25 ವರ್ಷವಾದ್ರೂ “ಕೈ’ ಅಧಿಕಾರಕ್ಕೆ ಬರಲ್ಲ : ಯಡಿಯೂರಪ್ಪ
ಮಹಿಳೆಯರ ಸ್ವಾವಲಂಬನೆಗೆ ಬಜೆಟ್ನಲ್ಲಿ ಅನುದಾನ ಮೀಸಲು: ಯಡಿಯೂರಪ್ಪ
Team Udayavani, Apr 11, 2021, 8:17 PM IST
ಬಳಗಾನೂರು: ಎನ್ಆರ್ಬಿಸಿ ಹಾಗೂ 5ಎ ಕಾಲುವೆ ಹೋರಾಟ ರಾಜಕೀಯ ಪ್ರೇರಿತವಾಗಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಯೋಜನೆಯನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಈ ಹಿಂದೆ 5 ವರ್ಷ ನೀವೇ ಅಧಿಕಾರದಲ್ಲಿದ್ರಿ. ಯಾಕೆ ಈ ಯೋಜನೆ ಜಾರಿಗೆ ತರಲಿಲ್ಲ. ಇನ್ನು ನೀವು ಅ ಧಿಕಾರಕ್ಕೆ ಬರುವುದು ದೂರದ ಮಾತು ಎಂದು ಮುಖ್ಯ ಮಂತ್ರಿ ಯಡಿಯೂರಪ್ಪ ಹೇಳಿದರು.
ಮಸ್ಕಿ ಕ್ಷೇತ್ರದ ಉಪಚುನಾವಣೆ ನಿಮಿತ್ತ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಪರ ಪ್ರಚಾರ ಕಾರ್ಯಕ್ರಮದ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿನ ಕೂಲಿ ನಾಲಿ ಮಾಡುವ ಬಡಕುಟುಂಬಗಳು ಕಣ್ಣೀರಾಕುತ್ತಿರುವುದನ್ನು ಕಂಡು ಹೆಣ್ಣು ಮಕ್ಕಳಿಗೆ ಭಾಗ್ಯ ಲಕ್ಷ್ಮೀ ಯೋಜನೆ ಜಾರಿಗೆ ತರಲಾಗಿದೆ ಎಂದರು.
ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಂಡು ಗೌರವದಿಂದ ಬದುಕಬೇಕು ಎಂಬ ಆಶಯವನ್ನು ಹೊಂದಿರುವ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಶೇ.4ರಷ್ಟು ಬಡ್ಡಿ ದರದಲ್ಲಿ 2 ಕೋಟಿಯವರೆಗಿನ ಸಾಲ ಯೋಜನೆ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಗುಡಿ ಕೈಗಾರಿಕೆ ಅಭಿವೃದ್ಧಿಗಾಗಿ 33 ಸಾವಿರ ಕೋಟಿ ರೂ. ಬಜೆಟ್ ನಲ್ಲಿ ಮೀಸಲಿಟ್ಟಿರುವುದಾಗಿ ತಿಳಿಸಿದರು.
ಸಚಿವರಾದ ಎಸ್.ಟಿ. ಸೋಮಶೇಖರ, ಬಿ.ಸಿ. ಪಾಟೀಲ್, ಬೈತರಿ ಬಸವರಾಜ, ಶ್ರೀರಾಮುಲು, ಶಾಸಕರಾದ ಎಂ.ಪಿ ರೇಣುಕಾಚಾರ್ಯ, ಬಸವರಾಜ ದಡೆಸೂಗೂರು, ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪಕ್ಷದ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ
MUST WATCH
ಹೊಸ ಸೇರ್ಪಡೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ