ಸಹಕಾರಿ ಬ್ಯಾಂಕ್ಗಳಿಂದ ಬಡವರು-ವ್ಯಾಪಾರಸ್ಥರಿಗೆ ಅನುಕೂಲ
Team Udayavani, Sep 24, 2017, 2:43 PM IST
ಮಾನ್ವಿ: ಸಹಕಾರಿ ಸಂಸ್ಥೆಗಳು ಬಡವರು, ರೈತರು ಹಾಗೂ ಮಧ್ಯಮ ವರ್ಗದ ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಿವೆ ಎಂದು ಚೀಕಲಪರ್ವಿ ಮಠದ ಶ್ರೀ ಅಭಿನವ ರುದ್ರಮುನಿ ಸ್ವಾಮೀಜಿ ಹೇಳಿದರು.
ಪಟ್ಟಣದ ಧ್ಯಾನ ಮಂದಿರದಲ್ಲಿ ನಡೆದ ವಿರೂಪಾಕ್ಷೇಶ್ವರ ಪತ್ತಿನ ಸೌಹರ್ದ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು. ಗ್ರಾಹಕರಿಗೆ ಉತ್ತಮ ಸೇವೆ ಸಲ್ಲಿಸುವುದರಿಂದ ಹಾಗೂ ಸಾಲಗಾರರು ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡುವುದರಿಂದ ಸಹಕಾರಿ ಬ್ಯಾಂಕ್ಗಳ ಅಭಿವೃದ್ಧಿ ಸಾಧ್ಯ
ಎಂದರು.
ವಿರೂಪಾಕ್ಷೇಶ್ವರ ಪತ್ತಿನ ಬ್ಯಾಂಕ್ 2016-17ನೇ ಸಾಲಿನಲ್ಲಿ 96 ಲಕ್ಷಕ್ಕೂ ಅಧಿಕ ನಿವ್ವಳ ಲಾಭ ಗಳಿಸಿರುವುದು
ಶ್ಲಾಘನೀಯ ಕಾರ್ಯ ಎಂದರು. ಅಧ್ಯಕ್ಷತೆ ವಹಿಸಿದ್ದ ಕಲ್ಮಠದ ಡಾ|ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಸಹಕಾರಿ ಸಂಸ್ಥೆಗಳ ಮೂಲಕ ಬಡವರಿಗೆ, ರೈತರಿಗೆ ಮತ್ತು ಸಣ್ಣ ವ್ಯಾಪಾರಸ್ಥರಿಗೆ ಸಾಲ ಸೌಭ್ಯವನ್ನು ಒದಗಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ವರ್ಷದ ವ್ಯಕ್ತಿ ಎಂದು ಗುರುತಿಸಿ ಸನ್ಮಾನಿಸಲಾಯಿತು. ಸಿಂಧನೂರಿನ ರಾಜಶೇಖರ, ಬ್ಯಾಂಕಿನ ಕಾ.ನಿ. ಅಧಿಕಾರಿ ಶಂಕರಾನಂದ, ನಿರ್ದೇಶಕರಾದ ಅಮರಗುಂಡಪ್ಪ ಮೇಟಿ, ಶಿವಯ್ಯಸ್ವಾಮಿ, ಎಚ್.ಎಂ.ಬಸವರಾಜಪ್ಪಗೌಡ, ಅಶೋಕಕುಮಾರ ಎಚ್.ಎಂ., ವಿಶ್ವಾರಾಧ್ಯಸ್ವಾಮಿ, ಆರ್. ರಾಘವೇಂದ್ರ ಶೆಟ್ಟಿ, ಎಚ್. ಸೂಗಪ್ಪಗೌಡ, ಆರ್. ಪಾಂಡುರಂಗ ಶೆಟ್ಟಿ, ಆರ್. ನಾಗರಾಜ ಶೆಟ್ಟಿ, ಚನ್ನಪ್ಪಗೌಡ, ಕೃಪಾಸಾಗರ ಪಾಟೀಲ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ