ಬಾಲ್ಯ ವಿವಾಹ ತಡೆಗೆ ಅಧಿಕಾರಿಗಳ ಸಹಕಾರ ಅಗತ್ಯ: ಕಟ್ಟೋಳಿ


Team Udayavani, Jan 11, 2019, 10:19 AM IST

ray-4.jpg

ದೇವದುರ್ಗ: ಬಾಲ್ಯವಿವಾಹವು ನಾಗರಿಕ ಸಮಾಜಕ್ಕಂಟಿದ ಪಿಡುಗು. ಇದರ ತಡೆಗೆ ವಿವಿಧ ಇಲಾಖೆ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ. ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಿ ಸಮಾಜದಲ್ಲಿ ಜಾಗೃತಿ ಮೂಡಿಸಬೇಕು ಎಂದು ತಹಶೀಲ್ದಾರ್‌ ಶಿವಶರಣಪ್ಪ ಕಟ್ಟೋಳಿ ಹೇಳಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್‌, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಡಾನ್‌ ಬೋಸ್ಕೋ ಸೇವಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ದೇವದುರ್ಗ ತಾಲೂಕು ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ಬಾಲ್ಯವಿವಾಹ ತಡೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಪ್ರತಿಯೊಬ್ಬ ಮಗುವಿಗೂ ಹಕ್ಕುಗಳಿವೆ. ಮಕ್ಕಳ ಹಕ್ಕು ಉಲ್ಲಂಘನೆಯಾಗದಂತೆ ಎಲ್ಲ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.

ಪತ್ರಕರ್ತರ ಸಂಘದ ಅಧ್ಯಕ್ಷ ಬಸನಗೌಡ ದೇಸಾಯಿ ಮಾತನಾಡಿ, ಬಾಲವಿವಾಹ ತಡೆಗೆ ಸಮಾಜದಲ್ಲಿ ಜಾಗೃತಿ ಜೊತೆಗೆ ಕಾನೂನಿನ ಚೌಕಟ್ಟುಗಳು ಕೂಡ ಕಠಿಣವಾಗಬೇಕು. ಪ್ರತಿಯೊಬ್ಬರಿಗೂ ಶಿಕ್ಷಣದ ಅರಿವು ಮೂಡಿಸುವ ಮೂಲಕ ಬಾಲ್ಯವಿವಾಹವನ್ನು ಸುಲಭವಾಗಿ ತಡೆಗಟ್ಟಬಹುದು ಎಂದರು.

ಪಿಎಸ್‌ಐ ಎಲ್‌.ಬಿ.ಅಗ್ನಿ ಮಾತನಾಡಿ, ಕಾನೂನು ಪರಿಪಾಲಕರಾದ ನಾವು ನಮ್ಮ ಮನೆಯಿಂದಲೇ ಬಾಲ್ಯವಿವಾಹ ಪಿಡುಗು ಹೋಗಲಾಡಿಸಲು ಮುಂದಾಗಬೇಕು. ಇಂತಹ ವಿಚಾರದಲ್ಲಿ ಅಧಿಕಾರಿಗಳು ಮೀನ-ಮೇಷ ಎಣಿಸದೆ, ಮಕ್ಕಳ ಭವಿಷ್ಯತ್ತಿಗೆ ಮುಳ್ಳಾಗುವ ಇಂತಹ ಸಮಾಜ ಕಂಟಕವಾದ ಬಾಲ್ಯವಿವಾಹವನ್ನು ಬೇರು ಸಹಿತ ಕೀಳಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಬಸವರಾಜ ಬ್ಯಾಗವಾಟ ಮಾತನಾಡಿ, ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮ, ವೈದ್ಯಕೀಯ ಉದಾಹರಣೆಗಳ ಸಮೇತ ವಿವರಿಸಿದರು. ಮಕ್ಕಳ ಹಕ್ಕು ರಕ್ಷಣೆ ನಮ್ಮೆಲ್ಲರ ಹೊಣೆ. ಆದ್ದರಿಂದ ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲ ಇಲಾಖೆ ಅಧಿಕಾರಿಗಳು ಮುಂದಾಗಬೇಕು ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿ ಹಾಗೂ ಕಾನೂನು ಪರಿವೀಕ್ಷಣಾಧಿಕಾರಿ ಜಿ.ವೀರಭದ್ರಪ್ಪ ಮಾತನಾಡಿ, ಬಾಲ್ಯವಿವಾಹವು ಮಕ್ಕಳ ಹಕ್ಕುಗಳ ಉಲ್ಲಂಘನೆ ಹಾಗೂ ಉತ್ತಮ ಸಮಾಜದ ನಿರ್ಮಾಣಕ್ಕೆ ಧಕ್ಕೆ ಉಂಟು ಮಾಡುತ್ತದೆ. ಈ ಅಪಾಯಕಾರಿ ಪದ್ಧತಿ ಎಳೆ ತಾಯಂದಿರ ಮರಣ, ಶಿಶು ಮರಣ, ಅಪೌಷ್ಟಿಕತೆಯನ್ನು ಉಂಟು ಮಾಡುತ್ತದೆ. ಬಾಲ್ಯದಲ್ಲೇ ಮದುವೆ ಮಾಡುವುದರಿಂದ ಮಕ್ಕಳ ಬೌದ್ಧಿಕ, ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯಕ್ಕಿಂತಲೂ ಹೆಚ್ಚಿನ ಜವಾಬ್ದಾರಿ ಹೊರುವಂತೆ ಮಾಡುತ್ತದೆ ಎಂದರು. ಡಾನ್‌ ಬೋಸ್ಕೋ ಸಂಸ್ಥೆಯ ಸಿದ್ಧಲಿಂಗಪ್ಪ ಕಾಕರಗಲ್‌, ಡಾನ್‌ ಬೋಸ್ಕೋ ಸೇವಾ ಸಂಸ್ಥೆಯ ಫಾ| ಕುರಿಯಾಕೋಸ್‌, ಸಾಂಸ್ಥಿಕ ರಕ್ಷಣಾ ಅಧಿಕಾರಿ ಹನುಮೇಶ ಜಗ್ಲಿ, ಅಸಾಂಸ್ಥಿಕ ರಕ್ಷಣಾಧಿಕಾರಿ ಕಿರಲಿಂಗಪ್ಪ, ಸಮಾಜ ಕಲ್ಯಾಣಾಧಿಕಾರಿ ಫಕ್ಕೀರಪ್ಪ, ಅಕ್ಷರ ದಾಸೋಹ ಅಧಿಕಾರಿ ಬಂದೋಲಿ ಸಾಬ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಲತಾ, ಲಕ್ಷ್ಮೀ ರಾಠೊಡ, ನಿರ್ಮಲಾ ಸೇರಿ ವಿವಿಧ ಇಲಾಖೆ ಅಧಿಕಾರಿಗಳು, ಎನ್‌ಜಿಒ ಪ್ರತಿನಿಧಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.