ಪಾಕಿಸ್ತಾನಕ್ಕೆ ಜಯವಾಗಲಿ ಎನ್ನುವ ಮನಸ್ಥಿತಿಗೆ ಕಾಂಗ್ರೆಸ್ ನವರು ತಲುಪಿದ್ದಾರೆ: ಶ್ರೀರಾಮುಲು
Team Udayavani, Feb 19, 2020, 11:50 AM IST
ರಾಯಚೂರು: ಕಾಂಗ್ರೆಸ್ ನಾಯಕರ ಧೋರಣೆ ನೋಡುತ್ತಿದ್ದಾರೆ ಪಾಕಿಸ್ತಾನಕ್ಕೆ ಜಯವಾಗಲಿ ಎನ್ನುವ ಮನಸ್ಥಿತಿಗೆ ತಲುಪಿದ್ದಾರೆ ಎನ್ನುವಂತಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಟೀಕಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಾಕಿಸ್ತಾನಕ್ಕೆ ಜಿಂದಾಬಾದ್ ಎನ್ನುವವರ ಪರ ಕಾಂಗ್ರೆಸ್ ನಾಯಕರು ಮಾತನಾಡುತ್ತಿರುವುದು ಶೋಚನೀಯ. ನೆರೆ, ಬರದ ಚರ್ಚೆ ಮಾಡುವುದು ಬಿಟ್ಟು ದೇಶದ್ರೋಹಿಗಳ ವಿಚಾರವಾಗಿ ಸದನ ಬಹಿಷ್ಕರಿಸಿದ್ದಾರೆ. ಈ ವಿಚಾರದಲ್ಲಿ ನಾವು ಕೈ ಕಟ್ಟಿ ಕೂಡುವುದಿಲ್ಲ ಎಂದರು.
ಕಾಂಗ್ರೆಸ್ ನವರು ಭಾರತವನ್ನು, ಪಾಕಿಸ್ತಾನಕ್ಕೆ ಒತ್ತೆ ಇಡುವ ಹಂತಕ್ಕೆ ತಲುಪಿದ್ದಾರೆ. ಕಾಂಗ್ರೆಸ್ ಭಯೋತ್ಪಾದನೆಗೆ ಪ್ರಚೋದನೆ ನೀಡುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯನವರೂ ಅದೇ ಧಾಟಿಯಲ್ಲಿ ಮಾತನಾಡುತ್ತಿದ್ದಾರೆ. ಆದರೆ, ಪಾಕಿಸ್ತಾನ ಪರ ಘೋಷಣೆ ಹಾಕಿದವರನ್ನು ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಅಜ್ಮಲ್ ಕಸಬ್ ನನ್ನು ಹಿಂದು ಎಂದು ಬಿಂಬಿಸಲು ಮುಂದಾಗಲಾಗಿತ್ತು ಎಂಬ ಅಂಶ ಬಯಲಾಗಿದೆ. ಕಸಬ್ ಗೆ ಬೆಂಗಳೂರಿನ ವಿಳಾಸವಿತ್ತು ಎಂಬ ಮಾಹಿತಿ ಇದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದರು.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತು ಸದನದಲ್ಲಿ ಚರ್ಚಿಸುವ ಉದ್ದೇಶದಿಂದಲೇ ಜಗದೀಶ ಶೆಟ್ಟರ್ ಮನೆಯಲ್ಲಿ ಸಭೆ ನಡೆಸಲಾಗಿತ್ತು. ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಶ್ನಾತೀತ ನಾಯಕರು. ಅವರಿಗೆ ತೊಂದರೆ ಮಾಡುವ ಉದ್ದೇಶದಿಂದ ಸಭೆ ನಡೆಸಿದ್ದಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ನವರಿಗೆ ಬಳ್ಳಾರಿ ಜಿಲ್ಲೆಯ ಹೆಸರು ಕೆಡಿಸುವ ಖಯಾಲಿ ಇದೆ. ಇದೇ ಆನಂದ್ ಸಿಂಗ್, ನಾಗೇಂದ್ರ ಅವರು ಕಾಂಗ್ರೆಸ್ ನಿಂದ ನಿಂತು ಗೆದ್ದಾಗ ಪ್ರಾಮಾಣಿಕರಾಗಿದ್ದರು. ಈಗ ಬಿಜೆಪಿಯಿಂದ ಸಚಿವರಾದ ಕೂಡಲೇ ಕಳಂಕಿತರೇ..? ಆನಂದಸಿಂಗ್ ವಿರುದ್ಧ ಇರುವುದು ಆರೋಪಗಳಷ್ಟೆ. ಮೇಲಾಗಿ ಅವರು ಬಿಜೆಪಿಯ ನಿಷ್ಠಾವಂತ ಮುಖಂಡರು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!