ವೈಚಾರಿಕ ಚಿಂತನೆ‌ಗಳಿಂದ ಪರಿವರ್ತನೆ: ರವೀಂದ್ರನಾಥ


Team Udayavani, Jun 16, 2018, 4:49 PM IST

raichuru-2.jpg

ಮಾನ್ವಿ: ಇಂದಿನ ಮನುಕುಲ ಬಸವಣ್ಣನವರ ವೈಚಾರಿಕ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ
ಸಾಮಾಜಿಕ ಬದಲಾವಣೆ ಸಾಧ್ಯ ಎಂದು ಹಂಪಿ ವಿಶ್ವವಿದ್ಯಾಲಯದ ಹಸ್ತಪ್ರತಿ ವಿಭಾಗದ ಮುಖ್ಯಸ್ಥ ರವೀಂದ್ರನಾಥ ಹೇಳಿದರು.

ಅಮರಮ್ಮ ಚೆನ್ನಬಸವಪ್ಪ ಬೆಟ್ಟದೂರು ಪ್ರತಿಷ್ಠಾನದಿಂದ ಪಟ್ಟಣದ ಶಾದಿಮಹಲ್‌ ನಲ್ಲಿ ಹಮ್ಮಿಕೊಂಡಿದ್ದ ಚೆನ್ನಬಸವಪ್ಪ ಬೆಟ್ಟದೂರು ಅವರ 10ನೇ ಪುಣ್ಯಸ್ಮರಣೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಚೆನ್ನಬಸವಪ್ಪ ಬೆಟ್ಟದೂರು ಅವರು ಬಸವಣ್ಣನವರ ತತ್ವ ಸಿದ್ಧಾಂತದಂತೆ ಕೃಷಿ, ಸಾಹಿತ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದರು. ಶರಣ ಧರ್ಮದ ಜೊತೆಗೆ ರೈತಪರ ಹೋರಾಟಗಳನ್ನು ನಡೆಸಿ ಈ ಭಾಗದಲ್ಲಿ ವಚನ ಸಾಹಿತ್ಯವನ್ನು ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದರು.

ಬಸವಣ್ಣವರು ವೈಚಾರಿಕ ಚಿಂತನೆಗಳನ್ನು ಕೇವಲ ಘೋಷಿಸಲಿಲ್ಲ. ನುಡಿದಂತೆ ನಡೆದು ಇತರೆ ಕೆಳ ವರ್ಗದವರಿಗೆ ಶಿಕ್ಷಣ, ಆಚಾರ, ವಿಚಾರಗಳು ನಿತ್ಯ ಬದುಕಿನ ಮಾರ್ಗಗಳಾಗಿದ್ದವು. ಬಸವಣ್ಣನವರು ರಾಜಕೀಯ ರಂಗದಲ್ಲಿ
ಪ್ರಧಾನಿಯಾದರೂ ಬಹಿರಂಗದಲ್ಲಿ ತೋರಿಸಿಕೊಂಡಿರಲಿಲ್ಲ.  ಆದರೆ ಇಂದಿನ ರಾಜಕಾರಣಿಗಳು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವುದಕ್ಕಾಗಿ ರಾಜಕೀಯ ಮಾಡುತ್ತಿದ್ದಾರೆ ಎಂದು ವಿಷಾದಿಸಿದರು. 

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ಡಾ| ಬಸವಪ್ರಭು ಪಾಟೀಲ ಬೆಟ್ಟದೂರು, ಕಳೆದ 10 ವರ್ಷಗಳಿಂದ
ಪ್ರತಿಷ್ಠನಾದಿಂದ ಉತ್ತಮ ವೈಚಾರಿಕ ಕೃತಿಗಳನ್ನು ಆಯ್ಕೆ ಮಾಡಿ ಲೇಖಕರನ್ನು ಪುರಸ್ಕರಿಸಲಾಗುತ್ತಿದೆ. ನಮ್ಮ ತಂದೆ
ಬಸವಣ್ಣನವರ ತತ್ವಗಳನ್ನೇ ನಂಬಿ ಬದುಕಿದವರು ಎಂದ ಅವರು, ತಮ್ಮ ತಂದೆಯ ವಕೀಲ ವೃತ್ತಿ, ರೈತ ಹೋರಾಟಗಳ ಜೀವನ ಸಾಧನೆಗಳ ಕುರಿತು ಮಾತನಾಡಿದರು.

ಸ್ವರಾಜ್‌ ಇಂಡಿಯಾ ಪಕ್ಷದ ರಾಜ್ಯ ಕಾರ್ಯದರ್ಶಿ ನಾಗರತ್ನಮ್ಮ ಪಾಟೀಲ ಮಾತನಾಡಿದರು. ಅಮರಮ್ಮ
ಚೆನ್ನಬಸವಪ್ಪ ಬೆಟ್ಟದೂರು ಪ್ರತಿಷ್ಠಾನದ 2016 ವಚನ ಸಾಹಿತ್ಯ ಹಾಗೂ ವೈಚಾರಿಕ ಸಾಹಿತ್ಯ ಪ್ರಶಸ್ತಿಯನ್ನು “ಉಳುವವರ ಪರ ವಕಾಲತು’ ಕೃತಿಯ ಸಾಹಿತಿ, ಕೃಷಿ ವಿಜ್ಞಾನಿ ಡಾ| ಟಿ.ಎಸ್‌. ಚನ್ನೇಶ ಅವರಿಗೆ ನೀಡಲಾಯಿತು.
10ನೇ ತರಗತಿ ಸಿಬಿಎಸ್‌ಇ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ 15ನೇ ರ್‍ಯಾಂಕ್‌ ಪಡೆದ ಕುಮಾರ ಅಲ್ಲಮಪ್ರಭು ಅವರನ್ನು ಗೌರವಿಸಲಾಯಿತು. ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ ಇತರರು ಇದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.