![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಸಂತೆ-ಸರ್ಕಾರಿ ಕಚೇರಿಗೆ ಬರುವವರಿಗೂ ಕೋವಿಡ್ ಟೆಸ್ಟ್!
Team Udayavani, Oct 3, 2020, 3:41 PM IST
![ಸಂತೆ-ಸರ್ಕಾರಿ ಕಚೇರಿಗೆ ಬರುವವರಿಗೂ ಕೋವಿಡ್ ಟೆಸ್ಟ್!](https://www.udayavani.com/wp-content/uploads/2020/10/rc-tdy-1-1-620x372.jpg)
ದೇವದುರ್ಗ: ಮಿನಿ ವಿಧಾನಸೌಧದಲ್ಲಿ ಕೋವಿಡ್ ತಪಾಸಣೆ ಮಾಡಲಾಯಿತು.
ದೇವದುರ್ಗ: ತಾಲೂಕಿನಾದ್ಯಂತ ಕೋವಿಡ್ ಪಾಸಿಟಿವ್ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರ ಪತ್ತೆಗೆ ತಾಲೂಕು ಆಡಳಿತ ಸರ್ಕಾರಿ ಕಚೇರಿ, ವಾರದ ಸಂತೆಗೆಬರುವ ಪ್ರತಿಯೊಬ್ಬರಿಗೂ ಕೊರೊನಾ ಟೆಸ್ಟ್ ಮಾಡುತ್ತಿದೆ.
ಅತಿ ಹೆಚ್ಚು ಪ್ರಕರಣಗಳು: ದೇವದುರ್ಗ ತಾಲೂಕಲ್ಲಿ ಸೆಪ್ಟೆಂಬರ್ ಒಂದೇ ತಿಂಗಳಲ್ಲಿ 543 ಕೋವಿಡ್ ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಇದರಲ್ಲಿ ದೇವದುರ್ಗ ಪಟ್ಟಣ ಮತ್ತು ಜಾಲಹಳ್ಳಿ ಗ್ರಾಮದಲ್ಲೇ ಹೆಚ್ಚು ಜನರಿಗೆ ಸೋಂಕು ತಗುಲಿದೆ. ಅರಕೇರಾ, ಗಬ್ಬೂರು ಗ್ರಾಮದಲ್ಲಿ ಕಡಿಮೆ ಸೋಂಕಿತರು ಪತ್ತೆಯಾಗಿದ್ದಾರೆ. ಕೋವಿಡ್ ಚಿಕಿತ್ಸೆ ಕೇಂದ್ರದಲ್ಲಿ 16 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 14 ಜನ ಖಾಸಗಿ ಆಸ್ಪತ್ರೆಯಲ್ಲಿ,124 ಜನ ಹೋಂ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 300ಕ್ಕೂ ಹೆಚ್ಚು ಜನ ಗುಣಮುಖರಾಗಿದ್ದು, ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದವರು ಹೋಂ ಕ್ವಾರಂಟೈನ್ ಆಗಿದ್ದಾರೆ.
ಸಂತೆಯಲ್ಲಿ ತಪಾಸಣೆ: ಕೋವಿಡ್ ಸೋಂಕು ತಡೆಗೆ ತಾಲೂಕು ಆಡಳಿತ ಮತ್ತು ಆರೋಗ್ಯ ಇಲಾಖೆ ವಾರದ ಸಂತೆ ಮತ್ತು ಸರ್ಕಾರಿ ಕಚೇರಿಗೆ ಆಗಮಿಸುವವರ ತಪಾಸಣೆ ಮಾಡುತ್ತಿದೆ. ಬುಧವಾರ ಗಾಣಧಾಳ ಸಂತೆಯಲ್ಲಿ ಜನರ ತಪಾಸಣೆ ನಡೆಸಲಾಯಿತು. ಅರಕೇರಾ, ಜಾಲಹಳ್ಳಿ, ಗಲಗ, ಮುಂಡರಗಿ, ದೇವದುರ್ಗ ಪಟ್ಟಣ ಸೇರಿ ತಾಲೂಕಿನಲ್ಲಿ ನಡೆಯುವ ವಾರದ ಸಂತೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಇನ್ನು ಸರ್ಕಾರಿ ಕಚೇರಿಗೆ ಆಗಮಿಸುವವರಿಗೆ ಕೋವಿಡ್ ಪರೀಕ್ಷೆಗೆ ಒಳಪಟ್ಟ ನಂತರವೇ ಅವರ ಕೆಲಸ ಮಾಡಿಸಿಕೊಳ್ಳಲು ಅನುಮತಿ ನೀಡಲಾಗುತ್ತಿದೆ. ಜಿಲ್ಲಾಡಳಿತ ಸೂಚನೆಯಂತೆ ಇಲ್ಲಿನ ಅಧಿಕಾರಿಗಳು ತಪಾಸಣೆಗೆ ಮುಂದಾಗಿದ್ದಾರೆ.
ತಂಡ ರಚನೆ: ಕೋವಿಡ್ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆಯಿಂದ ಲ್ಯಾಬ್ ಸಿಬ್ಬಂದಿ ಸ್ಟಾಫ್ನರ್ಸ್ ಸೇರಿ ಮೂರು ತಂಡ ರಚಿಸಲಾಗಿದೆ. ಪಟ್ಟಣದಲ್ಲಿ ಶನಿವಾರ ಸಂತೆ ನಡೆಯುತ್ತದೆ. ಬೇರೆ ಬೇರೆ ತಾಲೂಕಿನಿಂದ ಹೆಚ್ಚು ಜನ ಬರುವ ಹಿನ್ನೆಲೆಯಲ್ಲಿ ಪರೀಕ್ಷೆಗೆ ಎರಡು ತಂಡ ರಚಿಸಲಾಗಿದೆ. ಖಾಸಗಿ ಆಸ್ಪತ್ರೆಗೆ ಆಗಮಿಸುವ ರೋಗಿಗಳ ಕೋವಿಡ್ ತಪಾಸಣೆಗೂ ಸಿಬ್ಬಂದಿ ನಿಯೋಜಿಸಲಾಗಿದೆ.
ಹಳ್ಳಿಗಳ ಆಯ್ಕೆ ಚಿಂತನೆ: ಜಾಲಹಳ್ಳಿ, ಅರಕೇರಾ, ಗಬ್ಬೂರು, ಗಲಗ ಸೇರಿ ಹೋಬಳಿ ವ್ಯಾಪ್ತಿಯ ದೊಡ್ಡ ಹಳ್ಳಿಗಳನ್ನು ಆಯ್ಕೆ ಮಾಡಿಕೊಂಡು ಕೋವಿಡ್ ತಪಾಸಣೆ ಮಾಡಲು ತಾಲೂಕು ಆಡಳಿತ ಮತ್ತು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಅಜೀಂ ಫೌಂಡೇಶನ್ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಕಿಟ್ ನೀಡಲಾಗಿದೆ. ಈಗಾಗಲೇ 33 ಗ್ರಾಪಂ ವ್ಯಾಪ್ತಿಯ ಕೆಲಗ್ರಾಮಗಳಲ್ಲಿ ತಪಾಸಣೆ ಮಾಡಲಾಗಿದೆ. ಒಟ್ಟಾರೆ ತಾಲೂಕನ್ನು ಕೊರೊನಾ ಮುಕ್ತವಾಗಿಸಲು ಆರೋಗ್ಯ ಇಲಾಖೆ, ತಾಲೂಕು ಆಡಳಿತ ಪಣ ತೊಟ್ಟಂತಿದೆ.
ವಾರದ ಸಂತೆ, ಸರಕಾರಿ ಕಚೇರಿಯಲ್ಲಿ ಕೋವಿಡ್ ತಪಾಸಣೆ ಮಾಡಲಾಗುತ್ತಿದೆ. ಗ್ರಾಪಂ. ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸುವ ಜತೆಗೆ ತಪಾಸಣೆ ಮಾಡಲಾಗಿದೆ. ಸೋಂಕು ದೃಢಪಟ್ಟಲ್ಲಿ ಹೋಂ ಐಸೋಲೆಷನ್ನಲ್ಲಿ 11 ದಿನ ಚಿಕಿತ್ಸೆ ಪಡೆಯಬೇಕು. ಖಾಸಗಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.- ಡಾ| ಬನದೇಶ್ವರ ತಾಲೂಕು ಆರೋಗ್ಯಾಧಿಕಾರಿ
-ನಾಗರಾಜ ತೇಲ್ಕರ್
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Manvi; A crocodile was spotted on the banks of the Tungabhadra river](https://www.udayavani.com/wp-content/uploads/2024/07/mosale-1-150x83.jpg)
Manvi; ತುಂಗಭದ್ರ ನದಿ ತೀರದಲ್ಲಿ ಕಾಣಿಸಿಕೊಂಡ ಮೊಸಳೆ
![Raichuru: ವಸತಿ ಶಾಲೆಯ ಊಟದಲ್ಲಿ ಹಲ್ಲಿ… 50 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/food-150x90.jpg)
Raichuru: ವಸತಿ ಶಾಲೆಯ ಊಟದಲ್ಲಿ ಹಲ್ಲಿ… 50 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
![Maski: ವಿದ್ಯುತ್ ಕಣ್ಣಾಮುಚ್ಚಾಲೆ, ಸರಕಾರಿ ಕೆಲಸ ಕಾರ್ಯಗಳಿಗೆ ಅಡ್ಡಿ, ಸಾರ್ವಜನಿಕರು ಹೈರಾಣು](https://www.udayavani.com/wp-content/uploads/2024/07/maski-150x78.jpg)
Maski: ವಿದ್ಯುತ್ ಕಣ್ಣಾಮುಚ್ಚಾಲೆ, ಸರಕಾರಿ ಕೆಲಸ ಕಾರ್ಯಗಳಿಗೆ ಅಡ್ಡಿ, ಸಾರ್ವಜನಿಕರು ಹೈರಾಣು
![Sindhanur; ಎಂಎಲ್ಸಿ ಬಾದರ್ಲಿ ಸ್ವಾಗತ ಕಮಾನು ಕುಸಿದು ಮೂವರಿಗೆ ಗಾಯ](https://www.udayavani.com/wp-content/uploads/2024/07/badarli-150x83.jpg)
Sindhanur; ಎಂಎಲ್ಸಿ ಬಾದರ್ಲಿ ಸ್ವಾಗತ ಕಮಾನು ಕುಸಿದು ಮೂವರಿಗೆ ಗಾಯ
![1-wffsdf](https://www.udayavani.com/wp-content/uploads/2024/07/1-wffsdf-150x103.jpg)
Maski: ಭೂವಿವಾದದಿಂದ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಗೆ ಗ್ರಹಣ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.