ಪದವಿ ವಿದ್ಯಾರ್ಥಿಗಳಿಗೆ “ಪರೀಕ್ಷಾ ಭೀತಿ’


Team Udayavani, Nov 22, 2020, 5:34 PM IST

ಪದವಿ ವಿದ್ಯಾರ್ಥಿಗಳಿಗೆ “ಪರೀಕ್ಷಾ ಭೀತಿ’

ರಾಯಚೂರು: ಕಷ್ಟಪಟ್ಟು ಓದಿದರೂ ಪರೀಕ್ಷೆ ಎಂದರೆ ಭಯ ಪಟ್ಟುಕೊಳ್ಳುತ್ತಿದ್ದ ವಿದ್ಯಾರ್ಥಿಗಳು ಈಗ ಕೋವಿಡ್‌-19 ಪರೀಕ್ಷೆ= ಮಾಡಿಸಿಕೊಳ್ಳಲು ಭಯ ಪಡುತ್ತಿದ್ದಾರೆ.

ಕಾಲೇಜಿಗೆ ಬರಲು ಕೋವಿಡ್‌-19 ಪರೀಕ್ಷಾ ವರದಿ ಕಡ್ಡಾಯಗೊಳಿಸಿರುವ ಸರ್ಕಾರದನಿಯಮದಿಂದ ಕಾಲೇಜಿನತ್ತ ಯಾವೊಬ್ಬ ವಿದ್ಯಾರ್ಥಿ ಕೂಡ ಸುಳಿಯದಂತಾಗಿದೆ. ಶುರುವಾಗಿ ನಾಲ್ಕು ದಿನ ಕಳೆದರೂ ನಗರದ ಬಹುತೇಕ ಕಾಲೇಜುಗಳು ವಿದ್ಯಾರ್ಥಿಗಳಿಲ್ಲದೇ ಭಣಗುಡುತ್ತಿವೆ. ಇಲ್ಲಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿಗಳಿದ್ದರೂಶನಿವಾರ ಕೇವಲ ನಾಲ್ಕು ವಿದ್ಯಾರ್ಥಿನಿಯರು ಮಾತ್ರ ಆಗಮಿಸಿದ್ದರು. ಮೊದಲ ದಿನ ಬಂದಿದ್ದಎಂಕಾಂ ವಿದ್ಯಾರ್ಥಿನಿ ಕೂಡ ಸಹಪಾಠಿಗಳಿಲ್ಲದೇ ಬರುವುದನ್ನು ನಿಲ್ಲಿಸಿದ್ದಾರೆ. ಇನ್ನೂ ಬಿಎ ವಿದ್ಯಾರ್ಥಿಗಳಂತೂ ಕಾಲೇಜಿನತ್ತ ಸುಳಿದೇ ಇಲ್ಲ. ಅದು ಮಾತ್ರವಲ್ಲ ಬೇರೆ ಕಾಲೇಜುಗಳಿಗೂ ಮಕ್ಕಳು ಸುಳಿಯುತ್ತಿಲ್ಲ. ಇದರಿಂದ ಕಾಲೇಜುಗಳಲ್ಲಿ ಬೋಧಕರು ವಿದ್ಯಾರ್ಥಿಗಳಿಗಾಗಿ ಕಾದು ಕೂಡುವಂತಾಗಿದೆ. ಕಾಲೇಜಿಗೆ ಬರುತ್ತಾರಾದರೂ ಏನು ಬೇಕು ಎಂದು ವಿಚಾರಿಸಿಕೊಂಡು ಮರಳಿ ಹೋಗುತ್ತಾರೆ. ಮತ್ತೆ ಸುಳಿಯವುದೆ ಇಲ್ಲ.

ಪರೀಕ್ಷೆಗೆ ನಿರಾಸಕ್ತಿ: ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಲು ವಿದ್ಯಾರ್ಥಿಗಳಲ್ಲಿ ಸಂಪೂರ್ಣ ನಿರಾಸಕ್ತಿ ಕಂಡು ಬರುತ್ತಿದೆ. ಜಿಲ್ಲಾಡಳಿತ ನೀಡುವ ವರದಿಯಲ್ಲಿ ಹೆಚ್ಚು ಪರೀಕ್ಷೆ ನಡೆಸಿರುವ ಮಾಹಿತಿ ಇಲ್ಲ. ಪರೀಕ್ಷೆ ಮಾಡಿಸಿಕೊಳ್ಳಲು ಹೋಗುವ ವಿದ್ಯಾರ್ಥಿಗಳು ಕೂಡ ನಮಗೆ ನೆಗೆಟಿವ್‌ ವರದಿ ಕೊಡಿ ಎಂದು ಕೇಳುತ್ತಿದ್ದಾರೆ. ಪರೀಕ್ಷೆಯೇ ಮಾಡಿಸಿಕೊಳ್ಳದೆ ವರದಿ ನೀಡಲ್ಲ ಎಂದು ಆರೋಗ್ಯ ಇಲಾಖೆ ಸಿಬ್ಬಂದಿ ಹೇಳಿದರೆ ಪರೀಕ್ಷೆಗೊಳಪಡದೆ ಹಿಂದಿರುಗುತ್ತಿದ್ದಾರೆ. ಇನ್ನು ಪಾಲಕರು ಕೂಡಮಕ್ಕಳು ಕಾಲೇಜಿಗೆ ಹೋಗುವುದು ಬೇಡ ಎನ್ನುವ ರೀತಿಯಲ್ಲೇ ಮಾತನಾಡುತ್ತಿದ್ದಾರೆ. ಇದರಿಂದ ಕಾಲೇಜುಗಳು ಭಣ ಭಣ ಎನ್ನುವಂತಾಗಿದೆ.

ಆನ್‌ಲೈನ್‌ ಕ್ಲಾಸ್‌ಗೆ ಒತ್ತು: ನಾಲ್ಕು ದಿನ ಕಳೆದರೂ ವಿದ್ಯಾರ್ಥಿಗಳ ಸುಳಿವಿಲ್ಲದ್ದನ್ನು ಅರಿತ ಕಾಲೇಜಿನ ಆಡಳಿತ ಮಂಡಳಿಗೂ ಆನ್‌ಲೈನ್‌ ಕ್ಲಾಸ್‌ಗಳಿಗೆ ವಿಶೇಷ ಒತ್ತು ನೀಡುತ್ತಿವೆ. ಎಲ್ಲ ಬೋಧಕರಿಗೆ ಆನ್‌ಲೈನ್‌ ಕ್ಲಾಸ್‌ಗಳನ್ನು ಕಡ್ಡಾಯವಾಗಿನಡೆಸುವಂತೆತಿಳಿಸಲಾಗಿದೆ. ವಾಟ್ಸ್‌ಆ್ಯಪ್‌ ಗ್ರೂಪ್‌ ಗಳಿವೆ. ಬೋಧನೆ ಮಾಡಿದ ವಿಡಿಯೋಗಳನ್ನುಕಳುಹಿಸಲಾಗುತ್ತಿದೆ. ಈಗಾಗಲೇ ಸಂಬಂ ಧಿಸಿದ ತರಗತಿಗಳು ಬೋಧಕರು ವಿದ್ಯಾರ್ಥಿಗಳ ವಾಟ್ಸ್‌ ಆ್ಯಪ್‌ ಗ್ರೂಪ್‌ಗ್ಳಲ್ಲೇ ಸಂವಹನ ನಡೆಸುತ್ತಿದ್ದಾರೆ.

ವರದಿಯೇ ಬಂದಿಲ್ಲ: ನಗರದ ಸರ್ಕಾರಿ ಪದವಿ ಕಾಲೇಜಿನ ಬೋಧಕ ವೃಂದದವರ ಕೋವಿಡ್‌-19 ಪರೀಕ್ಷಾ ವರದಿ ಇನ್ನೂ ನೀಡಿಲ್ಲ. 26 ಕಾಯಂಉಪನ್ಯಾಸಕರು, 10 ಅತಿಥಿ ಉಪನ್ಯಾಸಕರು,ಬೋಧಕೇತ ಸಿಬ್ಬಂದಿ ಸೇರಿದಂತೆ 40ಕ್ಕೂ ಅಧಿಕ ಸಿಬ್ಬಂದಿ ಇದ್ದಾರೆ. ನ.13ರಂದು ಕಾಲೇಜಿನಲ್ಲಿ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿ ಪರೀಕ್ಷೆಗೆ ಒಳಪಟ್ಟಿದ್ದಾರೆ. ಈವರೆಗೂ ವರದಿ ನೀಡಿಲ್ಲ

ನಾಲ್ಕು ದಿನ ಕಳೆದರೂ ವಿದ್ಯಾರ್ಥಿಗಳು ಬರದಿರುವುದು ಅಚ್ಚರಿ ಮೂಡಿಸಿದೆ. ಸಾವಿರಾರು ವಿದ್ಯಾರ್ಥಿಗಳಿದ್ದು, ನಾಲ್ಕು ಜನ ಬಂದಿದ್ದಾರೆ.ಪರೀಕ್ಷೆ ಮಾಡಿಸಿಕೊಳ್ಳಲು ಹೆದರಿದ್ದು, ಮನೆಯಲ್ಲಿ ಪಾಲಕರು ಒಪ್ಪಿಗೆ ನೀಡುತ್ತಿಲ್ಲ. ಹೀಗಾಗಿ ಆನ್‌ಲೈನ್‌ ತರಗತಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದೇವೆ. ಪ್ರೊ| ಮಲ್ಲನಗೌಡ, ಪ್ರಾಚಾರ್ಯ, ಸರ್ಕಾರಿ ಪದವಿ ಕಾಲೇಜ್‌.

ಕೋವಿಡ್‌-19 ಪರೀಕ್ಷೆಗೆ ವಿಶೇಷ ಕೇಂದ್ರ ಆರಂಭಿಸಿಲ್ಲ.ಆಯಾ ತಾಲೂಕು ಆಸ್ಪತ್ರೆಗಳಲ್ಲಿ ಪರೀಕ್ಷೆ ಮಾಡಿಸಿಕೊಂಡರೆ ವರದಿ ನೀಡಲಾಗುವುದು. ಮಾದರಿಗಳ ಸಂಗ್ರಹದ ಸಂಖ್ಯೆಯಲ್ಲಿ ವ್ಯತ್ಯಾಸ ಕಂಡು ಬರುತ್ತಿಲ್ಲ.ನಿತ್ಯ ಒಂದು ಸಾವಿರ ಮಾದರಿಗಳ ಪರೀಕ್ಷೆ ಮಾಡುವ ಸಾಮರ್ಥ್ಯದ ಯಂತ್ರಗಳಿದ್ದು, ವಿಳಂಬವಾಗಲ್ಲ. ಡಾ|ಬಸವರಾಜ್‌ ಪೀರಾಪುರೆ, ರಿಮ್ಸ್‌ ನಿರ್ದೇಶಕ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.