ಹತ್ತಿ ಬೆಳೆಗಾರನ ಮೊಗದಲ್ಲಿ ಮಂದಹಾಸ ತಂದ “ಬಿಳಿಬಂಗಾರ”


Team Udayavani, Jan 3, 2022, 12:03 PM IST

11farmer

ರಾಯಚೂರು: ಕೃಷಿಕರು ಒಂದೆಡೆ ಇಳುವರಿ ಬಂದಿಲ್ಲ ಎಂದು ಪೇಚಾಡುವ ಹೊತ್ತಲ್ಲೇ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗುತ್ತಿರುವುದು ಸಮಾಧಾನಕರ. ಈ ಬಾರಿ ಹತ್ತಿಗೂ ಭಾರೀ ಬೆಲೆ ಸಿಕ್ಕಿದ್ದು, ಬೆಳೆಗಾರರಿಗೆ ನಿಟ್ಟುಸಿರು ಬಿಡುವಂತಾಗಿದೆ.

ಕಳೆದ ತಿಂಗಳು ಜಿಲ್ಲೆಯ ವಿವಿಧೆಡೆ ಅಕಾಲಿಕ ಮಳೆ ಸುರಿದು ಬೆಳೆಗಳಿಗೆಲ್ಲ ಕುತ್ತುಂಟಾಯಿತು. ಇಳುವರಿ ಕಡಿಮೆಯಾಗಲು ಇದೇ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಆದರೆ, ಕೆಲವೆಡೆ ಮಳೆ ಸುರಿದರೂ ಉತ್ತಮ ಇಳುವರಿ ಸಿಕ್ಕಿದೆ. ಫಸಲು ಕಡಿಮೆ ಬಂದಿರುವ ಕಡೆ ದರ ಹೆಚ್ಚಳ ಕೈ ಹಿಡಿದರೆ, ಉತ್ತಮ ಬೆಳೆ ಬೆಳೆದ ರೈತರಿಗೆ ಈ ಬಾರಿ ಶುಕ್ರದೆಸೆ ಎಂದೇ ಹೇಳಬೇಕು.

ಪ್ರತಿ ವರ್ಷ ಹತ್ತಿ ಮಾರುಕಟ್ಟೆ ಪ್ರಾಂಗಣಕ್ಕೆ ಸಾಲುಗಟ್ಟುತ್ತಿದ್ದ ವಾಹನಗಳು ಈ ಬಾರಿ ಅತ್ತ ಸುಳಿಯುವುದನ್ನು ಕಡಿಮೆ ಮಾಡಿವೆ. ಹತ್ತಿಗೆ ಎಲ್ಲಿಲ್ಲದ ಬೇಡಿಕೆ ಬಂದಿರುವ ಕಾರಣ ನೇರ ಮಿಲ್‌ಗ‌ಳಿಗೆ ಸಾಗಣೆ ಮಾಡುತ್ತಿದ್ದಾರೆ. ನಗರದ ರಾಯಚೂರು ಹತ್ತಿ ಗಂಜ್‌ ಮಾರುಕಟ್ಟೆ ಪ್ರಾಂಗಣದಲ್ಲಿ 111 ವರ್ತಕ ಮಳಿಗೆಗಳಿದ್ದವು. ಅದರಲ್ಲಿ ಅರ್ಧದಷ್ಟು ಅಂಗಡಿಗಳು ಸ್ಥಗಿತಗೊಂಡಿದ್ದು, ಉಳಿದವು ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಈ ಬಾರಿ ಅದರಲ್ಲೂ ಸಾಕಷ್ಟು ಅಂಗಡಿಗಳಿಗೆ ನಿರೀಕ್ಷಿತ ವ್ಯಾಪಾರ ನಡೆಯುತ್ತಿಲ್ಲ. ರೈತರು ನೇರವಾಗಿ ಮಿಲ್‌ಗ‌ಳಿಗೆ ಹೋಗುತ್ತಿದ್ದಾರೆ ಎನ್ನುತ್ತಾರೆ ವರ್ತಕರು.

ಕಳೆದ ವರ್ಷ ಭಾರತೀಯ ಹತ್ತಿ ನಿಗಮ (ಸಿಸಿಐ)ದಿಂದಲೇ 6,500 ರೂ.ಗೆ ಹತ್ತಿ ಖರೀದಿಸಲಾಗಿತ್ತು. ಆದರೆ, ಈ ವರ್ಷ ಕ್ವಿಂಟಲ್‌ ಹತ್ತಿ ದರ 10 ಸಾವಿರ ರೂ. ಗಡಿ ದಾಟಿದೆ. ಒಂದು ಕಾಲದಲ್ಲಿ ಅತಿ ಹೆಚ್ಚು ಹತ್ತಿ ಬೆಲೆಯುವ ಪ್ರದೇಶವಾಗಿದ್ದ ರಾಯಚೂರು ಜಿಲ್ಲೆಯಲ್ಲಿ ಕ್ರಮೇಣ ಹತ್ತಿ ಬೆಳೆ ಮಾಯವಾಗಿತ್ತು. ಈಚೆಗೆ ಮತ್ತೆ ಹತ್ತಿ ಬೆಳೆಯುತ್ತಿದ್ದು, ಈ ದರ ಹೆಚ್ಚಳ ರೈತರಿಗೆ ಮತ್ತಷ್ಟು ಪುಷ್ಟಿ ನೀಡಿದೆ.

ರಾಯಚೂರು ಮಾತ್ರವಲ್ಲದೇ, ಆಂಧ್ರ, ತೆಲಂಗಾಣ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳ ರೈತರು ರಾಯಚೂರಿಗೆ ಹತ್ತಿ ತರುತ್ತಿದ್ದಾರೆ. ಎಪಿಎಂಸಿ ಅಂಗಡಿಗಳಲ್ಲಿ ಮುಂಗಡ ಸಾಲ ಪಡೆದ ರೈತರು ಮಾತ್ರ ಮಾರುಕಟ್ಟೆಗೆ ಹತ್ತಿ ತಂದರೆ, ಸ್ವಾವಲಂಬೆಯಿಂದ ಕೃಷಿ ಮಾಡಿದ ಬಹುತೇಕರು ಎಲ್ಲಿ ಬೆಲೆ ಹೆಚ್ಚು ಸಿಗುತ್ತಿದೆಯೋ ಅಲ್ಲಿಯೇ ಮಾರುತ್ತಿದ್ದಾರೆ. ಕೃಷಿ ಮಾರುಕಟ್ಟೆ ವ್ಯವಸ್ಥೆಯನ್ನು ಸರ್ಕಾರ ಖಾಸಗೀಕರಣ ಮಾಡಿದ ಮೇಲೆ ನಾವು ಕೂಡ ನಿಯಂತ್ರಣ ಕಳೆದುಕೊಂಡಿದ್ದೇವೆ. ರೈತರು ತಮಗೆ ಹೆಚ್ಚಿನ ಲಾಭ ಸಿಕ್ಕಲ್ಲಿ ಮಾರಾಟ ಮಾಡಿಕೊಳ್ಳುತ್ತಿದ್ದಾರೆ ಎನ್ನುತ್ತಾರೆ ಎಪಿಎಂಸಿ ಅಧಿಕಾರಿಗಳು.

ಸಿಗದ ಕೂಲಿ ಕಾರ್ಮಿಕರು

ಇನ್ನೂ ಸಾಕಷ್ಟು ಜಮೀನುಗಳಲ್ಲಿ ಹತ್ತಿ ಬಿಡಿಸಲಾಗದೆ ಬಿಡಲಾಗಿದೆ. ಅದಕ್ಕೆ ಕೂಲಿ ಕಾರ್ಮಿಕರ ಕೊರತೆಯೇ ಮುಖ್ಯ ಕಾರಣ. ಈಗ ಕೂಲಿ ಲೆಕ್ಕದಲ್ಲಿ ಯಾರು ಕೆಲಸಕ್ಕೆ ಬರುತ್ತಿಲ್ಲ. ಕೆಜಿ ಹತ್ತಿಗೆ ಇಂತಿಷ್ಟು ಎಂದು ನೀಡಬೇಕು ಎನ್ನುತ್ತಿದ್ದಾರೆ. ಸದ್ಯಕ್ಕೆ ಕೆಜಿಗೆ 14 ರೂ. ನೀಡುತ್ತಿದ್ದು, ಒಬ್ಬ ಕೂಲಿ ಮಹಿಳೆ ನಿತ್ಯ 70-80 ಕೆಜಿ ಹತ್ತಿ ಬಿಡಿಸುತ್ತಿದ್ದಾರೆ. ಅಲ್ಲದೇ, ಎಲ್ಲರೂ ಒಂದೇ ಸಮಯದಲ್ಲಿ ಹತ್ತಿ ಬಿಡಿಸುತ್ತಿರುವ ಕಾರಣ ಸಮಯಕ್ಕೆ ಸರಿಯಾಗಿ ಕೂಲಿ ಕಾರ್ಮಿಕರೇ ಸಿಗುತ್ತಿಲ್ಲ. ಈ ಕಾರಣಕ್ಕೆ 40-50 ಕಿ.ಮೀ. ದೂರದಿಂದ ಕೂಲಿಯಾಳುಗಳನ್ನು ವಾಹನಗಳಲ್ಲಿ ಕರೆ ತರುವಂತ ಸ್ಥಿತಿ ಇದೆ.

ಜಿಲ್ಲೆಯಲ್ಲಿ ರೈತರು ಹತ್ತಿ ಹೆಚ್ಚಾಗಿ ಬೆಳೆದಿದ್ದು, ಹತ್ತಿ ಬಿಡಿಸಲು ಕೂಲಿ ಕಾರ್ಮಿಕರೇ ಸಿಗುತ್ತಿಲ್ಲ. ಕೇವಲ ಹತ್ತಿ ಬೆಲೆ ಮಾತ್ರವಲ್ಲ, ಕೂಲಿ ದರವೂ ಹೆಚ್ಚಾಗಿದೆ. ಅದರ ಜತೆಗೆ ಕ್ರಿಮಿನಾಶಕ ಸಿಂಪಡಣೆ ಸೇರಿದಂತೆ ಖರ್ಚುಗಳು ಹೆಚ್ಚಾಗಿದೆ. ಮಳೆ ಹೆಚ್ಚಾಗಿ ಇಳುವರಿ ಕಡಿಮೆಯಾಗಿದ್ದು, ಬೆಲೆ ಹೆಚ್ಚಾಗಿರುವುದು ರೈತರಿಗೆ ಅನುಕೂಲವಾಗಿದೆ. -ಎನ್‌.ಲಕ್ಷ್ಮಣಗೌಡ ಕಡಗಂದೊಡ್ಡಿ, ರೈತ ಮುಖಂಡ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.