ಸಂಘರ್ಷಕ್ಕೆಡೆ ಮಾಡಿದ ಸಾಮಾನ್ಯ ಮೀಸಲಾತಿ

ಸಾಮಾನ್ಯ ವರ್ಗಕ್ಕೆ ಮೀಸಲಾದ ಸ್ಥಾನದಲ್ಲಿ ಹೆಚ್ಚಿದ ಪೈಪೋಟಿ

Team Udayavani, Dec 16, 2020, 8:22 PM IST

ಸಂಘರ್ಷಕ್ಕೆಡೆ ಮಾಡಿದ ಸಾಮಾನ್ಯ ಮೀಸಲಾತಿ

ರಾಯಚೂರು: ಗ್ರಾಪಂ ಚುನಾವಣೆಯಲ್ಲಿ ಸಾಮಾನ್ಯ ವರ್ಗಕ್ಕೆ ಮೀಸಲಾದ ಸ್ಥಾನಗಳಲ್ಲಿ ಪೈಪೋಟಿ ಹೆಚ್ಚಾಗಿದ್ದು, ಹಳ್ಳಿಗಳಲ್ಲಿ ಸಂಘರ್ಷಕ್ಕೆಡೆ ಮಾಡಿದೆ. ಆಯಾ ಜಾತಿಗೆ ಮೀಸಲಾದ ಸ್ಥಾನಗಳಲ್ಲಿ ಹೊಂದಾಣಿಕೆ ಕಂಡು ಬಂದರೆ ಸಾಮಾನ್ಯ ವಿಭಾಗದಲ್ಲಿ ಮಾತ್ರ ಜಾತಿಗೊಬ್ಬರಂತೆ ಕಣಕ್ಕಿಳಿದಿದ್ದಾರೆ.

ಹಳ್ಳಿ ಫೈಟ್‌ನಲ್ಲಿ ಅಲಿಖೀತ ಕಾನೂನುಗಳೇ ಹೆಚ್ಚು ಪರಿಣಾಮಕಾರಿ ಎನ್ನುವುದು ಈ ಬಾರಿ ಸಾಬೀತಾಗುತ್ತಿದೆ. ಸಾಕಷ್ಟು ಕಡೆ ಅವಿರೋಧ ಆಯ್ಕೆ ನಡೆಯುತ್ತಿರುವುದೇ ಇದಕ್ಕೆ ಸಾಕ್ಷಿ. ಇನ್ನೂ ಗ್ರಾಪಂ ಚುನಾವಣೆಗಳು ಪಕ್ಷಾಧಾರಿತವಲ್ಲದಿದ್ದರೂ ರಾಜಕೀಯ ಪಕ್ಷಗಳ ಬೆಂಬಲಿತರು ಎಂಬ ಹಣೆಪಟ್ಟಿ ಕಳಚಲು ಯಾರು ಸಿದ್ಧರಿಲ್ಲ. ಕೆಲವೆಡೆ ಜಾತಿ ಆಧಾರದಡಿ ಮೀಸಲಾತಿ ನೀಡಲಾಗಿದೆ. ಅವರವರ ಜಾತಿಯವರಲ್ಲಿ ಹೊಂದಾಣಿಕೆ ಮಾಡಿಕೊಂಡು ಹೊಸಬರಿಗೆ ಅವಕಾಶ ನೀಡುವುದೋ ಇಲ್ಲ, ಹಣ ಪಡೆದೋ ಅವಿರೋಧ ಆಯ್ಕೆ ನಡೆಯುತ್ತಿದೆ. ಆದರೆ, ಸಾಮಾನ್ಯ ವರ್ಗಕ್ಕೆ ಮೀಸಲಾದ ಸ್ಥಳಗಳಲ್ಲಿ ಮಾತ್ರ ಭಾರೀ ಪೈಪೋಟಿ ಇದ್ದು, ಜಾತಿ ಬೆಂಬಲ ಇಲ್ಲದವರೂ ಕಣಕ್ಕಿಳಿದಿದ್ದಾರೆ. ಇದು ಸಂಘರ್ಷಕ್ಕೆಡೆ ಮಾಡಿದಂತಾಗಿದೆ.

ಮನೆ-ಮನೆಗೆ ಭೇಟಿ: ಚುನಾವಣೆ ಸಮೀಪಿಸುತ್ತಿದ್ದಂತೆ ಅಭ್ಯರ್ಥಿಗಳು ಮನೆ-ಮನೆಗೆ ಭೇಟಿ ನೀಡುವ ಮೂಲಕ ಮತಯಾಚಿಸುತ್ತಿದ್ದಾರೆ. ಹಿಂದೆ ಮಾಡಿದ ಸಣ್ಣ ಪುಣ್ಣ ಸಹಾಯ, ಸೇವೆಗಳನ್ನೇ ಸ್ಮರಿಸಿ ಮತದಾರರ ಮನವೊಲಿಸುವ ಯತ್ನದಲ್ಲಿದ್ದಾರೆ. ಒಂದೊಂದು ಸ್ಥಾನಕ್ಕೆ ಐದಾರು ನೂರು ಮತಗಳಿದ್ದರೆ ಹೆಚ್ಚು. ಬಂಧುಗಳು, ಸ್ವ ಜಾತಿಯವರ ಜತೆ ಇತರೆ ಜನರನ್ನು ಒಲಿಸಿಕೊಂಡರೆ ಗೆಲ್ಲಬಹುದು ಎಂಬ ಲೆಕ್ಕಾಚಾರ ಅಭ್ಯರ್ಥಿಗಳದ್ದು. ಹೀಗಾಗಿ ಬೆಳಿಗ್ಗೆ ಸಂಜೆ ಒಬ್ಬೊಬ್ಬರೇ ಮನೆ-ಮನೆಗೆ ಭೇಟಿ ನೀಡುತ್ತಿದ್ದಾರೆ.

ಇದನ್ನೂ ಓದಿ:ಆನೆಕಾಲು ರೋಗದಿಂದ ಮುಕ್ತಿ ಗೆ ಸಹಕಾರ ಅಗತ್ಯ

ಹಳೆಯದನ್ನೆಲ್ಲ ಮೆಲುಕು ಹಾಕುತ್ತಿದ್ದಾರೆ. ನೆರೆ ಹೊರೆಯವರೊಂದಿಗಿದ್ದ ಸಣ್ಣ ಪುಟ್ಟ ವೈಷಮ್ಯಗಳನ್ನು ಬದಿಗೊತ್ತಿ ರಾಜಿ ಸೂತ್ರ ಪಾಲಿಸುತ್ತಿದ್ದಾರೆ. ಆದಾಗ್ಯೂ ಕೆಲವೆಡೆ ಕಣದಲ್ಲಿ ಪೈಪೋಟಿ ಏರ್ಪಟ್ಟಿರುವುದು ಗುಂಪುಗಾರಿಕೆಗೆ ಅನುವು ಮಾಡಿಕೊಟ್ಟಿದೆ.

ಡಿಜಿಟಲ್‌ ಪ್ರಚಾರ: ಡಿಜಿಟಲ್‌ ಇಂಡಿಯಾದ ಪರಿಕಲ್ಪನೆ ಗ್ರಾಪಂ ಚುನಾವಣೆಯಲ್ಲಿ ಮಾತ್ರ ಸರಿಯಾಗಿ ಬಳಕೆಯಾಗುತ್ತಿದೆ. ಕಣದಲ್ಲಿ ಅನಕ್ಷರಸ್ಥರು ಇದ್ದರೂ ಸೋಶಿಯಲ್‌ ಮೀಡಿಯಾಗಳಲ್ಲಿ ಪ್ರಚಾರಕ್ಕೇನು ಬರ ಕಾಣಿಸುತ್ತಿಲ್ಲ. ಈಗಾಗಲೇ ಚುನಾವಣಾಧಿ ಕಾರಿ ಅಭ್ಯರ್ಥಿಗಳಿಗೆ ಚಿಹ್ನೆಗಳನ್ನು ನೀಡಿದ್ದು, ಫೇಸ್‌ಬುಕ್‌, ವಾಟ್ಸ್‌ ಆ್ಯಪ್‌ಗ್ಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಶೇರ್‌ ಮಾಡಿಕೊಂಡು ಮತ ಯಾಚಿಸುತ್ತಿದ್ದಾರೆ. ಗ್ರಾಮಗಳ ವಾಟ್ಸ್‌ ಆ್ಯಪ್‌ ಗ್ರೂಪ್‌ ಗಳಲ್ಲಿ, ಜಾತಿಗಳ ಗ್ರೂಪ್‌ಗ್ಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಬೇರೆ ಊರುಗಳಲ್ಲಿರುವವರಿಗೆ ಫೋನ್‌ ಮಾಡಿ ಯೋಗ ಕ್ಷೇಮ ವಿಚಾರಿಸುವುದು. ಬಂದು ಮತ ಚಲಾಯಿಸುವಂತೆ ಕೇಳಿಕೊಳ್ಳುತ್ತಿದ್ದಾರೆ.

ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.