ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಆರು ಮಂದಿ ದುರ್ಮರಣ
Team Udayavani, Aug 5, 2022, 12:41 PM IST
ರಾಯಚೂರು: ಕಾರು ಮತ್ತು ಲಾರಿ ನಡುವಿನ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಆರು ಜನ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಯಾದಗಿರಿಯ ಗುರುಮಿಠಕಲ್ ಬಳಿ ಸಂಭವಿಸಿದೆ.
ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರು ನಜ್ಜುಗುಜ್ಜಾಗಿದೆ.
ಒಂದು ವರ್ಷದ ಹೆಣ್ಣು ಮಗು ಸೇರಿ ಆರು ಜನ ಸಾವಿಗೀಡಾಗಿದ್ದಾರೆ. ಮೃತ ದುರ್ದೈವಿಗಳು ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಟ್ಟಿಯವರು.
ಇದನ್ನೂ ಓದಿ:ಬಾಯ್ತೆರದ ಭೂಮಿ… ಚಿಲಿಯಲ್ಲಿ ಭಾರೀ ಗಾತ್ರದ ನಿಗೂಢ ಕಂದಕ ಸೃಷ್ಟಿ: ವಿಡಿಯೋ ನೋಡಿ
ಹಟ್ಟಿ ಗ್ರಾಮದ ವಿದ್ಯುತ್ ಗುತ್ತಿಗೆದಾರ ವಾಜೀದ್ ಹುಸೇನ್ (35), ಅವರ ತಂದೆ ಮಜರ್ ಹುಸೇನ್ (72), ತಾಯಿ ನೂರ್ ಜಹಾನ್ (70), ಪತ್ನಿ ಹೀನಾ (30), ಮಕ್ಕಳಾದ ಉಮೇಜಾ (6 ತಿಂಗಳು), ಇಮ್ರಾನ್ (22) ಮೃತಪಟ್ಟಿದ್ದಾರೆ.
ತೆಲಂಗಾಣದ ಕೊಡಂಗಲ್ ನ ದರ್ಗಾಕ್ಕೆ ಜವಳ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿದೆ. ಲಾರಿ ಚಾಲಕ ಪರಾರಿಯಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ