Cafe ಸ್ಫೋಟ ಪ್ರಕರಣದಲ್ಲಿ ತನಿಖಾ ತಂಡಕ್ಕೆ ಸಂಪೂರ್ಣ ಸ್ವಾತಂತ್ರ್ಯ: ಸಚಿವ ಎನ್.ಎಸ್.ಬೋಸರಾಜು
Team Udayavani, Mar 8, 2024, 3:25 PM IST
ರಾಯಚೂರು: ರಾಮೇಶ್ವರ ಕೆಫೆ ಸ್ಪೋಟ ಪ್ರಕರಣದ ತನಿಖೆ ನಡೆಸುವ ತಂಡಕ್ಕೆ ಸರ್ಕಾರದಲ್ಲಿ ಸಂಪೂರ್ಣ ಸ್ವಾತಂತ್ರ್ಯವಿದೆ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಪ್ರಕರಣದ ತನಿಖೆ ಮಾಡುವವರು ಕಾನೂನಾತ್ಮಕವಾಗಿ ಮಾಡುತ್ತಾರೆ. ತನಿಖೆ ನಡೆಯುತ್ತಿರುವಾಗ ಎಲ್ಲವನ್ನು ಬಹಿರಂಗಪಡಿಸುವುದಿಲ್ಲ. ತನಿಖಾ ತಂಡ ಏನು ಕ್ರಮ ಕೈಗೊಳ್ಳಬೇಕು ಅದನ್ನು ಮಾಡುತ್ತಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದೆ ಎಂದರು.
ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಪಕ್ಷದಿಂದ ಯಾರು ಅಭ್ಯರ್ಥಿಯನ್ನು ಮಾಡಬೇಕು ಎನ್ನುವ ಕುರಿತಂತೆ ಜಿಲ್ಲೆಯಿಂದ ಮೂರ್ನಾಲ್ಕು ಹೆಸರು ಕಳುಹಿಸಲಾಗಿದೆ. ಸರ್ವೇ ಮಾಡಲಾಗಿದೆ. ಅಭಿಪ್ರಾಯ ಸಂಗ್ರಹಿಸಲಾಗಿದೆ. ಶಾಸಕರು, ಮಾಜಿ ಶಾಸಕರು, ಮುಖಂಡರ ಅಭಿಪ್ರಾಯ ಕೇಳಲಾಗಿದೆ. ಅ ನಿಟ್ಟಿನಲ್ಲಿ ಪಕ್ಷದಲ್ಲಿ ಸರ್ವೇ ಮಾಡಲಾಗಿದೆ. ಅದರ ಪ್ರಕಾರವೇ ಟಿಕೆಟ್ ಅಂತಿಮಗೊಳಿಸಲಾಗುವುದು ಎಂದರು.
ಬರ ಹಿನ್ನೆಲೆಯಲ್ಲಿ ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಸರ್ಕಾರ ಸಹ ಅಗತ್ಯ ಅನುದಾನ ಒದಗಿಸಿದೆ. ಬೋರ್ ವೇಲ್ ಗಳು, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವುದು ಸೇರಿದಂತೆ, ಯಾವುದೇ ನೀರಿನ ಸಮಸ್ಯೆ ಎದುರಾಗದಂತೆ ಸೂಚಿಸಲಾಗಿದೆ. ಒಂದು ವೇಳೆ ಏನಾದರೂ ಸಮಸ್ಯೆಯಾದರೆ ಆಯಾ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ