ಕ್ಷೇತ್ರದ ಅಭಿವೃದ್ಧಿಗೆ ಬದ್ಧ: ಹೂಲಗೇರಿ
Team Udayavani, Sep 2, 2019, 3:14 PM IST
ಲಿಂಗಸುಗೂರು: ತಾಲೂಕಿನ ರಾಂಪುರ (ಭೂ) ಗ್ರಾಮದಲ್ಲಿ ನಡೆದ ಗ್ರಾಮಸಭೆಯಲ್ಲಿ ಶಾಸಕ ಡಿ.ಎಸ್.ಹೂಲಗೇರಿ ಮಾತನಾಡಿದರು.
ಲಿಂಗಸುಗೂರು: ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದ ಮಟ್ಟದಲ್ಲಿ ಹೋರಾಟ ಮಾಡಿಯಾದರೂ ಅನುದಾನ ತರುವೆ ಎಂದು ಶಾಸಕ ಡಿ.ಎಸ್.ಹೂಲಗೇರಿ ಹೇಳಿದರು.
ಮುಖ್ಯಮಂತ್ರಿ ಮಾದರಿ ಗ್ರಾಮ ಯೋಜನೆಯಡಿ ತಾಲೂಕಿನ ರಾಂಪುರ (ಭೂ) ಗ್ರಾಮ ಆಯ್ಕೆಯಾದ ಹಿನ್ನೆಲೆಯಲ್ಲಿ ರವಿವಾರ ನಡೆದ ಗ್ರಾಮಸಭೆಯಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿ ಮಾದರಿ ಗ್ರಾಮ ಯೋಜನೆಯಡಿ ನಮ್ಮ ಕ್ಷೇತ್ರದ ಐದು ಗ್ರಾಮಗಳು ಆಯ್ಕೆಯಾಗಿವೆ. ಅದರಲ್ಲಿ ರಾಂಪುರ (ಭೂ), ಮೇದಿನಾಪುರ, ಕೋಠಾ, ಬನ್ನಿಗೋಳ, ಮಾಕಾಪುರ ಗ್ರಾಮಗಳು ಆಯ್ಕೆಯಾಗಿವೆ. ಪ್ರತಿ ಗ್ರಾಮಕ್ಕೆ ಒಂದು ಕೋಟಿ ರೂ. ಅನುದಾನ ನೀಡಲಾಗಿದೆ. ಅದರಲ್ಲಿ ಶೇ.50 ರಷ್ಟು ಅನುದಾನ ಸ್ವಚ್ಛತೆ, ಚರಂಡಿ, ಸಿಸಿ ರಸ್ತೆಗೆ, ಉಳಿದ 50ರಷ್ಟು ಅನುದಾನದಲ್ಲಿ ಗ್ರಂಥಾಲಯ, ಸಾಂಸ್ಕೃತಿಕ ಭವನ, ಕ್ರೀಡಾ ಸಾಮಾಗ್ರಿ, ಸೌರ ಶಕ್ತಿ, ತಿಪ್ಪೆಗುಂಡಿ ಸ್ಥಳಾಂತರ ಇತರೆ ಗ್ರಾಮಾಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದೆಂದು ಹೇಳಿದರು.
ತಾಲೂಕಿನ ಪ್ರತಿ ಗ್ರಾಮದಲ್ಲೂ ಒಂದಲ್ಲ ಒಂದು ಕೆಲಸಗಳು ನಡೆಯುತ್ತಲೇ ಇವೆ. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಗ್ರಾಮಸ್ಥರು ಕೂಡಾ ಅಭಿವೃದ್ಧಿ ಕೆಲಸಗಳಿಗೆ ಸಹಕಾರ ನೀಡಬೇಕು. ಗ್ರಾಮದ ಶಾಲಾ ಕೊಠಡಿಗೆ ಅನುದಾನ ಬಿಡುಗಡೆಯಾಗಿದೆ. ಆದರೆ ಜಾಗೆ ಕೊರತೆ ಎದುರಾಗಿದ್ದು, ಗ್ರಾಮಸ್ಥರು ಜಾಗ ನೀಡಲು ಮುಂದಾಗಬೇಕು. ಇಲ್ಲದಿದ್ದರೆ ಅನುದಾನ ವಾಪಸ್ ಹೋಗುತ್ತದೆ. ಮಾರ್ಚ್ ಅಂತ್ಯದೊಳಗೆ ಅನುದಾನ ಸದ್ಬಳಕೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು. ರಾಂಪುರ ನೀರಾವರಿ ಯೋಜನೆ ನಾಲೆಗಳ ಮುಖಾಂತರ ಕೆರೆ ತುಂಬಿಸುವ ಕಾರ್ಯ ಮಾಡುವೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಕರಡಕಲ್ ಮಾತನಾಡಿ, ರಾಂಪುರ ಬಿ ಸ್ಕೀಮ್ನಡಿ ನಡೆದ ಕಾಮಗಾರಿಗಳು ಕಳಪೆ ಆಗಿದ್ದು, ಶಾಸಕರು ಪರಿಶೀಲಿಸಿದ್ದಾರೆ. ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಂಡು ರೈತರಿಗೆ ನ್ಯಾಯ ಒದಗಿಸಲಿದ್ದಾರೆ ಎಂದರು.
ಜಿಪಂ ಸದಸ್ಯ ಸಂಗಣ್ಣ ದೇಸಾಯಿ, ಮುಖಂಡರಾದ ಪರಸಪ್ಪ ಹುನುಕುಂಟಿ, ಆದಪ್ಪ ಸಾಹುಕಾರ, ಬೀರಪ್ಪ, ಪಿಡಿಒ ಗಂಗಮ್ಮ, ಗುತ್ತೇದಾರ ವೆಂಕಟೇಶ ರಾಠೊಡ, ಶಂಕರ ಜೆಇ, ಪರಶುರಾಮ ನಗನೂರು, ಇಲಿಯಾಸ್, ಸಂಜೀವಪ್ಪ ಹುನಕುಂಟಿ, ವೆಂಕಟೇಶ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್