ಅಗ್ನಿ ಅವಘಡ ಘಟನೆ ಸಮಗ್ರ ತನಿಖೆ: ಡಿಸಿ


Team Udayavani, Aug 25, 2020, 5:33 PM IST

ಅಗ್ನಿ ಅವಘಡ ಘಟನೆ ಸಮಗ್ರ ತನಿಖೆ: ಡಿಸಿ

ದೇವದುರ್ಗ: ಪಟ್ಟಣದ ಮಿನಿ ವಿಧಾನಸೌಧ ಕಟ್ಟಡದಲ್ಲಿರುವ ಶಿರಸ್ತೇದಾರ್‌ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ ವಿದ್ಯುತ್‌ ಶಾರ್ಟ್‌ ಸರ್ಕ್ನೂಟ್‌ ನಿಂದ ಬೆಂಕಿ ತಗುಲಿ ಮಹತ್ವದ ದಾಖಲೆಗಳು ಸುಟ್ಟಿವೆ.

ಮಿನಿ ವಿಧಾನಸೌಧ ಕಟ್ಟಡದ ಶಿರಸ್ತೇದಾರ್‌ ಶ್ರೀನಿವಾಸ್‌ ಚಾಪಲ್‌ ಅವರ ಕೊಠಡಿಯಲ್ಲಿ ಕಂದಾಯ ಸೇರಿ ವಿವಿಧ ದಾಖಲೆಗಳನ್ನು ಸಂಗ್ರಹಿಸಲಾಗಿತ್ತು. ಸೋಮವಾರ ಬೆಳಗ್ಗೆ ಶಾರ್ಟ್‌ ಸರ್ಕ್ನೂಟ್‌ನಿಂದ ಬೆಂಕಿ ತಗುಲಿ ನೆಲಮಹಡಿ ಕಟ್ಟಡ ಧಗಧಗನೆ ಹೊತ್ತಿ ಉರಿದಿದೆ. ಇದರಿಂದ ಅಕ್ಕಪಕ್ಕದ ಅಂಗಡಿ, ಮನೆಗಳ ಜನರಲ್ಲಿ ಆತಂಕ ಉಂಟಾಗಿತ್ತು. ಅವಘಡದಲ್ಲಿ ಶಿರಸ್ತೇದಾರ್‌ ಬಳಸುತ್ತಿದ್ದ ಕಂಪ್ಯೂಟರ್‌ ಹಾಗೂ ದಾಖಲೆಗಳು, ಮೇಜು, ಕುರ್ಚಿ ಸೇರಿ ಕೆಲ ಪರಿಕರಗಳು ಸುಟ್ಟಿವೆ. ಅಗ್ನಿ ಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಡೆದರು.

ಮಿನಿ ವಿಧಾನಸೌಧ ಕಚೇರಿಯಲ್ಲಿ ಇಂಥ ಘಟನೆ ನಡೆಯುತ್ತಿರುವುದು ಎರಡನೇ ಸಲ. ಈ ಹಿಂದೆ ಪಹಣಿ ನೀಡುವ ಕೇಂದ್ರದಲ್ಲಿ ಶಾರ್ಟ್‌ ಸರ್ಕ್ನೂಟ್‌ ಉಂಟಾಗಿ ಮಹತ್ವದ ದಾಖಲೆಗಳು ಸುಟ್ಟಿದ್ದವು. ವಿಷಯ ತಿಳಿದು ತಹಶೀಲ್ದಾರ್‌ ಮಧುರಾಜ್‌ ಯಾಳಗಿ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲಾಧಿಕಾರಿ ಭೇಟಿ: ಇಲ್ಲಿನ ಶಿರಸ್ತೇದಾರ್‌ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಹಿನ್ನೆಲೆಯಲ್ಲಿ ಸೋಮವಾರ ಭೇಟಿದ್ದ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಪರಿಶೀಲನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಸ್ತೇದಾರ್‌ ಕಚೇರಿಯಲ್ಲಿ ವಿದ್ಯುತ್‌ ಶಾರ್ಟ್‌ ಸರ್ಕ್ನೂಟ್‌ ಘಟನೆ ಬಗ್ಗೆ ತನಿಖೆ ನಡೆಸಲಾಗುವುದು .ವಿದ್ಯುತ್‌ ಶಾರ್ಟ್‌ ಸರ್ಕ್ನೂಟ್‌ನಿಂದ ಅವಘಡ ನಡೆದಿದೆ. ಕೆಲ ದಾಖಲೆಗಳು ಹಾಗೂ ಕಂಪ್ಯೂಟರ್‌, ಪರಿಕರ ಸುಟ್ಟಿವೆ. ಮಹತ್ವದ ದಾಖಲೆಗಳು ಹಾಳಾಗಿಲ್ಲ. ಕೆಲ ದಾಖಲೆಗಳನ್ನು ಮರು ಸೃಷ್ಟಿ ಮಾಡಲಾಗುವುದು. ಘಟನೆ ಕುರಿತು ತನಿಖೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದು, ಎರಡ್ಮೂರು ದಿನದಲ್ಲಿ ವರದಿ ನೀಡಲಿದ್ದಾರೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಶೀಘ್ರ ಎರಡು ಕಂಪ್ಯೂಟರ್‌ ವ್ಯವಸ್ಥೆ ಮಾಡಿ ಕೆಲಸ ನಿರ್ವಹಿಸಲು ಸೂಚಿಸಲಾಗುವುದು ಎಂದರು.

ಉಪ ನೋಂದಣಾಧಿಕಾರಿ ಕಚೇರಿ ಬಗ್ಗೆ ಹಲವು ದೂರುಗಳು ಬಂದಿದ್ದು, ಈ ಹಿಂದಿನ ಉಪ ನೋಂದಣಾಧಿಕಾರಿ ವರ್ಗಾವಣೆಯಾಗಿದ್ದಾರೆ. ತಾಂತ್ರಿಕ ಕಾರಣದಿಂದ ಕಡತ ವಿಲೇವಾರಿಗೆ ವಿಳಂಬ ವಾಗಿದೆ. ಉಪ ನೋಂದಣಾಧಿಕಾರಿ ಕಚೇರಿಗೆ ಹಾಸ್ಟೇಲ್‌ಗ‌ಳಲ್ಲಿರುವ ಎರಡು ಕಂಪ್ಯೂಟರ್‌ ವ್ಯವಸ್ಥೆ ಮಾಡಲಾಗುವುದು. ಇಂಟರ್‌ನೆಟ್‌ ಸಮಸ್ಯೆ ಪರಿಹರಿಸಲಾಗುವುದು. ಕಡತಗಳನ್ನು ಎರಡು ತಿಂಗಳಲ್ಲಿ ವಿಲೇವಾರಿ ಮಾಡಲು ಸೂಚಿಸುವುದಾಗಿ ಹೇಳಿದರು.

ತರಾಟೆ: ಉಪ ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿದ ಡಿಸಿ ವೆಂಕಟೇಶ ಕುಮಾರ ಅವ್ಯವಸ್ಥೆ ಕಂಡು ಕಚೇರಿ ಉಸ್ತುವಾರಿ ಮಹೇಶ ಅವರನ್ನು ತರಾಟೆಗೆ ತೆಗೆದುಕೊಂಡರು. ಕಡತ ವಿಲೇವಾರಿ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಸಮರ್ಪಕವಾಗಿ ಕೆಲಸ ನಿರ್ವಹಿಸುವಂತೆ ಸೂಚಿಸಿದರು.

ತಹಶೀಲ್ದಾರ್‌ ಮಧುರಾಜ್‌ ಯಾಳಗಿ, ಪ್ರಭಾರ ತಹಶೀಲ್ದಾರ್‌ ಸಂತೋಷ್‌ ರಾಣಿ, ಗ್ರೇಡ್‌-2 ತಹಶೀಲ್ದಾರ್‌ ಶ್ರೀನಿವಾಸ್‌ ಚಾಪಲ್‌ ಇದ್ದರು.

ಕೃಷ್ಣಾ ನದಿಯಿಂದ 2.95 ಲಕ್ಷ ಕ್ಯೂಸೆಕ್‌ ನೀರು ಹರಿಬಿಟ್ಟಿದ್ದರಿಂದ ದೇವದುರ್ಗ ತಾಲೂಕು ಸೇರಿ ಜಿಲ್ಲೆಯಲ್ಲಿ ಎಲ್ಲಿಯೂ ಬೆಳೆ ನಷ್ಟವಾಗಿಲ್ಲ. ಹೂವಿನಹೆಡಗಿ ಸೇತುವೆಗೆ ಯಾವುದೇ ಹಾನಿಯಾಗಿಲ್ಲ. ಶೀಲಹಳ್ಳಿ ಸೇತುವೆ ಬಗ್ಗೆ ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ರಾಮದುರ್ಗ, ಬಂಡೆಗುಡ್ಡ ಸೇರಿ ವಿವಿಧೆಡೆ ಮಳೆಯಿಂದ ಮನೆ ಕಳೆದುಕೊಂಡವರಿಗೆ ಶೀಘ್ರ ಪರಿಹಾರ ನೀಡಲಾಗುವುದು. ನೆರೆಯಿಂದ ಮನೆ ಕಳೆದುಕೊಂಡು ಹೊಸ ಮನೆ ನಿರ್ಮಿಸಿಕೊಂಡ ಹೂವಿನಹೆಡಗಿ ಫಲಾನುಭವಿಗಳಿಗೆ ತಾಂತ್ರಿಕ ಕಾರಣದಿಂದ ಪರಿಹಾರ ವಿಳಂಬವಾಗಿದ್ದು, ಪಿಡಿಒ ಜತೆ ಚರ್ಚಿಸಿ ಶೀಘ್ರ ಅನುದಾನ ನೀಡಲಾಗುವುದು. – ಆರ್‌. ವೆಂಕಟೇಶಕುಮಾರ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.