ಕಾಂಗ್ರೆಸ್ಗೆ ಹೋರಾಟದ ಮಹತ್ವ ತಿಳಿದಿಲ್ಲ: ಕಟೀಲ್
Team Udayavani, Jan 28, 2018, 5:47 PM IST
ರಾಯಚೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಗೊತ್ತಿಲ್ಲ.
ಅವರಿಗಷ್ಟೇ ಅಲ್ಲ ಕಾಂಗ್ರೆಸ್ನವರಿಗೇ ಹೋರಾಟ ಹಾಗೂ ಹೋರಾಟಗಾರರ ಮಹತ್ವ ತಿಳಿದಿಲ್ಲ ಎಂದು ಮಂಗಳೂರು
ಸಂಸದ ನಳೀನ್ ಕುಮಾರ್ ಕಟೀಲ್ ವಾಗ್ಧಾಳಿ ನಡೆಸಿದರು.
ನಗರದ ಕೋಟೆಯ ಮುಂಗ್ಲಿ ಮುಖ್ಯ ಪ್ರಾಣದೇವರ ದೇವಸಾœನ ಬಳಿ ವೀರ ಸಾವರ್ಕರ್ ಯೂಥ್ ಅಸೋಸಿಯೇಶನ್ ಹಾಗೂ ವೀರ ಸಾವರ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡಿದ್ದ ವೀರ್ ಸಾವರ್ಕರ್ ಪುತœಳಿ ಪ್ರತಿಷ್ಠಾಪನೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ವಿನಾಯಕ್ ದಾಮೋಧರ್ ಸಾವರ್ಕರ್ ಮಹಾನ್ ಸ್ವಾತಂತ್ರ್ಯ ಸೇನಾನಿಯಾಗಿದ್ದ. ದೇಶಕ್ಕಾಗಿ ಜೀವನವನ್ನೇ ಸವೆಸಿದ ನಾಯಕ. ಆದರೆ, ಅಂಥ ಸೇನಾನಿ ಬಗ್ಗೆ ಸರ್ಕಾರಕ್ಕೆ ಕಾಳಜಿಯಿಲ್ಲ. ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್ಠ… ಅಧಿಕಾರಿಗಳ ಮೂಲಕ ಪುತ್ಥಳಿ ಪ್ರತಿಷ್ಠಾಪನೆಗೆ ಅಡ್ಡಿಪಡಿಸುತ್ತಿರುವುದು ಖಂಡನೀಯ. ತನ್ವೀರ್ ಸೇಠ್ಠ… ಭಾರತೀಯರೋ ಪಾಕಿಸ್ತಾನದವರೋ ಎಂಬುದನ್ನು ತಿಳಿಸಲಿ ಎಂದು ಆಗ್ರಹಿಸಿದರು.
ರಾಷ್ಟ್ರಪಿತ ಮಹಾತ್ಮ ಗಾಂಧಿ ಭಾರತ ರಾಮರಾಜ್ಯವಾಗಬೇಕು ಎಂದು ಆಸೆಪಟ್ಟಿದ್ದರೆ ವಿನಃ ಅಲ್ಪಸಂಖ್ಯಾತರ ದೇಶವಾಗಲಿ ಎಂದಲ್ಲ. ಇಂದು ಇಡೀ ವಿಶ್ವ ಭಾರತದ ಏಳಿಗೆಯನ್ನು ನಿಬ್ಬೆರಗಾಗಿ ನೋಡುತ್ತಿದೆ. ನಮ್ಮ ದೇಶ ವಿಶ್ವಕ್ಕೆ ಮಾದರಿಯಾಗಬೇಕು ಎಂಬ ಗಾಂಧೀಜಿ ಕನಸನ್ನು ಪ್ರಧಾನಿ ಮೋದಿ ಈಡೇರಿಸುತ್ತಿದ್ದಾರೆ ಎಂದರು.
ಶೋಭಾಯಾತ್ರೆ: ಕಾರ್ಯಕ್ರಮಕ್ಕೂ ಮುನ್ನ ನಗರದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಶೋಭಾಯಾತ್ರೆ ಮಾಡಲಾಯಿತು. ಆ ನಂತರ ಗಣ್ಯರು ಪುತ್ಥಳಿಗೆ ಹಾರ ಹಾಕಿ ಗೌರವ ಸಲ್ಲಿಸಿದರು. ನಗರಸಭೆ ಸದಸ್ಯ ನರಸಪ್ಪ ಯಕ್ಲಾಸಪುರ, ಮಾಜಿ
ಶಾಸಕರಾದ ಎನ್, ಶಂಕ್ರಪ್ಪ, ಡಾ| ಶಿವರಾಜ ಪಾಟೀಲ್, ಬಸವಗೌಡ ಬ್ಯಾಗವಾಟ್, ಮುಖಂಡರಾದ ಈ. ಆಂಜನೇಯ, ನಗರಸಭೆ ಸದಸ್ಯರಾದ ಈ. ವಿನಯಕುಮಾರ್, ಮಹಾಲಿಂಗ ರಾಂಪುರ ಇತರರಿದ್ದರು.
ಸಾಕಷ್ಟು ಅಡೆತಡೆಗಳ ಮಧ್ಯೆಯೂ ಪುತ್ಥಳಿ ಪ್ರತಿಷ್ಠಾಪನೆ ನಡೆಯಿತು. ಸಾರ್ವಜನಿಕ ಸ್ಥಳದಲ್ಲಿ ವೀರ ಸಾವರ್ಕರ್
ಪುತ್ಥಳಿ ಪ್ರತಿಷ್ಠಾಪನೆ ಮಾಡದಂತೆ ಕೆಲ ಸಂಘಗಳು ದೂರು ನೀಡಿದ್ದವು. ಇದರಿಂದ ಜಿಲ್ಲಾಡಳಿತ ಮೆರವಣಿಗೆಗೂ ಅವಕಾಶ ನೀಡಿರಲಿಲ್ಲ. ಹೀಗಾಗಿ ಸಂಘದ ಸದಸ್ಯರು ತರಾತುರಿಯಲ್ಲಿ ಪುತ್ಥಳಿ ಪ್ರತಿಷ್ಠಾಪಿಸಿದರು. ಶುಕ್ರವಾರ ಬೆಳಗ್ಗೆ ಮೆರವಣಿಗೆಗೆ ಜಿಲ್ಲಾಡಳಿತ ಅವಕಾಶ ನೀಡಿದ್ದರಿಂದ ಕಾರ್ಯಕ್ರಮ ಸರಾಗವಾಗಿ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ