ಸಂತೆ-ಸರ್ಕಾರಿ ಕಚೇರಿಗೆ ಬರುವವರಿಗೂ ಕೋವಿಡ್ ಟೆಸ್ಟ್‌!


Team Udayavani, Oct 3, 2020, 3:41 PM IST

ಸಂತೆ-ಸರ್ಕಾರಿ ಕಚೇರಿಗೆ ಬರುವವರಿಗೂ ಕೋವಿಡ್ ಟೆಸ್ಟ್‌!

ದೇವದುರ್ಗ: ಮಿನಿ ವಿಧಾನಸೌಧದಲ್ಲಿ ಕೋವಿಡ್‌ ತಪಾಸಣೆ ಮಾಡಲಾಯಿತು.

ದೇವದುರ್ಗ: ತಾಲೂಕಿನಾದ್ಯಂತ ಕೋವಿಡ್ ಪಾಸಿಟಿವ್‌ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರ ಪತ್ತೆಗೆ ತಾಲೂಕು ಆಡಳಿತ ಸರ್ಕಾರಿ ಕಚೇರಿ, ವಾರದ ಸಂತೆಗೆಬರುವ ಪ್ರತಿಯೊಬ್ಬರಿಗೂ ಕೊರೊನಾ ಟೆಸ್ಟ್‌ ಮಾಡುತ್ತಿದೆ.

ಅತಿ ಹೆಚ್ಚು ಪ್ರಕರಣಗಳು: ದೇವದುರ್ಗ ತಾಲೂಕಲ್ಲಿ ಸೆಪ್ಟೆಂಬರ್‌ ಒಂದೇ ತಿಂಗಳಲ್ಲಿ 543 ಕೋವಿಡ್ ಪಾಸಿಟಿವ್‌ ಕೇಸ್‌ ಪತ್ತೆಯಾಗಿವೆ.  ಇದರಲ್ಲಿ ದೇವದುರ್ಗ ಪಟ್ಟಣ ಮತ್ತು ಜಾಲಹಳ್ಳಿ ಗ್ರಾಮದಲ್ಲೇ ಹೆಚ್ಚು ಜನರಿಗೆ ಸೋಂಕು ತಗುಲಿದೆ. ಅರಕೇರಾ, ಗಬ್ಬೂರು ಗ್ರಾಮದಲ್ಲಿ ಕಡಿಮೆ ಸೋಂಕಿತರು ಪತ್ತೆಯಾಗಿದ್ದಾರೆ. ಕೋವಿಡ್‌ ಚಿಕಿತ್ಸೆ ಕೇಂದ್ರದಲ್ಲಿ 16 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 14 ಜನ ಖಾಸಗಿ ಆಸ್ಪತ್ರೆಯಲ್ಲಿ,124 ಜನ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 300ಕ್ಕೂ ಹೆಚ್ಚು ಜನ ಗುಣಮುಖರಾಗಿದ್ದು, ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದವರು ಹೋಂ ಕ್ವಾರಂಟೈನ್‌ ಆಗಿದ್ದಾರೆ.

ಸಂತೆಯಲ್ಲಿ ತಪಾಸಣೆ: ಕೋವಿಡ್ ಸೋಂಕು ತಡೆಗೆ ತಾಲೂಕು ಆಡಳಿತ ಮತ್ತು ಆರೋಗ್ಯ ಇಲಾಖೆ ವಾರದ ಸಂತೆ ಮತ್ತು ಸರ್ಕಾರಿ ಕಚೇರಿಗೆ ಆಗಮಿಸುವವರ ತಪಾಸಣೆ ಮಾಡುತ್ತಿದೆ. ಬುಧವಾರ ಗಾಣಧಾಳ ಸಂತೆಯಲ್ಲಿ ಜನರ ತಪಾಸಣೆ ನಡೆಸಲಾಯಿತು. ಅರಕೇರಾ, ಜಾಲಹಳ್ಳಿ, ಗಲಗ, ಮುಂಡರಗಿ, ದೇವದುರ್ಗ ಪಟ್ಟಣ ಸೇರಿ ತಾಲೂಕಿನಲ್ಲಿ ನಡೆಯುವ ವಾರದ ಸಂತೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಇನ್ನು ಸರ್ಕಾರಿ ಕಚೇರಿಗೆ ಆಗಮಿಸುವವರಿಗೆ ಕೋವಿಡ್ ಪರೀಕ್ಷೆಗೆ ಒಳಪಟ್ಟ ನಂತರವೇ ಅವರ ಕೆಲಸ ಮಾಡಿಸಿಕೊಳ್ಳಲು ಅನುಮತಿ ನೀಡಲಾಗುತ್ತಿದೆ. ಜಿಲ್ಲಾಡಳಿತ ಸೂಚನೆಯಂತೆ ಇಲ್ಲಿನ ಅಧಿಕಾರಿಗಳು ತಪಾಸಣೆಗೆ ಮುಂದಾಗಿದ್ದಾರೆ.

ತಂಡ ರಚನೆ: ಕೋವಿಡ್ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆಯಿಂದ ಲ್ಯಾಬ್‌ ಸಿಬ್ಬಂದಿ ಸ್ಟಾಫ್‌ನರ್ಸ್‌ ಸೇರಿ ಮೂರು ತಂಡ ರಚಿಸಲಾಗಿದೆ. ಪಟ್ಟಣದಲ್ಲಿ ಶನಿವಾರ ಸಂತೆ ನಡೆಯುತ್ತದೆ. ಬೇರೆ ಬೇರೆ ತಾಲೂಕಿನಿಂದ ಹೆಚ್ಚು ಜನ ಬರುವ ಹಿನ್ನೆಲೆಯಲ್ಲಿ ಪರೀಕ್ಷೆಗೆ ಎರಡು ತಂಡ ರಚಿಸಲಾಗಿದೆ. ಖಾಸಗಿ ಆಸ್ಪತ್ರೆಗೆ ಆಗಮಿಸುವ ರೋಗಿಗಳ ಕೋವಿಡ್‌ ತಪಾಸಣೆಗೂ ಸಿಬ್ಬಂದಿ ನಿಯೋಜಿಸಲಾಗಿದೆ.

ಹಳ್ಳಿಗಳ ಆಯ್ಕೆ ಚಿಂತನೆ: ಜಾಲಹಳ್ಳಿ, ಅರಕೇರಾ, ಗಬ್ಬೂರು, ಗಲಗ ಸೇರಿ ಹೋಬಳಿ ವ್ಯಾಪ್ತಿಯ ದೊಡ್ಡ ಹಳ್ಳಿಗಳನ್ನು ಆಯ್ಕೆ ಮಾಡಿಕೊಂಡು ಕೋವಿಡ್‌ ತಪಾಸಣೆ ಮಾಡಲು ತಾಲೂಕು ಆಡಳಿತ ಮತ್ತು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಅಜೀಂ ಫೌಂಡೇಶನ್‌ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಕಿಟ್‌ ನೀಡಲಾಗಿದೆ. ಈಗಾಗಲೇ 33 ಗ್ರಾಪಂ ವ್ಯಾಪ್ತಿಯ ಕೆಲಗ್ರಾಮಗಳಲ್ಲಿ ತಪಾಸಣೆ ಮಾಡಲಾಗಿದೆ. ಒಟ್ಟಾರೆ ತಾಲೂಕನ್ನು ಕೊರೊನಾ ಮುಕ್ತವಾಗಿಸಲು ಆರೋಗ್ಯ ಇಲಾಖೆ, ತಾಲೂಕು ಆಡಳಿತ ಪಣ ತೊಟ್ಟಂತಿದೆ.

ವಾರದ ಸಂತೆ, ಸರಕಾರಿ ಕಚೇರಿಯಲ್ಲಿ ಕೋವಿಡ್‌ ತಪಾಸಣೆ ಮಾಡಲಾಗುತ್ತಿದೆ. ಗ್ರಾಪಂ. ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸುವ ಜತೆಗೆ ತಪಾಸಣೆ ಮಾಡಲಾಗಿದೆ. ಸೋಂಕು ದೃಢಪಟ್ಟಲ್ಲಿ ಹೋಂ ಐಸೋಲೆಷನ್‌ನಲ್ಲಿ 11 ದಿನ ಚಿಕಿತ್ಸೆ ಪಡೆಯಬೇಕು. ಖಾಸಗಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.- ಡಾ| ಬನದೇಶ್ವರ ತಾಲೂಕು ಆರೋಗ್ಯಾಧಿಕಾರಿ

 

-ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.