ಶಾಲೆಗೆ ಹೋಗೋಣ ಬನ್ನಿರೋ…!


Team Udayavani, Oct 25, 2021, 11:45 AM IST

11addmission

ರಾಯಚೂರು: ಕೋವಿಡ್‌ 19 ಮೂರನೇ ಅಲೆಯ ಆತಂಕದಲ್ಲಿ ಮುಂದೂಡಲ್ಪಟ್ಟಿದ್ದ ಪ್ರಾಥಮಿಕ ಶಾಲೆ ಶೈಕ್ಷಣಿಕ ಚಟುವಟಿಕೆಯನ್ನು ಸೋಮವಾರದಿಂದ ಪುನಾರಂಭಿಸಲಾಗುತ್ತಿದೆ.

ಈಗಾಗಲೇ 5ರಿಂದ 10ನೇ ತರಗತಿ ಶಾಲೆಗಳು ಆರಂಭವಾಗಿದ್ದು, ಈಗ ಒಂದನೇ ತರಗತಿಯಿಂದಲೇ ತರಗತಿ ನಡೆಸಲು ಶಿಕ್ಷಣ ಇಲಾಖೆ ಸಮಗ್ರ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ನೀಡಿದ ನಿರ್ದೇಶನಗಳನ್ವಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

5ನೇ ತರಗತಿಯಿಂದ ಶಾಲೆ ಆರಂಭಿಸಿದ ವೇಳೆ ಕೈಗೊಂಡ ಕೋವಿಡ್‌ ನಿಯಮಗಳನ್ನು ಈಗಲೂ ಕಡ್ಡಾಯವಾಗಿ ಪಾಲಿಸುವುದರ ಜತೆಗೆ ಕೆಲವೊಂದು ಮುನ್ನೆಚ್ಚರಿಕೆಗಳನ್ನು ವಹಿಸಲು ತಿಳಿಸಲಾಗಿದೆ. ಸದ್ಯಕ್ಕೆ 1-5ನೇ ತರಗತಿ ಮಕ್ಕಳಿಗೆ ಮಧ್ಯಾಹ್ನದವರೆಗೆ ಮಾತ್ರ ಶಾಲೆ ಇರಲಿದ್ದು, ನ.2ರಿಂದ ಮಧ್ಯಾಹ್ನವೂ ಶಾಲೆ ನಡೆಸಲು ಇಲಾಖೆ ಕ್ರಮ ವಹಿಸಿದೆ. ­

ಕೋವಿಡ್‌ ನಿಯಮ ಪಾಲನೆ

ಈಗಾಗಲೇ ಬಿಇಒ, ಸಿಆರ್‌ಪಿ, ಮುಖ್ಯಶಿಕ್ಷಕರ ಸಭೆ ನಡೆಸಲಾಗಿದೆ. ಸರ್ಕಾರದ ಸುತ್ತೋಲೆ ನೀಡಿದ್ದು, ಕಡ್ಡಾಯವಾಗಿ ಮುದ್ರಣ ಮಾಡಿಕೊಂಡು ಪಾಲಕರಿಗೆ ತೋರಿಸಲು ತಿಳಿಸಲಾಗಿದೆ. ಮುಖ್ಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚನೆ ನೀಡಲಾಗಿದೆ. ಈಗಾಗಲೇ ಅದೇ ರೀತಿ ತರಗತಿಗಳನ್ನು ನಡೆಸುತ್ತಿದ್ದು, ಮುಂದೆಯೂ ಅದನ್ನು ಪಾಲಿಸುವಂತೆ ತಿಳಿಸಲಾಗಿದೆ. ಈಗ 1-5ನೇ ತರಗತಿ ಮಕ್ಕಳಿಗೆ ಬಿಸಿಯೂಟ ನೀಡುತ್ತಿಲ್ಲ. ಕೇವಲ ಪಠ್ಯ ಮಾತ್ರ ಮಾಡಲು ನಿರ್ಧರಿಸಲಾಗಿದೆ. ­

ಇದನ್ನೂ ಓದಿ: ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲಲು ಕಾರಣವೇನು? ತಂಡದ ಆಯ್ಕೆಯಲ್ಲಿ ಎಡವಿದರೆ ವಿರಾಟ್?

ತಂಡಗಳ ಆಧಾರದಲ್ಲಿ ತರಗತಿ

ಕೆಲವೊಂದು ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದು, ತರಗತಿ ಕೋಣೆಗಳ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಲಿದೆ. ಈ ನಿಟ್ಟಿನಲ್ಲಿ ಮಕ್ಕಳ ಗುಂಪುಗಳನ್ನಾಗಿ ವಿಂಗಡಿಸಿ ಒಂದೊಂದು ತಂಡಕ್ಕೆ ಒಮ್ಮೆ ತರಗತಿ ನಡೆಸುವಂತೆ ತಿಳಿಸಲಾಗಿದೆ. ಮಕ್ಕಳ ಸಂಖ್ಯೆ ಹೆಚ್ಚಾಗಿರುವ ಕಡೆ ಮಾತ್ರ ಈ ರೀತಿ ಮಾಡಲು ತಿಳಿಸಿದ್ದು, ಕಡಿಮೆ ಇದ್ದಲ್ಲಿ ಸಾಮಾಜಿಕ ಅಂತರದಡಿ ಕೆಲಸ ನಿರ್ವಹಿಸಲು ತಿಳಿಸಲಾಗಿದೆ.

ಸರ್ಕಾರದ ಸುತ್ತೋಲೆಯನ್ನು ಎಲ್ಲ ಶಾಲೆಗಳಿಗೆ ಕಳುಹಿಸಲಾಗಿದೆ. ಯಾವುದೇ ಆತಂಕವಿಲ್ಲದೇ ಶಾಲೆ ಪುನಾರಂಭಿಸಲಾಗುತ್ತಿದೆ. ಈಗಾಗಲೇ ಕೋವಿಡ್‌ ನಿಯಮಗಳನ್ವಯ ಪಾಲಕರಿಂದ ಮುಚ್ಚಳಿಕೆ ಬರೆಯಿಸಿಕೊಂಡು, ಪ್ರವೇಶಾತಿ ನೀಡಲಾಗುತ್ತಿದೆ. ಈಗಾಗಲೇ ಶಾಲೆಗಳನ್ನು ಅದ್ದೂರಿಯಾಗಿ ಆರಂಭಿಸಿದ ಕಾರಣ ಸರಳವಾಗಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಒಂದು ವೇಳೆ ಶಿಕ್ಷಕರು ಆಸಕ್ತಿ ಇದ್ದಲ್ಲಿ ಚನ್ನಾಗಿ ಕಾರ್ಯಕ್ರಮ ಮಾಡಬಹುದು. ಸರ್ಕಾರದ ಸುತ್ತೋಲೆಯನ್ನು ವಾಟ್ಸ್‌ಆ್ಯಪ್‌ ನಲ್ಲಿ ಹಾಕದೆ ಮುದ್ರಣ ಮಾಡಿಯೇ ನೋಟಿಸ್‌ಗೆ ಹಾಕುವಂತೆ ತಿಳಿಸಲಾಗಿದೆ. -ವೃಷಭೇಂದ್ರಯ್ಯ, ಡಿಡಿಪಿಐ ರಾಯಚೂರು

ಹೀಗಿದೆ ಮಕ್ಕಳ ಅಂಕಿ ಸಂಖ್ಯೆ

ಜಿಲ್ಲೆಯಲ್ಲಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ 1-10ನೇ ತರಗತಿವರೆಗೆ ಸುಮಾರು 4,11,949 ಮಕ್ಕಳಿದ್ದಾರೆ. ಒಂದರಿಂದ ಐದನೇ ತರಗತಿವರೆಗೆ 2,19,796 ವಿದ್ಯಾರ್ಥಿಗಳಿದ್ದಾರೆ. 1,15,955 ಬಾಲಕರಿದ್ದರೆ, 1,05,208 ಬಾಲಕಿಯರಿದ್ದಾರೆ. ಇನ್ನೂ ದಾಖಲಾತಿ ಪ್ರಕ್ರಿಯೆ ಮುಂದುವರಿದಿದೆ. ಅದರಲ್ಲಿ ಸರ್ಕಾರಿ ಶಾಲೆಯ ಮಕ್ಕಳು 1,43,062 ಮಕ್ಕಳಿದ್ದು, 70,240 ಬಾಲಕರು, 72,050 ಬಾಲಕಿಯರಿದ್ದಾರೆ ಎಂದು ಇಲಾಖೆ ವಿವರ ನೀಡಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.