ಮುಂದಿನ ವರ್ಷದಿಂದ ಸಂವಿಧಾನ ಪಠ್ಯ


Team Udayavani, Jan 27, 2018, 3:30 PM IST

ray-1.jpg

ರಾಯಚೂರು: ಜಿಲ್ಲಾದ್ಯಂತ 69ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸರ್ಕಾರಿ, ಖಾಸಗಿ ಕಚೇರಿಗಳು, ಸಂಸ್ಥೆಗಳು, ಶಾಲಾ ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಒಕ್ಕೂಟ ವ್ಯವಸ್ಥೆಯ ಸಂದೇಶ ಸಾರಲಾಯಿತು.

ನಗರದ ಡಿಎಆರ್‌ ಮೈದಾನದಲ್ಲಿ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್‌ ಸೇಠ್ಠ… ಧ್ವಜಾರೋಹಣ ನೆರವೇರಿಸಿದರು. ನಂತರ ಪೊಲೀಸ್‌, ಸ್ಕೌಟ್ಸ್‌ ಮತ್ತು ಗೈಡ್ಸ್‌ ತಂಡಗಳಿಂದ ಧ್ವಜ ವಂದನೆ ಸ್ವೀಕರಿಸಿದರು.

ನಂತರ ಮಾತನಾಡಿದ ಅವರು, ದೇಶದ ಸಂವಿಧಾನದ ವಿಶ್ವಕ್ಕೆ ಮಾದರಿಯಾಗಿದೆ. ಇಂಥ ಸಂವಿಧಾನದ ಕುರಿತು ಕೆಲವರು ಕೀಳಾಗಿ ಮಾತನಾಡುತ್ತಿದ್ದಾರೆ. ಇಂಥ ವೇಳೆ ಮಕ್ಕಳಲ್ಲಿ ಸಂವಿಧಾನದ ಪ್ರಜ್ಞೆ ಮೂಡಿಸುವ ಅಗತ್ಯವಿದ್ದು,
ಬರುವ ಶೈಕ್ಷಣಿಕ ವರ್ಷದಿಂದ ಪಠ್ಯದಲ್ಲಿ ಸಂವಿಧಾನ ಪೀಠಿಕೆ ಮುದ್ರಿಸಲು ನಿರ್ಧರಿಸಲಾಗಿದೆ. ಅದೇ ರೀತಿ ಹೋಬಳಿಗೊಂದು ಕರ್ನಾಟಕ ಪಬ್ಲಿಕ್‌ ಶಾಲೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಶೈಕ್ಷಣಿಕ ಸುಧಾರಣೆಗಾಗಿ ಸರ್ಕಾರ ಸಾಕಷ್ಟು ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದೆ. ಶಿಕ್ಷಕರ ಹುದ್ದೆಗಳ ಭರ್ತಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವುದರ ಜತೆಗೆ ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಹೋಬಳಿಗಳಲ್ಲಿ ಕರ್ನಾಟಕ ಸಾರ್ವಜನಿಕ ಶಾಲೆ ಆರಂಭಿಸಿ 1ರಿಂದ 7ನೇ ತರಗತಿವರೆಗೆ ಮಕ್ಕಳಿಗೆ ಶಿಕ್ಷಣ ನೀಡಲಾಗುವುದು ಎಂದು ಹೇಳಿದರು. 

ಸರ್ಕಾರಗಳು ನಮಗೆ ಏನು ನೀಡಿವೆ ಎನ್ನುವ ಮನೋಭಾವದಿಂದ ಹೊರಬಂದು ದೇಶಕ್ಕೆ ನಮ್ಮ ಕೊಡುಗೆ ಏನು ಎಂದು ಚಿಂತಿಸುವ ಅಗತ್ಯವಿದೆ. ಶಿಕ್ಷಣದಿಂದ ಜೀವನ ಮೌಲ್ಯ ನೀಡಲು ಸಾಧ್ಯ. ಈ ನಿಟ್ಟಿನಲ್ಲಿ ಹೈ-ಕ ಭಾಗವನ್ನು ನಂಜುಂಡಪ್ಪ ವರದಿಯನ್ವಯ ಅಭಿವೃದ್ಧಿ ಮಾಡಲು ಸರ್ಕಾರ ಆದ್ಯತೆ ನೀಡಿದೆ ಎಂದು ಹೇಳಿದರು. 

ನಂತರ ವಿವಿಧ ಶಾಲೆಗಳ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಇದೇ ವೇಳೆ ಸ್ವಾತಂತ್ರ್ಯ ಹೋರಾಟಗಾರರು, ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಲಿರುವ ಅಧಿಕಾರಿ, ಸಿಬ್ಬಂದಿ ಹಾಗೂ ಸಾಧಕರನ್ನು ಸಚಿವರು ಸನ್ಮಾನಿಸಿದರು.

ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌ .ಬೋಸರಾಜು, ಸಂಸದ ಬಿ.ವಿ.ನಾಯಕ, ಎಪಿಎಂಸಿ ಅಧ್ಯಕ್ಷ ಅಮರೇಗೌಡ ಹಂಚಿನಾಳ, ಆರ್‌ಡಿಎಸ್‌ ಅಧ್ಯಕ್ಷ ಅಬ್ದುಲ್‌ ಕರೀಂ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ರಾಮಣ್ಣ ಇರಬಗೇರಾ, ಮುಖಂಡರಾದ ಯಂಕಣ್ಣ ಯಾದವ, ಕೆ. ಶಾಂತಪ್ಪ, ಡಿಸಿ ಡಾ| ಬಗಾದಿ ಗೌತಮ, ಜಿಪಂ ಸಿಇಒ ಅಭಿರಾಮ ಜಿ. ಶಂಕರ, ಎಸ್‌ಪಿ ಡಿ. ಕಿಶೋರ ಬಾಬು ಸೇರಿ ವಿವಿಧ ಪಕ್ಷಗಳ ಮುಖಂಡರು, ಇಲಾಖೆ ಅಧಿಕಾರಿ, ಸಿಬ್ಬಂದಿ, ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳು, ಪಾಲಕರು, ಸಾರ್ವಜನಿಕರು ಪಾಲ್ಗೊಂಡಿದ್ದರು. ಪೊಲೀಸ್‌ ಸಿಬ್ಬಂದಿ, ಶಾಲಾ ಮಕ್ಕಳಿಂದಲೂ ಪಥ ಸಂಚಲನ ನಡೆಯಿತು. ಸ್ವಾತಂತ್ರ್ಯ ಹೋರಾಟಗಾರರು, ಹಿರಿಯ ನಾಗರಿಕರನ್ನು ಸಚಿವರು ಸನ್ಮಾನಿಸಿ ಗೌರವಿಸಿದರು.

ನೆಪ ಮಾತ್ರ
ಗಣರಾಜ್ಯೋತ್ಸವ ನಿಮಿತ್ತ ಪೆರೇಡ್‌ ಮೈದಾನದಲ್ಲಿ ಪ್ರದರ್ಶಿಸಿದ ಸ್ತಬ್ಧ ಚಿತ್ರಗಳು ಕಾಟಾಚಾರಕ್ಕೆ ಎನ್ನುವಂತಿದ್ದವು. ಟ್ರಾμಕ್‌ ಪೊಲೀಸ್‌ ಇಲಾಖೆಯಿಂದ ಹೆಲ್ಮೆಟ್‌ ಧಾರಣೆ  ಕುರಿತು ಜಾಗೃತಿ ಮೂಡಿಸುವ ಸ್ಥಬ್ಧ ಚಿತ್ರ ಪ್ರದರ್ಶಿಸಲಾಯತು. ಅದರ ಜತೆಗೆ ಆರೋಗ್ಯ ಇಲಾಖೆಯಿಂದ ಪೊಲಿಯೋ ಕುರಿತು ಜಾಗೃತಿ ಮೂಡಿಸುವ ಸ್ಥಬ್ಧ ಚಿತ್ರ ಪ್ರದರ್ಶಿಸಲಾಯಿತು. 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.