ಬಳಗಾನೂರು: 30 ಜನರಿಗೆ ಕೋವಿಡ್ ಮಹಾಮಾರಿ
Team Udayavani, Aug 10, 2020, 1:49 PM IST
ಬಳಗಾನೂರು: ಪಟ್ಟಣದ ಪೊಲೀಸ್ ಠಾಣೆಯ ಎಎಸ್ಐ ಸೇರಿ ಶನಿವಾರ ಮತ್ತು ರವಿವಾರ ಒಟ್ಟು 30 ಜನರಿಗೆ ಕೋವಿಡ್ ದೃಢಪಟ್ಟಿದೆ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿ ಕಾರಿ ಡಾ| ದೌಲಾಸಾಬ್ ಮುದ್ದಾಪುರ ತಿಳಿಸಿದ್ದಾರೆ.
ಶನಿವಾರ ಮತ್ತು ರವಿವಾರ ದುರ್ಗಾ ಕ್ಯಾಂಪ್ 15, ಸುಂಕನೂರು ಗ್ರಾಮದಲ್ಲಿ 10, ಬೆಳ್ಳಿಗನೂರು-2, ಹಂಚಿನಾಳ ಕ್ಯಾಂಪ್-1, ಗುಡದೂರು-1 ಪ್ರಕರಣ ದೃಢಪಟ್ಟಿದ್ದು, ಸೋಂಕಿತರನ್ನು ಸಿಂಧನೂರಿನ ಕೋವಿಡ್ ಕೇರ್ ಸೆಂಟರ್ನಲ್ಲಿ ದಾಖಲಿಸಲಾಗಿದೆ. ಪಟ್ಟಣದ ಪೊಲೀಸ್ ಠಾಣೆ ಸೇರಿ ಕೋವಿಡ್ ದೃಢಪಟ್ಟವರ ಮನೆ ಹಾಗೂ ಸುತ್ತಲಿನ ಪ್ರದೇಶವನ್ನು ಸಂಬಂಧಿಸಿದ ಪಪಂ ಹಾಗೂ ಗ್ರಾಪಂ, ಕಂದಾಯ ಇಲಾಖೆ ಅಧಿಕಾರಿಗಳು ಸ್ಯಾನಿಟೈಜೇಷನ್ ಮಾಡಿಸಿದ್ದಾರೆ. ಸೋಂಕಿತರ ಕುಟುಂಬದವರು ಮತ್ತು ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೇ ತೀವ್ರ ಉಸಿರಾಟ ತೊಂದರೆ ಇರುವವವರು, ನೆಗಡಿ -ಜ್ವರದಂತಹ ಲಕ್ಷಣ ಇರುವ ಮತ್ತಿತರರು ಶೀಘ್ರ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ಪಪಂ ಕರ ವಸೂಲಿಗಾರ ಪಂಪಾಪತಿ ನಾಯಕ್ ನೇತೃತ್ವದಲ್ಲಿ ಸಿಬ್ಬಂದಿ ಅಮರೇಶ ಸ್ಯಾನಿಟೈಸರ್ ಸಿಂಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’