ಕೋವಿಡ್‌ ಸೋಂಕಿತರ ಸಂಖ್ಯೆ ಕ್ಷೀಣ


Team Udayavani, Nov 13, 2020, 9:06 PM IST

ಕೋವಿಡ್‌ ಸೋಂಕಿತರ ಸಂಖ್ಯೆ ಕ್ಷೀಣ

ರಾಯಚೂರು: ಕೆಲ ದಿನಗಳ ಹಿಂದೆ ನಿತ್ಯ ನೂರರ ಗಡಿ ದಾಡುತ್ತಿದ್ದ ಕೋವಿಡ್ ಪಾಸಿಟಿವ್‌ಪ್ರಕರಣಗಳ ಸಂಖ್ಯೆ ಈಗ ಒಂದಂಕಿಗೆ ಬಂದುತಲುಪಿದೆ. ಶಂಕಿತರ ಪರೀಕ್ಷೆ ಯಥಾ ರೀತಿ ನಡೆದಿದ್ದರೂ ಸೋಂಕಿತರ ಸಂಖ್ಯೆ ದಿನೇ ದಿನೆ ಇಳಿಮುಖವಾಗುತ್ತಿರುವುದು ತುಸು ಸಮಾಧಾನ ತಂದಿದೆ.

ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 153 ತಲುಪಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಇದು ಕಡಿಮೆಯಾದರೂ ಜಿಲ್ಲೆಯ ಜನರ ಆತಂಕ ಸೃಷ್ಟಿಸಿದ್ದು ಸುಳ್ಳಲ್ಲ. ಜಿಲ್ಲೆಯ ಜನಪ್ರತಿನಿಧಿ ಗಳೇ ನಮಗೆ ಕೊರೊನಾ ಸೋಂಕು ತಗುಲಿದೆ ಎಂಬ ಹೇಳಿಕೆ ನೀಡಿದಾಗ; ಜನಸಾಮಾನ್ಯರ ಕತೆ ಏನು? ಎಂಬ ಚರ್ಚೆಯೂ ನಡೆಯುತ್ತಿತ್ತು. ಆದರೆ, ಈಗಿನ ಪರಿಸ್ಥಿತಿ ಅವಲೋಕಿಸುತ್ತಿದ್ದರೆ, ನಿಟ್ಟುಸಿರು ಬಿಡುವಂತಾಗಿದೆ.

ಕಳೆದ ಕೆಲ ದಿನಗಳಿಂದ ಸಾವಿನ ಸಂಖ್ಯೆಯಲ್ಲೂ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಆದರೆ, ಆರಂಭದಲ್ಲಿ ನಿತ್ಯ 3-4 ಸಾವು ಸಂಭವಿಸುತ್ತಿದ್ದು,ಈಗ ಕುಗ್ಗಿದೆ. ಒಂದೆರಡು ತಿಂಗಳ ಹಿಂದೆ ನಿತ್ಯ ಮೂರಂಕಿ ದಾಡುತ್ತಿದ್ದ ಸೋಂಕಿತರ ಸಂಖ್ಯೆ ಈಗ ಒಂದಂಕಿಗೆ ಬಂದಿದೆ. ಇದೇ ಸ್ಥಿತಿ ಮುಂದುವರಿದಲ್ಲಿ ಜಿಲ್ಲೆ ಸೋಂಕುಮುಕ್ತವಾದರೂ ಅಚ್ಚರಿಪಡಬೇಕಿಲ್ಲ.ಚಳಿಗಾಲ ಸಮೀಪಿಸುತ್ತಿರುವ ಈ ಹೊತ್ತಲ್ಲಿ ಕೋವಿಡ್ ಸೋಂಕು ಹೆಚ್ಚಾಗಬಹುದೇ ಎಂಬ ಆತಂಕವೂ ಹೆಚ್ಚಾಗಿದೆ. ನೆಗಡಿಯಂಥ ಸಾಂಕ್ರಾಮಿಕ ಈಗ ಹೆಚ್ಚಾಗಿ ಹರಡುವ ಸಾಧ್ಯತೆಯಿದ್ದು, ಆತಂಕ ಹೆಚ್ಚಿಸಿರುವುದು ನಿಜ ಎನ್ನುತ್ತಾರೆ ಆರೋಗ್ಯ ಇಲಾಖೆ ಅಧಿಕಾರಿಗಳು.

ಹೀಗಿದೆ ಕೋವಿಡ್ ಹಿನ್ನೆಲೆ: ಜಿಲ್ಲೆಗೆ ತಡವಾಗಿ ಪ್ರವೇಶಿಸಿದ ಕೋವಿಡ್ ಕ್ರಮೇಣ ಶರವೇಗದಲ್ಲಿ ಹರಡಿತು. ಅದರಲ್ಲೂ ಮುಂಬೈ ವಲಸಿಗರದಿಂದಪಾಸಿಟಿವ್‌ ಪ್ರಕರಣಗಳ ಸಂಖ್ಯೆ ನಿತ್ಯ ದ್ವಿಶತಕ, ತ್ರಿಶತಕ ತಲುಪಿತು. ಜನರಲ್ಲೂ ಸೋಂಕಿನ ಭೀತಿ ಹೆಚ್ಚಿದಂತೆ ಮುನ್ನೆಚ್ಚರಿಕೆ ವಹಿಸಿದ್ದರಿಂದ ಪರಿಸ್ಥಿತಿ ತಹಬದಿಗೆ ಬಂತು. ಈವರೆಗೆ ಜಿಲ್ಲೆಯಲ್ಲಿ 13,474 ಮಂದಿಗೆ ಕೋವಿಡ್ ಪಾಸಿಟಿವ್‌ ದೃಢಪಟ್ಟಿದೆ. ಅದರಲ್ಲಿ 13,160 ಜನ ಸಂಪೂರ್ಣಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈವರೆಗೆ 1,68,204 ಜನರ ಮಾದರಿ ಪರೀಕ್ಷೆಗೆ ಕಳುಹಿಸಿದ್ದು, ಅದರಲ್ಲಿ 1,52,869 ವರದಿ ನೆಗೆಟಿವ್‌ ಆಗಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಜೀವನಕ್ರಮ ಬದಲು :  ಆರಂಭದಲ್ಲಿ ಕೋವಿಡ್ ಬಗ್ಗೆ ಅಸಡ್ಡೆ ತೋರಿದ ಜನ ಸೋಂಕಿನ ತೀವ್ರತೆ ಹೆಚ್ಚುತ್ತಿದ್ದಂತೆ ಎಚ್ಚರಿಕೆ ವಹಿಸಲಾರಂಭಿಸಿದರು. ಮಾಸ್ಕ್ ಧರಿಸದೆ ಹೊರ ಬರುವುದೇ ವಿರಳ ಎನ್ನುವಂತಾಯಿತು. ಮಾಸ್ಕ್ ಹಾಕದಿದ್ದರೆ ಪೊಲೀಸರು ದಂಡ ಹಾಕುತ್ತಾರೆ ಎನ್ನುವ ಭಯಕ್ಕಾದರೂ ಅನೇಕರು ಮಾಸ್ಕ್ ಹಾಕಿದರು. ದೇಹದ ಉಷ್ಣಾಂಶ ಹೆಚ್ಚಿಸುವಂಥ ಕಷಾಯ, ಪೇಯಗಳಿಗೆ ಜನ ಮೊರೆ ಹೋಗಿದ್ದು ವಿಶೇಷ. ಆಯುಷ್‌ ಇಲಾಖೆಯಲ್ಲಿ ನೀಡುವ ಕಷಾಯಚೂರ್ಣಕ್ಕೆ ಎಲ್ಲಿಲ್ಲದ ಬೇಡಿಕೆ ಬಂದಿದ್ದು ಗಮನಾರ್ಹ.

ಚಳಿಗಾಲದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದೆ ಎಂದು ನಿಖರವಾಗಿ ಹೇಳಲು ಆಗುವುದಿಲ್ಲ. ಸಾಮಾನ್ಯವಾಗಿ ಈ ಕಾಲದಲ್ಲಿ ನೆಗಡಿ, ಕೆಮ್ಮು ಜ್ವರ ಹೆಚ್ಚಾಗುತ್ತದೆ. ಇದರಿಂದ ಸೋಂಕು ಕೂಡ ಹರಡಬಹುದು. ಮುಖ್ಯವಾಗಿ ಜನ ದೇಹದಲ್ಲಿ ಉಷ್ಣಾಂಶ ಹೆಚ್ಚಿಸುವಂಥ ಆಹಾರ ಸೇವನೆ ಮಾಡಬೇಕು. ಹೊರಗೆ ಅನಗತ್ಯ ಓಡಾಟ ಮಾಡದಿರುವುದೇ ಸೂಕ್ತ.  -ಡಾ| ರಾಮಕೃಷ್ಣ, ಜಿಲ್ಲಾ ಆರೋಗ್ಯಾಧಿಕಾರಿ, ರಾಯಚೂರು

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.