ಶಿವಾಳೆ ಮಾತನಾಡಿ, ಲಾಕ್‌ಡೌನ್‌ ಬಳಿಕ ಸರ್ಕಾರಿ ಶಾಲೆಗಳ ಆವರಣ ಅಶುಚಿತ್ವದ ಸಮಸ್ಯೆ ತಲೆದೂರಿರುವ ಕಾರಣ ಶಾಲೆಗಳನ್ನು ಸ್ವತ್ಛಗೊಳಿಸುವ ಜೊತೆಗೆ ಸಸಿ ನೆಡಲಾಗುವುದು. ಶಾಲಾ ಕಟ್ಟಡಗಳಿಗೆ ಸುಣ್ಣ-ಬಣ್ಣ ಮಾಡಿಸುವ ಸಂಕಲ್ಪ ಮಾಡಿದ್ದೇವೆ. ವಾರಕ್ಕೊಂದು ಶಾಲೆಯಂತೆ ಬರುವ ದಿನಗಳಲ್ಲಿ ನಗರದ ಎಲ್ಲ 10-15 ಶಾಲೆಗಳಲ್ಲಿ ಅಭಿಯಾನ ನಡೆಸಲಾಗುವುದು ಎಂದರು.

ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಪ್ರತಿಜ್ಞಾವಿಧಿ ಬೋ ಧಿಸಲಾಯಿತು. ಈ ವೇಳೆ ಲಯನ್ಸ್‌ ಕ್ಲಬ್‌ ಹಿರಿಯ ಸದಸ್ಯ ಗೋವಿಂದರಾಜ, ಹಿರಿಯ ಶಸ್ತ್ರಚಿಕಿತ್ಸಕ ಡಾ| ಎಂ.ಕೆ. ರಾಮಕೃಷ್ಣ, ಬಿಇಒ ಚಂದ್ರಶೇಖರ್‌ ದೊಡ್ಡಮನಿ, ಪ್ರಕಾಶ್‌ ಕುಲಕರ್ಣಿ, ಉದಯ್‌ ಕಿರಣ, ಪಿಯುಶ್‌ ಜೈನ್‌, ಉಪನ್ಯಾಸಕ ವಿಜಯ್‌ ಸರೋದೆ, ಅಮಿತ್‌ ದಂಡಿನ, ವಿನೋದ್‌, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ರಾಜ್ಯ ಸದಸ್ಯರಾದ ಸರಸ್ವತಿ ಕಿಲಕಿಲೆ, ಶಿಕ್ಷಕಿ ಎಂ. ಸರೋಜಾ, ಶ್ರೀದೇವಿ ಇತರರಿದ್ದರು.

ಟಾಪ್ ನ್ಯೂಸ್

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

rajinikanth

Rajinikanth ಬಯೋಪಿಕ್‌ಗೆ ಭರ್ಜರಿ ತಯಾರಿ; ಬಾಲಿವುಡ್‌ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.