ಸಿಎಂಸಿಗೆ ಶುಲ್ಕ ಕಟ್ಟದ ಬಿಟ್ಟಿ ಪ್ರಚಾರ ಪ್ರಿಯರು!


Team Udayavani, May 10, 2022, 3:51 PM IST

15banner

ರಾಯಚೂರು: ಪ್ರಚಾರ ಪಡೆಯುವಲ್ಲಿ ನಾ ಮುಂದು ತಾ ಮುಂದು ಎಂದು ನಗರದ ಮೂಲೆ ಮೂಲೆಗಳಲ್ಲಿ ಫ್ಲೆಕ್ಸ್‌ಗಳನ್ನು ಅಳವಡಿಸುವ ನಾಯಕರು, ನಗರಸಭೆಗೆ ಶುಲ್ಕ ಕಟ್ಟಲು ಮಾತ್ರ ದೂರ ಉಳಿಯುತ್ತಾರೆ. ಜಾಹೀರಾತು ಫ್ಲೆಕ್ಸ್‌ಗಳಿಂದ ನಗರಸಭೆಗೆ ಬರಬೇಕಾದ ಆದಾಯ ಸಂಪೂರ್ಣ ಕಡಿಮೆಯಾಗಿದೆ.

ನಗರದ ಯಾವುದೇ ವೃತ್ತಗಳಿರಲಿ ಅಲ್ಲಿ ಒಂದಲ್ಲ ಒಂದು ಕಾರಣಕ್ಕೆ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿರುತ್ತದೆ. ಹಬ್ಬಗಳು, ಮಹಾನ್‌ ನಾಯಕರ ಜಯಂತಿಗಳು, ಜನಪ್ರತಿನಿಧಿಗಳ ಸ್ವಾಗತ, ಜನ್ಮದಿನಾಚರಣೆಗಳಿಗೆ ಶುಭ ಕೋರಿದ ಬ್ಯಾನರ್‌ಗಳನ್ನು ಅಳವಡಿಸಲಾಗಿರುತ್ತದೆ. ರಸ್ತೆ ಇಕ್ಕೆಲಗಳಲ್ಲಿ ಬ್ಯಾನರ್‌ ಹಾವಳಿ ಮಿತಿಮೀರಿದೆ.

ರಸ್ತೆ ಮಧ್ಯೆ ಇರುವಂಥ ವಿದ್ಯುತ್‌ ಕಂಬಗಳಿಗೂ ಫ್ಲೆಕ್ಸ್‌ಗಳನ್ನು ಅಳವಡಿಸುತ್ತಿದ್ದು, ಪ್ರಯಾಣಿಕರಿಗೆ ಕುತ್ತುಂಟು ಮಾಡುವಂತಿರುತ್ತದೆ. ಆದರೆ, ಇಷ್ಟೆಲ್ಲ ಬ್ಯಾನರ್‌ಗಳು, ಬಂಟ್ಸೆಂಗ್‌ ಗಳನ್ನು ಹಾಕಿದರೂ ನಗರಸಭೆಗೆ ಬರಬೇಕಾದ ಆದಾಯ ಮಾತ್ರ ಬರುತ್ತಿಲ್ಲ. ನಗರಸಭೆಗೆ ಪಾವತಿಸಬೇಕಾದ ಶುಲ್ಕವನ್ನು ಶೇ.80ರಷ್ಟು ಜನ ಕಟ್ಟುತ್ತಿಲ್ಲ ಎನ್ನುವುದು ವಾಸ್ತವ.

ಈ ಫ್ಲೆಕ್‌ ಗಳಲ್ಲಿ ರಾರಾಜಿಸುವವರು ಒಂದಲ್ಲ ಒಂದು ಪಕ್ಷಗಳಲ್ಲೋ, ಸಂಘಟನೆಗಳಲ್ಲೋ ಗುರುತಿಸಿಕೊಂಡವರೇ ಆಗಿರುತ್ತಾರೆ. ಶುಲ್ಕ ಕಟ್ಟುವಂತೆ ಕೇಳಿದರೆ ಸಾಕು ಪ್ರಭಾವಿಗಳಿಂದಲೇ ಕರೆ ಮಾಡಿಸಿ ಮನ್ನಾ ಮಾಡುವಂತೆ ಒತ್ತಾಯಿಸುತ್ತಾರಂತೆ. ಎಲ್ಲಕ್ಕಿಂತ ಮುಖ್ಯವಾಗಿ ನಗರಸಭೆ ಸದಸ್ಯರು, ಅಧಿಕಾರಿಗಳ ಸಂಬಂಧಿಕರು ಕೂಡ ಈ ರೀತಿ ಫ್ಲೆಕ್ಸ್‌ಗಳಲ್ಲಿ ಕಂಡು ಬರುತ್ತಾರೆ. ಅವರಿಂದ ಶುಲ್ಕ ವಸೂಲಿ ಮಾಡುವವರಾದರೂ ಯಾರು ಎನ್ನುವಂತಾಗಿದೆ.

ಶೇ.20 ಮಾತ್ರ ವಸೂಲಿ

ನಗರಸಭೆ ಮೂಲಗಳ ಪ್ರಕಾರ ಜಾಹೀರಾತಿನಿಂದ ಬರುವ ಆದಾಯದಲ್ಲಿ ಈಗ ಪ್ರತಿ ವರ್ಷ ಶೇ.20ರಷ್ಟು ಮಾತ್ರ ಹಣ ವಸೂಲಿ ಮಾಡಲಾಗುತ್ತಿದೆ. ಪ್ರತಿ ಚದರಡಿಗೆ 6 ರೂ.ನಂತೆ ಶುಲ್ಕ ನಿಗದಿಪಡಿಸಲಾಗಿದೆ. ಇದರಿಂದ ನಗರಸಭೆಗೆ ಪ್ರತಿ ವರ್ಷ ಸುಮಾರು 10 ಲಕ್ಷ ರೂ. ಗಿಂತ ಹೆಚ್ಚು ಆದಾಯ ಬರಬೇಕು. ಆದರೆ, ಕನಿಷ್ಠ ಎರಡು ಲಕ್ಷವೂ ಸಂಗ್ರಹಿಸುತ್ತಿಲ್ಲ. ಅಭಿವೃದ್ಧಿ ಕೆಲಸಗಳಿಗೆ ನಗರಸಭೆಯಲ್ಲಿ ಹಣದ ಕೊರತೆ ಹೇಳುವ ಅಧಿಕಾರಿಗಳು ಈ ರೀತಿ ಸೋರಿಕೆಯಾಗುತ್ತಿರುವ ಹಣವನ್ನು ಸಂಗ್ರಹಿಸುವಲ್ಲಿ ಮುಂದಾಗದಿರುವುದು ವಿಪರ್ಯಾಸ.

ಏಜೆನ್ಸಿಗಳಿಗೂ ನಷ್ಟ: ಕೆಲವೊಂದು ಕಂಪನಿಗಳು, ಏಜೆನ್ಸಿಗಳು ಸ್ವಂತ ಜಾಹೀರಾತು ಫಲಕಗಳನ್ನು ಅಳವಡಿಸಿಕೊಂಡಿವೆ. ಆದರೆ, ಕಂಪನಿಗಳು ಪ್ರಚಾರಕ್ಕಾಗಿ ಜಾಹೀರಾತು ಹಾಕಿಕೊಂಡಿದ್ದರೂ ಅದನ್ನು ಕಿತ್ತು ಹಾಕಿ ಕೆಲ ನಾಯಕರು ತಮ್ಮ ಬ್ಯಾನರ್‌ ಗಳನ್ನು ಅಳವಡಿಸುತ್ತಾರೆ. ಇದರಿಂದ ಏಜೆನ್ಸಿಗಳಿಗೆ ನಷ್ಟವಾಗುತ್ತಿದೆ. ಈ ಕುರಿತು ನಗರಸಭೆಗೆ ಅನೇಕ ಬಾರಿ ದೂರಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಕೆಲವೊಂದು ಕಂಪನಿಗಳು ನಗರಸಭೆ ಜತೆ ಒಡಂಬಡಿಕೆಗೆ ಹಿಂದೇಟಾಕುತ್ತಿರುವ ಮಾಹಿತಿ ಲಭ್ಯವಾಗಿದೆ.

ನಗರಸಭೆ ವ್ಯಾಪ್ತಿಗೆ ಬರುವ ಸ್ಥಳಗಳಲ್ಲಿ ಜಾಹೀರಾತು ಅಳವಡಿಸಲು ಶುಲ್ಕ ಪಾವತಿಸಬೇಕು. ಅನುಮತಿ ಪಡೆದು ರಶೀದಿ ಪಡೆಯಬೇಕು. ಆದರೆ, ನಗರದಲ್ಲಿ ಬೇಕಾಬಿಟ್ಟಿ ಬ್ಯಾನರ್‌ ಅಳವಡಿಸುತ್ತಿರುವುದು ನಿಜ. ಕನಿಷ್ಠ ಪಕ್ಷ ಶುಲ್ಕ ಕಟ್ಟಿ ಎಂದರೂ ಅವರಿವರಿಂದ ಕರೆ ಮಾಡಿಸುತ್ತಾರೆ. -ಹೆಸರು ಹೇಳಲಿಚ್ಛಿಸದ ಸಿಎಂಸಿ ಅಧಿಕಾರಿ

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.