ಸಂವಿಧಾನ ವಿರೋಧಿಗಳು ಅನಾಗರಿಕರು
Team Udayavani, Dec 30, 2017, 4:52 PM IST
ಬಳಗಾನೂರು: ಪ್ರಪಂಚದಲ್ಲಿಯೇ ಮಾದರಿ ಸಂವಿದಾನವಾದ ಭಾರತದ ಸಂವಿದಾನವನ್ನು ದ್ವೇಷಿಸುವವರು ಅನಾಗರಿಕರು ಎಂದು ಉಪನ್ಯಾಸಕ ನಾರಾಯಣ ಬೆಳಗುರ್ಕಿ ಜರಿದರು.
ಡಾ| ಬಿ.ಆರ್ ಅಂಬೇಡ್ಕರ್ ಜಾಗೃತ ಯುವಜನ ವೇದಿಕೆಯಿಂದ ಪಟ್ಟಣದ ಶ್ರೀ ಬಸವೇಶ್ವರ ವೃತ್ತದ ಬಳಿ ಇತ್ತೀಚೆಗೆ ನಡೆದ ಡಾ| ಬಿ.ಆರ್. ಅಂಬೇಡ್ಕರ್ ಅವರ 61ನೇ ಪರಿನಿರ್ವಾಣ ದಿನಾಚರಣೆ ಹಾಗೂ ಅಂಬೇಡ್ಕರ್ ಕನಸು ಮತ್ತು ವಿದ್ಯಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಡಾ| ಬಿ.ಆರ್. ಅಂಬೇಡ್ಕರ್ ಅವರು ಪ್ರಪಂಚದ ವಿವಿಧ ರಾಷ್ಟ್ರಗಳನ್ನು ಸುತ್ತಿ ಅಲ್ಲಿನ ಸಂವಿಧಾನ, ಮತ್ತು ಆಡಳಿತ ಅಧ್ಯಯನ ಮಾಡಿ ಸರ್ವರಿಗೂ ಸಮಾನತೆ ಕಲ್ಪಿಸುವ ಸಂವಿಧಾನ ರಚಿಸಿದ್ದಾರೆ. ಆದರೆ ಈಗ ಕೆಲವರು ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿರುವುದು ದುರ್ದೈವದ ಸಂಗತಿ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಸಿಪಿಐ ರಾಜ್ಯ ಸಮಿತಿ ಸದಸ್ಯ ಬಿ.ಬಸವಲಿಂಗಪ್ಪ ಮಾತನಾಡಿದರು. ಬಸವರಾಜ ಸ್ವಾಮಿ ಪೋತ್ನಾಳ ಸಾನಿಧ್ಯ ವಹಿಸಿದ್ದರು. ಇದೇ ವೇಳೆ ಡಾ| ಬಿ.ಆರ್. ಅಂಬೇಡ್ಕರ್ ಜಾಗೃತ ಯುವಜನ ವೇದಿಕೆ ನಾಮಫಲಕ ಅನಾವರಣಗೊಳಿಸಲಾಯಿತು. ಉಪನ್ಯಾಸಕ ಬಸವರಾಜ ಕ್ರಾಂತಿಗೀತೆ ಹಾಡಿದರು.
ಸಂಘಟನೆ ಜಿಲ್ಲಾ ಕಾರ್ಯದರ್ಶಿ ಬಸವರಾಜ ಎಕ್ಕಿ, ಚಳವಳಿ ಮುಖಂಡ ಎಚ್.ಎನ್. ಬಡಿಗೇರ, ಸಿಂಧನೂರು ಬಸವ ಕೇಂದ್ರದ ವೀರಭದ್ರಪ್ಪ ಕುರಕುಂದಿ, ಉಪನ್ಯಾಸಕ ಶಂಕರ ಗುರಿಕಾರ, ಸುರೇಶ ಹಡಪದ, ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಬಸನಗೌಡ, ದಸಂಸ ರಾಜ್ಯ ಉಪಾಧ್ಯಕ್ಷ ಭೀಮರಾಯಪ್ಪ, ಜಿಲ್ಲಾ, ಡಿಎಸ್ಎಸ್ ತಾಲೂಕು ಅಧ್ಯಕ್ಷ ಬಿ.ಮೌನೇಶ ಮಾತನಾಡಿದರು. ದಸಂಸ ಮುಖಂಡರು, ಸಂಘಟನೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ